Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

ಪ್ರಾಣಿಗಳನ್ನು ಇರಿಸಲಾಗಿರುವ ಗೂಡಿನ ಹೊರಭಾಗದಲ್ಲಿ ಫ್ಯಾನ್‌ ಸೌಕರ್ಯವನ್ನು ಮಾಡಿಸಲಾಗಿದೆ

Team Udayavani, Mar 28, 2024, 11:41 AM IST

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

ಪಿಲಿಕುಳ: ದಿನದಿಂದ ದಿನಕ್ಕೆ ಬಿಸಿಲ ಬೇಗೆ ಏರುತ್ತಿದ್ದು, ನಗರದಲ್ಲಿ ವಿಪರೀತ ಸೆಖೆಯಿಂದ ಜನ ಸುಸ್ತಾಗಿದ್ದಾರೆ. ಬಿರು ಬಿಸಿಲಿಗೆ
ನಗರದಲ್ಲಿ ಸುತ್ತಾಡುವುದೇ ಕಷ್ಟ-ಕಷ್ಟ ಎಂಬಂತಾಗಿದೆ. ಪ್ರಾಣಿಗಳಿಗೂ ಇದೇ  ಸಮಸ್ಯೆ. ಅದರಲ್ಲಿಯೂ ಪಿಲಿಕುಳದಲ್ಲಿರುವ ಪ್ರಾಣಿಗಳಿಗೆ ಸೆಕೆ ಹೊರತಾಗಿಲ್ಲ. ಅಲ್ಲಿ ಅವುಗಳನ್ನು ತಂಪಾಗಿರಿಸುವ ನಿಟ್ಟಿನಲ್ಲಿ ವಿಶೇಷ ಪ್ರಯತ್ನಗಳು ಈ ಬಾರಿಯೂ ನಡೆದಿದೆ.

ಪ್ರಾಣಿಗಳನ್ನು ತಂಪಾದ ವಾತಾವರಣದಲ್ಲಿ ಇರಿಸುವ ನಿಟ್ಟಿನಲ್ಲಿ ಕೆಲವೆಡೆ ಹೆಚ್ಚುವರಿ ಫ್ಯಾನ್‌ ಹಾಗೂ ಪ್ರಾಣಿಗಳಿಗೆ ನಿಗದಿತವಾಗಿ ನೀರು ಚಿಮ್ಮಿಸುವ ಕಾರ್ಯವೂ ನಡೆಯುತ್ತಿದೆ.

ಪಿಲಿಕುಳ ಮೃಗಾಲಯದ ಪರಿಸರದಲ್ಲಿ ಹೇರಳವಾಗಿ ಗಿಡ-ಮರಗಳಿದ್ದರೂ ಬಿಸಿಲಿನ ತಾಪ ಕಡಿಮೆ ಇಲ್ಲ. ಹಾಗಾಗಿ ಹೆಚ್ಚಿನ ಪ್ರಮಾಣದ ಕುಡಿಯುವ ನೀರು ಪ್ರಾಣಿಗಳಿಗೆ ಅಗತ್ಯವಿದೆ. ಸುಮಾರು 150 ಎಕ್ರೆಯಲ್ಲಿ ಹರಡಿಕೊಂಡ ಉದ್ಯಾನವನದಲ್ಲಿ 98 ಪ್ರಭೇದಗಳ ಸಾವಿರಕ್ಕೂ ಅಧಿಕ ಪ್ರಾಣಿ- ಪಕ್ಷಿಗಳಿವೆ. ವಿಶೇಷವಾಗಿ ಹುಲಿ, ಸಿಂಹ, ಚಿರತೆ, ನೀರಾನೆ, ಕರಡಿ ಸಹಿತ ದೊಡ್ಡ ಪ್ರಾಣಿಗಳು ಸೆಖೆಯಿಂದ ಸಾಮಾನ್ಯವಾಗಿ ಸಮಸ್ಯೆ ಎದುರಿಸುತ್ತದೆ.

ಹೀಗಾಗಿ ಅವುಗಳಿಗೆ ವಿಶೇಷ ನೆಲೆಯಲ್ಲಿ ನೀರು ಲಭ್ಯವಾಗುವಂತೆ ನೋಡಿಕೊಳ್ಳಲಾಗುತ್ತದೆ. ಕುಡಿಯಲು ನೀರು ಸಮರ್ಪಕವಾಗಿ ಸಿಗುವ ಜತೆಗೆ, ಪ್ರಾಣಿಗಳು ಸುತ್ತಾಡುವ ಪ್ರದೇಶದಲ್ಲಿ ನೀರು ಲಭ್ಯವಾಗುವಂತೆ ನೋಡಿಕೊಳ್ಳಲಾಗುತ್ತದೆ. ಅದರಲ್ಲಿಯೂ
ಪ್ರಾಣಿಗಳನ್ನು ಇರಿಸಲಾಗಿರುವ ಗೂಡಿನ ಹೊರಭಾಗದಲ್ಲಿ ಫ್ಯಾನ್‌ ಸೌಕರ್ಯವನ್ನು ಮಾಡಿಸಲಾಗಿದೆ.

