ಲಾಕ್ ಡೌನ್ ನಲ್ಲಿ ನಕಲಿ ಐಡಿ ತಯಾರಿಸುತ್ತಿದ್ದ ಅಂಗಡಿ ಮೇಲೆ ದಾಳಿ: ಇಬ್ಬರ ಸೆರೆ
Team Udayavani, May 10, 2021, 11:22 PM IST
ಬೆಳಗಾವಿ: ಲಾಕ್ಡೌನ್ ಅವಧಿಯಲ್ಲಿ ಇಲ್ಲಿನ ಕಡೋಲ್ಕರ ಗಲ್ಲಿಯ ಅಂಗಡಿಯಲ್ಲಿ ನಕಲಿ ಗುರುತಿನ ಚೀಟಿಗಳನ್ನು ತಯಾರಿಸುತ್ತಿದ್ದ ವೇಳೆ ಡಿಸಿಪಿ ವಿಕ್ರಮ್ ಆಮಟೆ ನೇತೃತ್ವದಲ್ಲಿ ಸೋಮವಾರ ರಾತ್ರಿ ದಿಢೀರ್ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ವಿಶ್ವನಾಥ ಮುಚ್ಚಂಡಿ ಹಾಗೂ ರೋಹಿತ್ ಸುನೀಲ್ ಕುಟರೆ ಎಂಬಾತರನ್ನು ಬಂಧಿಸಲಾಗಿದೆ. ಲಾಕ್ ಡೌನ್ ಇದ್ದರೂ ‘ಮುಚ್ಚಂಡಿ ಪ್ರಿಂಟರ್ಸ್’ ಎನ್ನುವ ಅಂಗಡಿ ತೆರೆದಿದ್ದರು. ಬಂಧಿತರಿಂದ ಕಂಪ್ಯೂಟರ್, ಪ್ರಿಂಟರ್ ಸೇರಿದಂತೆ ಇತರೆ ಸಾಮಗ್ರಿಗಳು ಮತ್ತು ನಕಲಿ ಗುರುತಿನ ಚೀಟಿಗಳನ್ನು ವಶಕ್ಕೆ ಪಡೆಯಲಾಗಿದೆ.
ಲಾಕ್ ಡೌನ್ ವೇಳೆಯಲ್ಲಿ ಅಗತ್ಯ ಸೇವೆಗಳಲ್ಲಿ ಕೆಲಸ ಮಾಡುವವರಿಗೆ ಮಾತ್ರ ವಾಹನಗಳ ಸಂಚಾರಕ್ಕೆ ಅವಕಾಶ ಎಂಬುದನ್ನೇ ಬಳಸಿಕೊಂಡು, ನಕಲಿ ಗುರುತಿನ ಚೀಟಿಗಳನ್ನು ಇವರು ತಯಾರಿಸಿ ಕೊಡುತ್ತಿದ್ದರು. ಈಗಾಗಲೇ ಅನೇಕ ಗುರಿತಿನ ಚೀಟಿಗಳನ್ನು ತಯಾರಿಸಿ ಕೊಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ :ಅನಗತ್ಯವಾಗಿ ಓಡಾಡಿದವರಿಗೆ ಪೊಲೀಸರಿಂದ ಲಾಠಿ ಬಿಸಿ
ಇನ್ಸಪೆಕ್ಟರ್ ಧೀರಜ ಶಿಂಧೆ, ಪಿಎಸ್ಐ ಸೌದಾಗಾರ, ಎಎಸ್ಐ ಹುಂಡೇಕರ ಸೇರಿದಂತೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು. ಈ ಕುರಿತು. ಖಡೇಬಜಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