ಮೆಂತ್ಯೆ ಸೊಪ್ಪು ತಿನ್ನಿ…ರಕ್ತದ ಕೊಲೆಸ್ಟ್ರಾಲ್‌, ಡಯೆಟ್‌ಗೆ ಸಹಕಾರಿ

ಮೆಂತ್ಯೆ ಸೊಪ್ಪು ಕಹಿ ರುಚಿಯನ್ನು ಹೊಂದಿದ್ದರೂ ಪೋಷಕಾಂಶಗಳಿಂದ ಶ್ರೀಮಂತವಾಗಿದೆ.

Team Udayavani, Aug 10, 2022, 1:08 PM IST

ಮೆಂತ್ಯೆ ಸೊಪ್ಪು ತಿನ್ನಿ…ರಕ್ತದ ಕೊಲೆಸ್ಟ್ರಾಲ್‌, ಡಯೆಟ್‌ಗೆ ಸಹಕಾರಿ

ಮನುಷ್ಯ ಏನೇ ಸಾಧನೆ ಮಾಡಬೇಕಾದರೂ ಅದಕ್ಕೆ ಉತ್ತಮ ಆರೋಗ್ಯ ಅತ್ಯಗತ್ಯ. ನಾವು ಆರೋಗ್ಯವಾಗಿರಬೇಕಾದರೆ ನಾವು ತಿನ್ನುವ ಆಹಾರ ಎಷ್ಟು ಮುಖ್ಯ ಮತ್ತು ಯಾವ ಆಹಾರ ತಿಂದರೆ ಆರೋಗ್ಯಕ್ಕೆ ಪೂರಕ ಎನ್ನುವುದನ್ನು ತಿಳಿದಿರಬೇಕು.

ಆರೋಗ್ಯ ಕಾಪಾಡುವಲ್ಲಿ ಸೊಪ್ಪು ಪ್ರಮುಖ ಪಾತ್ರವಹಿಸುತ್ತದೆ. ಪುದಿನ, ಪಾಲಕ್‌, ಅರಿವೆ, ಬಸಳೆ ಮೆಂತ್ಯೆ ಎಲ್ಲವು ಆರೋಗ್ಯಕರ. ಇವುಗಳಲ್ಲಿ ಹೆಚ್ಚು ಪೋಷಕಾಂಶಗಳು ತುಂಬಿರುವುದರಿಂದ ಮನುಷ್ಯನನ್ನು ಆಯೋಗ್ಯಕರವಾಗಿರುವಂತೆ ಮಾಡುತ್ತವೆ. ಮೆಂತ್ಯೆ ಸೊಪ್ಪು ಕಹಿ ರುಚಿಯನ್ನು ಹೊಂದಿದ್ದರೂ ಪೋಷಕಾಂಶಗಳಿಂದ ಶ್ರೀಮಂತವಾಗಿದೆ. ದಿನನಿತ್ಯದ ಆಹಾರದಲ್ಲಿ ಮೆಂತ್ಯೆ ಸೊಪ್ಪು ಸೇವನೆ ದೇಹದ ಆರೋಗ್ಯವನ್ನು ಉತ್ತಮವಾಗಿರಿಸುವಲ್ಲಿ ಸಹಕಾರಿ

ಮೆಂತ್ಯೆ ಸೊಪ್ಪು ಆಹಾರವಾಗಿ ಬಳಕೆ ಮಾಡುವುದರಿಂದ ಹಲವಾರು ಉಪಯೋಗಗಳಿದೆ.
1. ರಕ್ತದ ಕೊಲೆಸ್ಟ್ರಾಲ್‌ ಕಡಿಮೆ
ಮೆಂತ್ಯೆ ಸೊಪ್ಪು ಸೇವನೆಯಿಂದ ರಕ್ತದ ಕೊಲೆಸ್ಟ್ರಾಲ್‌ ಕಡಿಮೆಯಾಗುತ್ತದೆ.

2. ಹೃದಯ ಸಂಬಂಧಿ ಕಾಯಿಲೆಗೆ ಉತ್ತಮ
ಮೆಂತ್ಯೆ ಸೊಪ್ಪು ಸೇವನೆ ಮಾಡುವುದರಿಂದ ಹೃದಯ ಸಂಬಂಧಿ ಕಾಯಿಲೆಗಳ ಸಂಭವ ಕಡಿಮೆಯಿಯುತ್ತದೆ.

