ಜೀವಂತ ವ್ಯಕ್ತಿ ಹೆಸರಲ್ಲಿ ನಕಲಿ ಮರಣ ಪ್ರಮಾಣ ಪತ್ರ ಪ್ರಕರಣ: ಆರೋಪಿ 7 ದಿನ ಪೊಲೀಸ್ ಕಸ್ಟಡಿಗೆ


Team Udayavani, Jan 29, 2022, 7:30 PM IST

ಜೀವಂತ ವ್ಯಕ್ತಿಯ ಹೆಸರಿನಲ್ಲಿ ನಕಲಿ ಮರಣ ಪ್ರಮಾಣ ಪತ್ರ ಪ್ರಕರಣ : ಎರಡನೇ ಆರೋಪಿಯ ಸೆರೆ

ಭಟ್ಕಳ: ಜಾಲಿ ಪಟ್ಟಣ ಪಂಚಾಯತ್‌ನಲ್ಲಿ ಜಾಲಿ ಜಂಗನಗದ್ದೆಯ ನಕಲಿ ವಿಳಾಸವನ್ನು ನೀಡಿ ಜೀವಂತ ವ್ಯಕ್ತಿಯ ಹೆಸರಿನಲ್ಲಿ ಮರಣ ಪ್ರಮಾಣ ಪತ್ರವನ್ನು ಪಡೆದಿದ್ದ ಪ್ರಕರಣದಲ್ಲಿ ಎರಡನೇ ಆರೋಪಿ ಮರಣ ಪ್ರಮಾಣ ಪತ್ರದಲ್ಲಿ ಹೆಸರಿರುವ ಹಾಸನದ ಎಚ್.ವಿ. ಹರ್ಷವರ್ಧನ್ ಅವರನ್ನು ಇಲ್ಲಿನ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯ ತನಿಖೆಗಾಗಿ 7 ದಿನಗಳ ಪೊಲೀಸ್ ಕಸ್ಟಡಿ ನೀಡಿದೆ.

ಜಾಲಿ ಪಟ್ಟಣ ಪಂಚಾಯತ್‌ನಲ್ಲಿ ಮೀನಾಕ್ಷಿ ಬಿ.ಎಚ್. ಎನ್ನುವವರು ತಾನು ಎಚ್.ವಿ. ಹರ್ಷವರ್ಧನ ಈತನ ತಾಯಿಯಾಗಿದ್ದು ಆತನು ಜಾಲಿಯ ಜಂಗನಗದ್ದೆಯಲ್ಲಿ ವಾಸವಾಗಿರುವ ಭಾಡಿಗೆ ಮನೆಯಲ್ಲಿ ಮೃತ ಪಟ್ಟಿರುವುದಾಗಿ ಅರ್ಜಿ ಸಲ್ಲಿಸಿದ್ದು ನಂತರ ಅರ್ಜಿಯ ವಿಚಾರಣೆಯಾಗಿ, ಸ್ಥಳ ಪಂಚನಾಮೆಯಿಂದ ಆತ ಮೃತ ಪಟ್ಟಿರುವುದನ್ನು ದೃಢಪಡಿಸಿ ಆತನ ಮರಣ ಪ್ರಮಾಣ ಪತ್ರವನ್ನು ನೀಡಲಾಗಿತ್ತು. ನಂತರ ವಿಮಾ ಕಂಪೆನಿಗೆ ಅವರು ಅರ್ಜಿ ಸಲ್ಲಿಸಿ ವಿಮೆಯ ಹಣವನ್ನು ಪಡೆಯಲು ಪ್ರಯತ್ನಿಸಿದಾಗ ಮರಣ ಪ್ರಮಾಣ ಪತ್ರ ನಕಲಿ ಎನ್ನುವುದನ್ನು ಮನಗಂಡ ವಿಮಾ ಕಂಪೆನಿಯ ಮರಣ ಪ್ರಮಾಣ ಪತ್ರದ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಜಾಲಿ ಪಟ್ಟಣ ಪಂಚಾಯತಕ್ಕೆ ಪತ್ರ ಬರೆದಿದ್ದು ನಂತರ ಕೂಲಂಕುಷವಾಗಿ ಪರಿಶೀಲಿಸುವಾಗ ಮರಣ ಪ್ರಮಾಣ ಪತ್ರವೇ ನಕಲಿ ಎನ್ನುವುದು ಬೆಳಕಿಗೆ ಬಂದಿತ್ತು.

ಜಾಲಿ ಆರೋಗ್ಯ ನಿರೀಕ್ಷಕ ವಿನಾಯಕ ನಾಯ್ಕ ಅವರು ನಗರ ಠಾಣೆಯಲ್ಲಿ ಈ ಕುರಿತು ದೂರು ದಾಖಲಿಸಿದ್ದರು.

ಇದನ್ನೂ ಓದಿ : ಪ್ರೀತಿಸುವಂತೆ ಬಾಲಕಿಯನ್ನು ಪೀಡಿಸುತ್ತಿದ್ದ ಆರೋಪಿಗಳಿಗೆ  ಫೋಕ್ಸೋ ಕಾಯ್ದೆಯಡಿ ಶಿಕ್ಷೆ

ನಗರ ಠಾಣೆಯ ಪೊಲಿಸರು ಆರೋಪಿ ನಂ.1 ಮೀನಾಕ್ಷಿ ಬಿ.ಎಚ್, ಹಾಗೂ ಆರೋಪಿ ನಂ.2 ಎಚ್.ವಿ. ಹರ್ಷವರ್ಧನ ಇವರ ಮೇಲೆ 420 ರೆಡವಿತ್ ಐ.ಪಿ.ಸಿ. ಸೆಕ್ಷನ್ 34 ಹಾಗೂ ಸೆಕ್ಷನ್ 465, 468 ರೆಡ್‌ವಿತ್ 120(ಬಿ)ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯು ಈಗಾಗಲೇ ಪ್ರಕರಣವೊಂದರಲ್ಲಿ ಮೈಸೂರು ಸೆಂಟ್ರಲ್ ಜೈಲ್‌ನಲ್ಲಿದ್ದು ಬಾಡಿ ವಾಟಂಟ್ ಹೊರಡಿಸಿ ಆತನನ್ನು ಹಾಜರು ಪಡಿಸಲಾಗಿದ್ದು ವಿಚಾರಣೆ ನಡೆಸಿದ ಪ್ರಧಾನ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ. ನ್ಯಾಯಾಧೀಶ ಫವಾಜ್ ಪಿ.ಎ. ಅವರು ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಮಾಡಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.