Video: ಬುಡಕಟ್ಟು ವ್ಯಕ್ತಿಯ ಮೇಲೆ ಮೂರ್ತವಿಸರ್ಜನೆ- ವ್ಯಾಪಕ ಆಕ್ರೋಶ
Team Udayavani, Jul 5, 2023, 7:30 AM IST
ಭೋಪಾಲ್: ಬುಡಕಟ್ಟು ಸಮುದಾಯದ ಕಾರ್ಮಿಕರೊಬ್ಬರ ಮೇಲೆ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿರುವ ಅಮಾನವೀಯ ಘಟನೆ ಮಧ್ಯಪ್ರದೇಶದ ಸಿದ್ದಿ ಜಿಲ್ಲೆಯಲ್ಲಿ ವರದಿಯಾಗಿದೆ. ಅಲ್ಲದೇ, ವ್ಯಕ್ತಿಯ ಈ ಅನಾಗರಿಕ ವರ್ತನೆಯ ವಿಡಿಯೋ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು , ಘಟನೆ ಬಗ್ಗೆ ತೀವ್ರ ಆಕ್ರೋಶವೂ ವ್ಯಕ್ತವಾಗಿದೆ.
ಪ್ರವೇಶ್ ಶುಕ್ಲಾ ಎಂಬಾತನು ಬುಡಕಟ್ಟು ಕಾರ್ಮಿಕರಾದ ಪಲೇಕೋಲ್ ಎಂಬವರ ಮೇಲೆ ಮೂತ್ರ ವಿರ್ಸರ್ಜಿಸಿ, ಅದನ್ನು ವಿಡಿಯೋ ಕೂಡ ಮಾಡಿದ್ದ. 6 ದಿನಗಳ ಹಿಂದಿನ ವಿಡಿಯೋ ಈಗ ಜಾಲತಾಣದಲ್ಲಿ ವೈರಲ್ ಆದ ಬಳಿಕ, ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರ ಗಮನಕ್ಕೂ ಬಂದಿದೆ. ಕೂಡಲೇ ಆರೋಪಿಯನ್ನು ಬಂಧಿಸಿ ಆತನ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ ಅನ್ವಯ ಕೇಸು ದಾಖಲಿಸಲು ಸಿಎಂ ಪೊಲೀಸರಿಗೆ ಆದೇಶಿಸಿದ್ದಾರೆ.
ಈ ಬಗ್ಗೆ ಎಚ್ಚೆತ್ತುಕೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಪ್ರವೇಶ್ ಶುಕ್ಲಾನನ್ನು ಬಂಧಿಸಿದ್ದಾರೆ. ಕೃತ್ಯವೆಸಗಿರುವ ವ್ಯಕ್ತಿ ಬಿಜೆಪಿ ಶಾಸಕ ಕೇದಾರ್ ಶುಕ್ಲಾ ಅವರ ಆಪ್ತ ಎಂದು ರಾಜ್ಯದ ಪ್ರತಿಪಕ್ಷಗಳು ಆರೋಪಿಸಿವೆ. ಇದಲ್ಲದೆ ಕೇದಾರ್ ಶುಕ್ಲಾ ಆರೋಪಿ ಜೊತೆಗಿನ ಫೋಟೋವನ್ನು ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ ಈ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಎಂದು ಬಿಜೆಪಿ ಹೇಳಿದೆ.
ಆದರೆ, ಪ್ರವೇಶ್ ಶುಕ್ಲಾ ಅವರ ತಂದೆ ರಮಾಕಾಂತ್ ಶುಕ್ಲಾ ತನ್ನ ಮಗ ಕೇದಾರ್ ಶುಕ್ಲಾ ಅವರ ಪ್ರತಿನಿಧಿ ಎಂದು ಹೇಳಿದ್ದಾರೆ. ‘‘ಅವರು ಬಿಜೆಪಿ ಶಾಸಕರ ಪ್ರತಿನಿಧಿಯಾಗಿರುವುದರಿಂದ ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗುತ್ತಿದ್ದಾರೆ” ಎಂದಿದ್ದಾರೆ.
मध्यप्रदेश में अमानवीयता की हदें पार, आदिवासी युवक के चेहरे पर किया गया पेशाब। अपराधी व्यक्ति भाजपा का कार्यकर्ता प्रवेश शुक्ला बताया जा रहा है. वीडियो सोशल मीडिया पर वायरल…@MPDial100 @ChouhanShivraj pic.twitter.com/lkL5Ss11dj
— Dalit Times | दलित टाइम्स (@DalitTime) July 4, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!