ರಾಜ್ಯದ ರೈತರು ಈ ಬಾರಿ ಸೋಯಾಬೀನ್ ಬೆಳೆಯಬೇಡಿ: ಸಚಿವ ಬಿ.ಸಿ. ಪಾಟೀಲ್ ಸಲಹೆ
Team Udayavani, Jun 8, 2020, 8:14 PM IST
ಹಾವೇರಿ: ಈ ಬಾರಿ ರಾಜ್ಯಕ್ಕೆ ವಿತರಣೆಯಾಗಿರುವ ಸೋಯಾಬೀನ್ ಬಿತ್ತನೆ ಬೀಜದಲ್ಲಿ ಮೊಳಕೆಬರಿಸುವ ಸಾಮರ್ಥ್ಯ ಕಡಿಮೆಯಿದ್ದು ರೈತರು ಈ ವರ್ಷ ಸೋಯಾಬೀನ್ ಬಿಟ್ಟು ಬೇರೆ ಬೆಳೆ ಬೆಳೆಯುವುದು ಸೂಕ್ತ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಸಲಹೆ ನೀಡಿದ್ದಾರೆ.
ಸೋಮವಾರ ಸಂಜೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಈ ಸಲಹೆ ನೀಡಿದರು. ರಾಜ್ಯಕ್ಕೆ ಸೋಯಾಬೀನ್ ಬೀಜ ಉತ್ಪಾದಿಸಿ ಪೂರೈಸುವ ಮಧ್ಯಪ್ರದೇಶ ಹಾಗೂ ಆಂಧ್ರಪ್ರದೇಶ ರಾಜ್ಯಗಳಲ್ಲಿ ಕಳೆದ ವರ್ಷ ಸೋಯಾ ಬಿತ್ತನೆ ಬೀಜ ಕೊಯ್ಲು ವೇಳೆ ನೆರೆ ಬಂದಿದ್ದರಿಂದ ಸೋಯಾಬೀನ್ ಬೀಜದ ಮೊಳಕೆಬರಿಸುವ ಸಾಮರ್ಥ್ಯ ಕಡಿಮೆಯಾಗಿದೆ. ಹೀಗಾಗಿ ರೈತರು ಈ ವರ್ಷ ಸೋಯಾ ಬಿತ್ತನೆ ಕೈಬಿಡುವುದು ಒಳಿತು ಎಂದರು.
ವಿವಿಧ ಕಂಪನಿಗಳು ಈಗಾಗಲೇ ರಾಜ್ಯಕ್ಕೆ 1.3೦ಲಕ್ಷ ಕ್ವಿಂಟಾಲ್ ಸೋಯಾಬಿತ್ತನೆ ಬೀಜ ಪೂರೈಸಿವೆ. ಕೆಲವು ಕಡೆ ಕೆಲವು ಬೀಜ ಉತ್ತಮವಾಗಿ ಮೊಳಕೆಯೊಡೆದಿದ್ದರೆ ಇನ್ನು ಕೆಲವು ಕಡೆ ಮೊಳಕೆಯೊಡೆದಿಲ್ಲ. ಬಿತ್ತನೆ ಬೀಜ ಹೆಚ್ಚಾಗಿ ಹಾಕಿದರೆ ಒಂದು ಮೊಳಕೆಯೊಡೆಯದಿದ್ದರೆ ಇನ್ನೊಂದಾದರೂ ಮೊಳಕೆಯೊಡೆಯಬಹುದು. ಆದರೆ, ರೈತರು ಈ ಬಾರಿ ಆದಷ್ಟು ಈ ಬೆಳೆ ಬಿಟ್ಟು ಬೇರೆ ಬೆಳೆ ಬೆಳೆಯುವುದು ಸೂಕ್ತ. ಈ ಸಮಸ್ಯೆ ಕೇವಲ ಕರ್ನಾಟಕ ರಾಜ್ಯದಲ್ಲಿ ಮಾತ್ರವಲ್ಲ ದೇಶಾದ್ಯಂತ ಕಂಡು ಬಂದಿದೆ ಎಂದರು.
ಜೂ. 9 ರಂದು ಸಭೆ
ಈಗಾಗಲೇ ಬಿತ್ತನೆ ಮಾಡಿ ನಷ್ಟ ಅನುಭವಿಸಿದ ರೈತರಿಗೆ ಕಂಪನಿಗಳ ಕಡೆಯಿಂದ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಈ ಹಾನಿಗೆ ಕಂಪನಿಗಳನ್ನೇ ಹೊಣೆಗಾರರನ್ನಾಗಿಸಲಾಗುವುದು. ಈ ಬಗ್ಗೆ ಚರ್ಚಿಸಲು ಸೋಯಾಬೀಜ ವಿತರಕ ಕಂಪನಿಗಳ ಸಭೆಯನ್ನು ಬೆಂಗಳೂರಿನಲ್ಲಿ ಜೂ. 9 ರಂದು ಕರೆಯಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್