ನೀರ ಹನಿಗಳ ಸಂಭ್ರಮ!
ಸೆಖೆ ಹೆಚ್ಚಿರುವ ಸಮಯದಲ್ಲಿ ಪೈಪುಗಳ ಮೂಲಕ ಪ್ರಾಣಿಗಳ ಮೈಮೇಲೆ ನೀರು ಚಿಮ್ಮಿಸಲಾಗುತ್ತಿದೆ. ದಿನದಲ್ಲಿ ಸುಮಾರು ಎರಡು-ಮೂರು ಬಾರಿ ಇದನ್ನು ನಿಯಮಿತವಾಗಿ ಮಾಡಲಾಗುತ್ತಿದೆ. ವಿಶೇಷವೆಂದರೆ, ಉದ್ಯಾನವನದಲ್ಲಿ ಪ್ರಾಣಿಗಳು ಓಡಾಡುವ ಸ್ಥಳದ ಮೇಲ್ಭಾಗದಲ್ಲಿ ನೀರಿಗಾಗಿ “ಸ್ಪಿಂಕ್ಲರ್‌’ಗಳನ್ನು ಅಳವಡಿಸಲಾಗಿದ್ದು, ಮೇಲಿಂದ ನೀರು ಬೀಳುವ ಸಂದರ್ಭ ಪ್ರಾಣಿಗಳು ಅದಕ್ಕೂ ಮೈಯೊಡ್ಡಿ ನಿಲ್ಲುತ್ತವೆ. ಹಕ್ಕಿಗಳಿಗೂ ಕೂಡ ನೀರು ಚಿಮ್ಮಿಸುವ ಪ್ರಕ್ರಿಯೆ ನಡೆಯುತ್ತದೆ. ಜತೆಗೆ ಜಿಂಕೆ, ಕಡವೆಗಳು
ಓಡಾಡುವ ಜಾಗದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.

ಸೆಕೆ ನಿಯಂತ್ರಣಕ್ಕೆ ಕ್ರಮ
ಬಾರೀ ಸೆಕೆಯಿಂದ ಪ್ರಾಣಿ-ಪಕ್ಷಿಗಳ ಸೆಕೆ ನಿಯಂತ್ರಣಕ್ಕೆ ಪಿಲಿಕುಳದಲ್ಲಿ ಸೂಕ್ತ ಕ್ರಮಕೈಗೊಳ್ಳಲಾಗಿದೆ. ಫ್ಯಾನ್‌, ನೀರು ಚಿಮ್ಮಿಸುವ ಮೂಲಕ ವಾತಾವರಣವನ್ನು ತಂಪಾಗಿಸುವ ಪ್ರಯತ್ನಿಸಲಾಗುತ್ತಿದೆ. ಜತೆಗೆ, ಅಲ್ಲಲ್ಲಿ ನೀರಿನ ಕೊಳ, ಟ್ಯಾಂಕ್‌ ಗಳನ್ನೂ ಅಳವಡಿಸಲಾಗಿದೆ.
*ಎಚ್‌. ಜಯಪ್ರಕಾಶ್‌
ಭಂಡಾರಿ, ನಿರ್ದೇಶಕರು, ಪಿಲಿಕುಳ ಜೈವಿಕ ಉದ್ಯಾನವನ

ಗೂಡಿನ ಮೇಲ್ಛಾವಣಿಗೆ ಬಿಳಿ ಬಣ್ಣ
ಕೆಲವೊಂದು ಪ್ರಾಣಿಗಳ ಗೂಡಿನ ಮೇಲ್ಛಾವಣಿಯ ಮೇಲೆ ಬಿಳಿ ಬಣ್ಣದ ಪೈಂಟ್‌ಗಳನ್ನು ಬಳಿಯಲಾಗಿದೆ. ಯಾಕೆಂದರೆ, ಬಿಳಿ ಬಣ್ಣವು ಬಿಸಿಲನ್ನು ಹೀರಿ ತಂಪು ನೀಡುತ್ತದೆ. ಜತೆಗೆ ಕೆಲವೊಂದೆಡೆ ಮೇಲ್ಛಾವಣಿಗೆ ಸೋಗೆಗಳನ್ನೂ ಹಾಕಲಾಗಿದೆ. ಹಾವುಗಳಿರುವ ಪ್ರದೇಶದಲ್ಲೂ ಹೆಚ್ಚುವರಿ ನೀರಿನ ವ್ಯವಸ್ಥೆಗಳನ್ನು ಮಾಡಲಾಗಿದೆ. ಉರಗಗಳು ಇರುವ ಸ್ಥಳದಲ್ಲಿ ಮೇಲಿನಿಂದ ನೀರನ್ನು ಸ್ಪಿಂಕ್ಲರ್‌ ಮೂಲಕ ಚಿಮಿಕಿಸಲಾಗುತ್ತಿದೆ.

*ದಿನೇಶ್‌ ಇರಾ

ಚಿತ್ರ: ಸತೀಶ್‌ ಇರಾ

ಟಾಪ್ ನ್ಯೂಸ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.