3. ಡಯೆಟ್‌ಗೆ ಸಹಕಾರಿ
ಡಯೆಟ್‌ ಮಾಡುವವರಿಗೆ ಮೆಂತ್ಯೆ ಸೇವನೆ ಹೆಚ್ಚು ಉಪಕಾರಿ. ಇದರಿಂದ ಅನಗತ್ಯ ಕೊಬ್ಬನ್ನು ಕಡಿಮೆಯಾಗುತ್ತದೆ.

4. ಮಹಿಳೆಯರಿಗೆ ಉಪಕಾರಿ
ಮೆಂತ್ಯೆ ಸೊಪ್ಪು ಸೇವನೆಯಿಂದ ಗರ್ಭಿಣಿ ಮಹಿಳೆಯರಿಗೆ ಸುಲಭ ಹೆರಿಗೆಗೆ ಸಹಕಾರಿ. ಆದರೆ ಅತಿಯಾದ ಸೇವನೆ ಅಪಾಯಕಾರಿಯೂ ಹೌದು.

ಹೇಗೆ ಸೇವಿಸಬಹುದು?
ಮೆಂತ್ಯೆಯನ್ನು ಪಲ್ಯ, ತಂಬುಳಿ ಅಥವಾ ಮೆಂತ್ಯೆ ರೈಸ್‌ ಬಾತ್‌ ಹೀಗೆ ನಾನಾ ರೀತಿಯ ಖಾದ್ಯಗಳನ್ನು ತಯಾರಿಸುವ ಮೂಲಕ ಸೇವಿಸಬಹುದು. ಇದರೊಂದಿಗೆ ಮೆಂತ್ಯೆ ಕಾಳು, ಮೆಂತ್ಯೆ ಹುಡಿ ಕೂಡ ಆರೋಗ್ಯ ವೃದ್ದಿಗೆ ಸಹಕಾರಿಯಾಗಿದೆ. ಇವುಗಳನ್ನು ಅಡುಗೆಯಲ್ಲಿ ಬಳಸುವುದರಿಂದ ಅನೇಕ ರೋಗಗಳಿಂದ ದೂರವಿರಬಹುದು.


ವಾಟರ್‌ಮೈಂಡರ್‌

ದೇಹದ ಆರೋಗ್ಯ ಸುಸ್ಥಿರದಲ್ಲಿರಬೇಕಾದರೆ ದೇಹಕ್ಕೆ ಅಗತ್ಯವಿರುವ ನೀರು ಸೇರಬೇಕು. ಆದರೆ ಇಂದು ಅನೇಕರು ದೇಹಕ್ಕೆ ಎಷ್ಟು ಅಗತ್ಯವಿದೆಯೋ ಅಷ್ಟು ನೀರನ್ನು ಕುಡಿಯುವುದಿಲ್ಲ. ದೇಹದ ಅಂಗಾಂಗಗಳ ಕಾರ್ಯ ಸುಗಮವಾಗಿ ಸಾಗಲು ಪ್ರತಿದಿನ 2-3 ಲೀ ನೀರು ಕುಡಿಯುವ ಅಗತ್ಯವಿದೆ. ಆದರೆ ಇದನ್ನು ಅನುಸರಿಸಲು ಕಷ್ಟ. ಪ್ರತಿದಿನ ನೀರು ಕುಡಿಯಲು ನೆನಪಿಸುವ ಆ್ಯಪ್‌ ವಾಟರ್‌ಮೈಂಡರ್‌. ದೇಹದ ತೂಕ ಅಥವಾ ವೈಯಕ್ತಿಕ ಗುರಿಯ ಆಧಾರದ ಮೇಲೆ ಎಷ್ಟು ನೀರಿನ ಆವಶ್ಯಕತೆ ಇದೆ ಎಂಬುದನ್ನು ತಿಳಿಸುತ್ತದೆ. ದಿನಪೂರ್ತಿ ಸಂದೇಶಗಳನ್ನು ಕಳಿಸುವ ಮೂಲಕ ನೀರು ಕುಡಿಯುವಂತೆ ಇದು ಎಚ್ಚರಿಸುತ್ತದೆ.

-  ರಂಜಿನಿ ಮಿತ್ತಡ್ಕ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.