ಭಾರತ-ಇಂಗ್ಲೆಂಡ್ ಹೊಸ ಒಪ್ಪಂದದ ಪರಿಣಾಮ ನೀರವ್, ಮಲ್ಯ ಗಡೀಪಾರು ಇನ್ನು ಸಲೀಸು
Team Udayavani, May 11, 2021, 9:56 PM IST
ಲಂಡನ್: ಭಾರತದಲ್ಲಿ ಭಾರೀ ಹಣಕಾಸು ಅವ್ಯವಹಾರ ನಡೆಸಿ ಇಂಗ್ಲೆಂಡ್ಗೆ ಪರಾರಿಯಾಗಿರುವ ವಿಜಯ್ ಮಲ್ಯ ಮತ್ತು ನೀರವ್ ಮೋದಿ ಗಡೀಪಾರು ಪ್ರಕ್ರಿಯೆ ಇನ್ನಷ್ಟು ಸಲೀಸಾಗಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವೆ ಆಗಿರುವ ಹೊಸ “ವಲಸೆ ಮತ್ತು ಸಂಚಾರ ಸಹಯೋಗ ಒಪ್ಪಂದ’ (ಎಂಎಂಪಿ) ಈ ರೀತಿಯ ಆಶಾವಾದಕ್ಕೆ ಕಾರಣ. ಈ ಒಪ್ಪಂದದಿಂದ ವಲಸೆ ವಿವಾದಗಳನ್ನು ಇತ್ಯರ್ಥಪಡಿಸಲು ನೆರವಾಗಲಿದೆ. ಹಾಗೆಯೇ ಎರಡೂ ದೇಶಗಳ ನಡುವೆ ಗಡೀಪಾರು ಪ್ರಕ್ರಿಯೆ ಇನ್ನಷ್ಟು ಸುಗಮಗೊಳ್ಳಲಿದೆ ಎಂದು ಇಂಗ್ಲೆಂಡ್ ಗೃಹ ಸಚಿವೆ ಪ್ರೀತಿ ಪಟೇಲ್ ಹೇಳಿದ್ದಾರೆ.
ಕಿಂಗ್ಫಿಶರ್ ಏರ್ಲೈನ್ಸ್ ಮಾಜಿ ಮಾಲಿಕ ವಿಜಯ್ ಮಲ್ಯ, ವಜ್ರದ ವ್ಯಾಪಾರಿ ನೀರವ್ ಮೋದಿ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಪ್ರೀತಿ ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ. ಆರ್ಥಿಕ ಅಪರಾಧಗಳ ಪ್ರಕರಣಗಳು ಸ್ವಲ್ಪ ಕಷ್ಟಕರ. ಮೇಲಿನಿಬ್ಬರ ಪ್ರಕರಣಗಳ ಬಗ್ಗೆ ನಾನು ಗೃಹಸಚಿವೆಯಾಗುವುದಕ್ಕೆ ಮುನ್ನವೇ ತಿಳಿದುಕೊಂಡಿದ್ದೇನೆ. ಇನ್ನು ಮುಂದೆ ಹಿಂದಿನ ಆತಂಕಗಳು ಇರುವುದಿಲ್ಲ.
ಇದನ್ನೂ ಓದಿ :ಮನೆಯಲ್ಲೇ ಮದುವೆಗೆ ಅವಕಾಶ ಹಿನ್ನೆಲೆ : ಲಾಕ್ಡೌನ್ ಅವಧಿಯಲ್ಲಿ ಬಾಲ್ಯವಿವಾಹ ಹೆಚ್ಚಳ ಆತಂಕ
ಕಾನೂನಿನ ಚೌಕಟ್ಟಿನಲ್ಲಿ ಬಗೆಹರಿಯಲಿವೆ ಎಂದು ಹೇಳಿದ್ದಾರೆ. ನೀರವ್ ಮೋದಿಯನ್ನು ಗಡೀಪಾರು ಮಾಡಲು ಪ್ರೀತಿ ಆದೇಶಿಸಿರುವುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