ಶುಲ್ಕ ಸಮರ: ಸರಕಾರಕ್ಕೆ ಸವಾಲು; ಸರಕಾರಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳ ಸಡ್ಡು

ಆನ್‌ಲೈನ್‌ ತರಗತಿ ಶುಲ್ಕ ಪಾವತಿಸದಿದ್ದರೆ ನ. 30ರಿಂದ ತರಗತಿ ಬಂದ್‌! 

Team Udayavani, Nov 26, 2020, 6:43 AM IST

Dress

ಸಾಂದರ್ಭಿಕ ಚಿತ್ರ

ಬೆಂಗಳೂರು: ಆನ್‌ಲೈನ್‌ ತರಗತಿಯ ಶುಲ್ಕದ ವಿಚಾರದಲ್ಲಿ ಸರಕಾರ – ಖಾಸಗಿ ಶಿಕ್ಷಣ ಸಂಸ್ಥೆಗಳ ನಡುವೆ “ಸಮರ’ ಆರಂಭವಾಗಿದೆ. ಆನ್‌ಲೈನ್‌ ತರಗತಿಗೆ ಶುಲ್ಕ ಪಡೆಯುವಂತಿಲ್ಲ ಎಂದು ಸರಕಾರ ನಿರ್ದೇಶಿಸಿದ ಬೆನ್ನಲ್ಲೇ ಶುಲ್ಕ ಪಾವತಿಸದಿದ್ದರೆ ತರಗತಿಗಳನ್ನೇ ಸ್ಥಗಿತಗೊಳಿಸುವುದಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳು ಸವಾಲು ಎಸೆದಿವೆ. ಶುಲ್ಕ ಪಾವತಿಸದ ವಿದ್ಯಾರ್ಥಿಗಳಿಗೆ ನ. 30ರಿಂದಲೇ ರಾಜ್ಯಾದ್ಯಂತ ತರಗತಿಗಳನ್ನು ಸ್ಥಗಿತಗೊಳಿಸುವುದಾಗಿಯೂ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಒಕ್ಕೂಟ (ಕ್ಯಾಮ್ಸ್‌) ಘೋಷಿಸಿದೆ.

ಆತಂಕದಲ್ಲಿ ಪಾಲಕರು
ನ. 30ರಿಂದ ಆನ್‌ಲೈನ್‌ ತರಗತಿ ಕಡಿತ ಆಗಲಿದೆ ಎಂಬ ವಿಷಯ ಹೊರಬೀಳುತ್ತಿದ್ದಂತೆ ಮಕ್ಕಳ ಪಾಲಕ-ಪೋಷಕರು ಆತಂಕಕ್ಕೀಡಾಗಿದ್ದಾರೆ. ಯಾವ ತರಗತಿಯೂ ಇಲ್ಲದಿದ್ದರೆ ಮಕ್ಕಳ ಭವಿಷ್ಯ ಹೇಗೆ ಎಂಬ ಚಿಂತೆಯಲ್ಲಿದ್ದಾರೆ. ಆನ್‌ಲೈನ್‌ ತರಗತಿಗೆ ಶುಲ್ಕ ನೀಡುವಂತಿಲ್ಲ ಎಂದು ಸರಕಾರವೇ ತಿಳಿಸಿದ್ದರೂ ಖಾಸಗಿ ಶಾಲೆಗಳು ಸರಕಾರದ ಆದೇಶವನ್ನು ಧಿಕ್ಕರಿಸಿ ಆನ್‌ಲೈನ್‌ ತರಗತಿಗೆ ಶುಲ್ಕ ಪಡೆಯುತ್ತಿವೆ. ಸರಕಾರದ ಆದೇಶದ ಪ್ರತಿಯನ್ನು ಶಾಲಾಡಳಿತ ಮಂಡಳಿಗಳಿಗೆ ತೋರಿಸಿದರೂ ನಮಗೆ ಇನ್ನೂ ಅಧಿಕೃತವಾಗಿ ಬಂದಿಲ್ಲ ಎಂಬ ಹಾರಿಕೆಯ ಉತ್ತರ ನೀಡುತ್ತಿದ್ದಾರೆ. ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ, ಸಮಸ್ಯೆಗೆ ಪರಿಹಾರ ನೀಡಬೇಕು ಎಂದು ಪಾಲಕರು ಆಗ್ರಹಿಸಿದ್ದಾರೆ.

