ವೈದ್ಯಕೀಯ ನಿರ್ಲಕ್ಷ್ಯದಿಂದ ಬಾಣಂತಿ ಸಾವು : ಕುಟುಂಬಸ್ಥರ ಆರೋಪ, ಆಸ್ಪತ್ರೆಯೆದುರು ಪ್ರತಿಭಟನೆ
Team Udayavani, Sep 25, 2021, 8:00 PM IST
ಉಡುಪಿ: ಇಲ್ಲಿನ ಸರಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಹೆರಿಗೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಕುಟುಂಬಸ್ಥರು ಆಸ್ಪತ್ರೆ ಎದುರು ಶನಿವಾರ ಪ್ರತಿಭಟನೆ ನಡೆಸಿದರು.
ಕೋಟ ಮಣೂರು ಪಡುಕೆರೆ ನಿವಾಸಿ ಉಷಾ (29) ಗುರುವಾರ ಬೆಳಗ್ಗೆ ಹೆರಿಗೆಗೆ ಆಸ್ಪತ್ರೆಗೆ ದಾಖಲಾಗಿ ದ್ದರು. ಶನಿವಾರ ಹೆರಿಗೆಯಾದ ಬಳಿಕ ಅವರಲ್ಲಿ ದಿಢೀರ್ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತು. ತತ್ಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಆಸ್ಪತ್ರೆ ಸೇರುವ ಮುನ್ನವೇ ಅವರು ಮೃತಪಟ್ಟಿದ್ದಾರೆ. ಗಂಡು ಮಗು ಆರೋಗ್ಯವಾಗಿದೆ.
ಘಟನೆಯಿಂದ ಅಘಾತಗೊಂಡ ಮಹಿಳೆಯ ಸಂಬಂಧಿಕರು ಮತ್ತು ಸಾರ್ವಜನಿಕರು ಆಸ್ಪತ್ರೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿ, ಸ್ವಲ್ಪ ಕಾಲ ಪ್ರತಿಭಟನೆ ನಡೆಸಿದರು. ಆಸ್ಪತ್ರೆಗೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ನಾಗಭೂಷಣ ಉಡುಪ, ಜಿಲ್ಲಾ ಸರ್ಜನ್ ಡಾ| ಮಧುಸೂದನ್ ನಾಯಕ್ ಭೇಟಿ ನೀಡಿದರು. ಆಸ್ಪತ್ರೆ ಮುಂಭಾಗ ಸೇರಿದ್ದ ಜನರನ್ನು ನಿಯಂತ್ರಿಸಲು, ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು.
ಕೋಟ ಮಣೂರು ಪಡುಕೆರೆ ಉಷಾ ಅವರು ತೆಕ್ಕಟ್ಟೆ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕಿಯಾಗಿದ್ದರು. 4 ವರ್ಷದ ಹಿಂದೆ ಶ್ರೀಕಾಂತ್ ಶ್ರಿಯಾನ್ ಅವರನ್ನು ವಿವಾಹವಾಗಿದ್ದರು.
ಹೃದಯ ಬಡಿತದಲ್ಲಿ ಏರುಪೇರು
ಉಷಾ ಅವರು ಸೆ. 23ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಸಹಜ ಹೆರಿಗೆಗೆ ಕಾಯಲಾಗಿತ್ತು. ಬಳಿಕ ಸೆ. 24ರ ರಾತ್ರಿ ಹೆರಿಗೆ ನೋವಿಗೆ ಔಷಧ ನೀಡಲಾಯಿತು. ಈ ವೇಳೆ ಮಗುವಿನ ಹೃದಯ ಬಡಿತದಲ್ಲಿ ಏರುಪೇರು ಇರುವುದು ತಿಳಿದು ಬಂತು. ಈ ಹಿನ್ನೆಲೆಯಲ್ಲಿ ಸೆ. 25ರ ಬೆಳಗ್ಗೆ 6 ಗಂಟೆಗೆ ಆಪರೇಶನ್ ಕೊಠಡಿಗೆ ಕೊಂಡೊಯ್ದು ಶಸ್ತ್ರಚಿಕಿತ್ಸೆ ನಡೆದು ಬೆಳಗ್ಗೆ 6.45ಕ್ಕೆ ಗಂಡು ಮಗುವಿಗೆ ಜನ್ಮ ನೀಡಿದರು. ಬಳಿಕ ಮಹಿಳೆಗೆ ಬಿಪಿ ಏರಿಳಿತ, ಮತ್ತಿತರ ಕಾರಣಗಳಿಂದಾಗಿ ಮೂರ್ಛೆ ರೋಗ ಸಮಸ್ಯೆ ಕಾಣಿಸಿಕೊಂಡಿದೆ. ಉಸಿರಾಟ ಸಮಸ್ಯೆ ಇರುವುದನ್ನು ಗಮನಿಸಿ ವೆಂಟಿಲೇಟರ್ನಲ್ಲಿ ಚಿಕಿತ್ಸೆ ಮುಂದುವರಿಸಿ ಮಣಿಪಾಲ ಕೆಎಂಸಿಗೆ ಕೊಂಡೊಯ್ಯಲಾಯಿತು ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಬಾಣಂತಿ ಸಾವಿನ ಬಗ್ಗೆ ಕುಟುಂಬಸ್ಥರ ಅನುಮಾನದ ಮೇರೆಗೆ ಪೊಲೀಸ್ ದೂರು ದಾಖಲಿಸಲು ಸೂಚಿಸಲಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಸಾವಿಗೆ ನಿಜವಾದ ಕಾರಣ ತಿಳಿದು ಬರಲಿದೆ. ವೈದ್ಯರ ನಿರ್ಲಕ್ಷ್ಯ ದೃಢವಾದರೆ ಸೂಕ್ತ ಕಾನೂನು ಕ್ರಮ ತೆಗೆದು
ಕೊಳ್ಳಲಾಗುವುದು.
-ಡಾ| ಮಧುಸೂದನ್ ನಾಯಕ್, ಜಿಲ್ಲಾ ಸರ್ಜನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್