ಖಾಸಗಿಯವರ ವಾದವೇನು?
1- ಬೋಧನೆ ಜತೆಗೆ ವೀಡಿಯೋ ಎಡಿಟಿಂಗ್‌ ಸೇರಿದಂತೆ ಶಿಕ್ಷಕರಿಗೆ ಹಲವು ಕೆಲಸಗಳಿವೆ.
2- ಶಾಲಾ ಬೋಧಕ- ಬೋಧಕೇತರ ಸಿಬಂದಿಗೆ ಆಡಳಿತ ಮಂಡಳಿಗಳು ವೇತನ ನೀಡಬೇಕಾಗಿದೆ.
3- ಶಾಲಾ ಕಟ್ಟಡಗಳ ಬಾಡಿಗೆ, ವಿದ್ಯುತ್‌ ಬಿಲ್‌ ಸೇರಿದಂತೆ ಶಾಲಾ ನಿರ್ವಹಣೆ ಖರ್ಚು-ವೆಚ್ಚ ಪಾವತಿಸಬೇಕಿದೆ.
4- ಪೋಷಕರು ಶುಲ್ಕ ಪಾವತಿಸದಿದ್ದರೆ ಆನ್‌ಲೈನ್‌ ತರಗತಿ ನಡೆಸಲು ಕಷ್ಟವಾಗುವುದರಿಂದ, ತರಗತಿ ಸ್ಥಗಿತಗೊಳಿಸದೇ ಬೇರೆ ದಾರಿ ಇಲ್ಲ.
5- ನಮ್ಮ ಪರಿಸ್ಥಿತಿಯನ್ನೂ ಪಾಲಕ- ಪೋಷಕರು ಅರ್ಥಮಾಡಿ ಕೊಂಡು ಶುಲ್ಕ ಪಾವತಿಸಬೇಕು.

ಪಾಲಕರ ವಾದವೇನು?
1- ಕಷ್ಟ ಕಾಲದಲ್ಲೂ ಶುಲ್ಕ ಕಟ್ಟಿ ಎನ್ನುವುದು ಎಷ್ಟು ಸರಿ?
2- ಶಿಕ್ಷಕರ ಬಗ್ಗೆ ನಮಗೂ ಅನುಕಂಪವಿದ್ದು, ಅವರ ನೆರವಿಗೆ ಸರಕಾರ ಬರಲಿ. ಪೋಷಕರ ಮೇಲೆ ಹೊರೆ ಹಾಕಬೇಡಿ.
3- ನಾವು ಕೊಡುವ ಶುಲ್ಕದ ಮೌಲ್ಯಕ್ಕೆ ತಕ್ಕುದಾದ ಪಾಠ ಬೇಕು. ಆನ್‌ಲೈನ್‌ನಲ್ಲಿ ಅದು ಸಿಗುತ್ತಿಲ್ಲ
4- ಆನ್‌ಲೈನ್‌ -ಆಫ್ಲೈನ್‌ ತರಗತಿಗೆ ವ್ಯತ್ಯಾಸ ವಿಲ್ಲವೇ? ಆಫ್ಲೈನ್‌ನಷ್ಟೇ ಶುಲ್ಕ ಕೇಳುವುದು ಎಷ್ಟು ಸರಿ?
5- ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸರಕಾರವೇ ಕೂಡಲೇ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕು

ಸರಕಾರದ ವಾದವೇನು?
1ಅನುಕೂಲಸ್ಥ ಪೋಷಕರು ಶುಲ್ಕ ಪಾವತಿಸಲಿ. ಆಗ ಶಿಕ್ಷಕರಿಗೆ ವೇತನ ನೀಡಲು ಸಾಧ್ಯವಾಗುತ್ತದೆ.
2ಖಾಸಗಿ ಶಾಲೆಗಳಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಕೊಡಿಸುವ ಬಗ್ಗೆ ಆರ್ಥಿಕ ಇಲಾಖೆ ಜತೆ ಚರ್ಚಿಸುತ್ತೇವೆ.
3ಶಾಲೆಗಳ ಗೇಟ್‌ ಹೊರಗೆ ನಿಂತು ಪ್ರತಿಭಟನೆ ಮಾಡುವುದು ಒಳ್ಳೆಯ ಬೆಳವಣಿಗೆಯಲ್ಲ.
4ಶುಕ್ರವಾರ ಖಾಸಗಿ ಶಾಲೆಗಳ ಸಂಘಟನೆಗಳ ಪ್ರತಿನಿಧಿಗಳ ಜತೆ ಆಯುಕ್ತರು ಸಭೆ ನಡೆಸಲಿದ್ದಾರೆ.
5ಆಯುಕ್ತರ ವರದಿ ಪರಿಶೀಲಿಸಿ, ಎಲ್ಲರ ಹಿತ ಕಾಯುವ ನಿರ್ಧಾರ ಕೈಗೊಳ್ಳುತ್ತೇವೆ.

ಓಲೈಕೆಗಾಗಿ ನಿಗಮ ಮಂಡಳಿಗಳನ್ನು ಸ್ಥಾಪಿಸಿ 500 ಕೋಟಿ ರೂ. ಮೀಸಲಿಡುವ ಬದಲು ಖಾಸಗಿ ಶಾಲೆಗಳಿಗೆ ಸರಕಾರವೇ ಶುಲ್ಕ ಪಾವತಿಸಲಿ. ಇಲ್ಲಿ ವಿದ್ಯಾರ್ಥಿಗಳ ಹಿತಾಸಕ್ತಿ ಮುಖ್ಯವಾಗಬೇಕು.
– ಎಚ್‌.ಡಿ. ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ

ಶುಲ್ಕ ಕಟ್ಟದಿದ್ದರೆ ಖಾಸಗಿ ಶಿಕ್ಷಣ ಸಂಸ್ಥೆಗಳು ಆನ್‌ಲೈನ್‌ ತರಗತಿ ರದ್ದುಪಡಿಸುವ ವಿಚಾರ ಮೂರ್ಖತನದ್ದು, ಸರಕಾರ ಇವರ ಜತೆ ಶಾಮೀಲಾಗಿದೆ. ಈ ಸರಕಾರ ಏನು ಮಾಡುತ್ತಿಲ್ಲ. ಬರೀ ಲೂಟಿ ಮಾಡುತ್ತಿದೆ.
– ಸಿದ್ದರಾಮಯ್ಯ, ವಿಪಕ್ಷ ನಾಯಕ

ಪೋಷಕರ ಹೊರೆ ತಪ್ಪಿಸಲು ಸರಕಾರ ಈ ಸಂದರ್ಭದಲ್ಲಿ ಸಂಬಳ ಇಲ್ಲದೆ ಕೆಲಸ ಮಾಡುತ್ತಿರುವ ಶಾಲೆಯ ಶಿಕ್ಷಕರಿಗೆ ಕನಿಷ್ಠ ಅರ್ಧದಷ್ಟು ಸಂಬಳವನ್ನಾದರೂ ನೀಡಬೇಕು.
– ಬಸವರಾಜ್‌ ಹೊರಟ್ಟಿ, ಮಾಜಿ ಶಿಕ್ಷಣ ಸಚಿವ

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.