Manipur ದಲ್ಲಿ ಇನ್ನೂ ಆರದ ಬೆಂಕಿ: ಅಮಿತ್ ಶಾ ಭೇಟಿ ನಡುವೆಯೇ 25 ಮಂದಿ ಕಿಡಿಗೇಡಿಗಳ ಸೆರೆ
Team Udayavani, May 30, 2023, 7:25 AM IST
ಇಂಫಾಲ/ಹೊಸದಿಲ್ಲಿ: ಜನಾಂಗೀಯ ಹಿಂಸಾಚಾರಕ್ಕೆ ತುತ್ತಾಗಿರುವ ಈಶಾನ್ಯ ರಾಜ್ಯಕ್ಕೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಮೇ 29ರಿಂದ ನಾಲ್ಕು ದಿನಗಳ ಪ್ರವಾಸ ಕೈಗೊಂಡಿರು ವಂತೆಯೇ ಅಲ್ಲಿ ಪರಿಸ್ಥಿತಿ ನಿಯಂತ್ರಣ ದಲ್ಲಿದ್ದರೂ ಬಿಗುವಿನಿಂದ ಕೂಡಿದೆ. ಜೂ.1ರ ವರೆಗೆ ಅಮಿತ್ ಶಾ ಅವರು ಇಂಫಾಲದಲ್ಲಿ ಇರಲಿದ್ದು, ರಾಜ್ಯ ಸರಕಾರ ಮತ್ತು ಮಿಲಿಟರಿ ಅಧಿಕಾರಿಗಳು, ಮೈತೇಯಿ, ಕುಕಿ ಸಮುದಾಯಗಳ ಮುಖಂಡರ ಜತೆಗೆ ಸಂಧಾನ ನಡೆಸುವ ನಿಟ್ಟನಲ್ಲಿ ಸಭೆಗಳನ್ನೂ ನಡೆಸಲಿದ್ದಾರೆ. ಇದೇ ವೇಳೆ ರಾಜ್ಯದ ಅಲ್ಲಲ್ಲಿ ಗಲಭೆಗಳು ನಡೆದಿದ್ದರಿಂದ ಮತ್ತೆ ಕರ್ಫ್ಯೂ ಜಾರಿಗೊಳಿಸಲಾಗಿದೆ.
ರವಿವಾರ ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಗಾಯಗೊಂಡು ಅಸುನೀಗಿದವರ ಸಂಖ್ಯೆ ಸೋಮವಾರದ ವೇಳೆಗೆ ಐದಕ್ಕೆ ಏರಿಕೆಯಾ ಗಿದೆ. ಗಂಭೀರವಾಗಿ ಗಾಯಗೊಂಡಿದ್ದವರ ಪೈಕಿ ಮೂವರು ಆಸ್ಪತ್ರೆಯಲ್ಲಿ ಕೊನೆಯು ಸಿರೆಳೆದಿದ್ದಾರೆ. ಇದೇ ವೇಳೆ ಕೇಂದ್ರ ಗೃಹ ಸಚಿವರ ಭೇಟಿಯ ಮುನ್ನವೇ ಭೂಸೇನೆ ಮತ್ತು ಇತರ ಕೇಂದ್ರ ಅರೆಸೇನಾ ಪಡೆಗಳು ಕಾರ್ಯಾಚರಣೆ ತೀವ್ರಗೊಳಿಸಿವೆ. ರಾಜ್ಯದ ವಿವಿಧ ಭಾಗಗಳಿಂದ ಒಟ್ಟು 25 ಮಂದಿ ಕಿಡಿಗೇಡಿಗಳನ್ನು ವಶಕ್ಕೆ ಪಡೆಯಲಾಗಿದೆ. ವಿಶೇಷವಾಗಿ ಇಂಫಾಲ ಕಣಿವೆ ಪ್ರದೇಶದಿಂ ದಲೇ ಹೆಚ್ಚಿನವರನ್ನು ಮಾರಕಾಸ್ತ್ರಗಳ ಸಹಿತ ಪತ್ತೆ ಮಾಡಲಾಗಿದೆ ಎಂದು ರಕ್ಷಣ ಪಡೆ ಯ ವಕ್ತಾರರು ಇಂಫಾಲದಲ್ಲಿ ತಿಳಿಸಿದ್ದಾರೆ.
ಬಂಧಿತರಿಂದ 5 ಡಬಲ್ ಬ್ಯಾರೆಲ್ ರೈಫಲ್ಗಳು, ಮೂರು ಸಿಂಗಲ್ ಬ್ಯಾರೆಲ್ ರೈಫಲ್ ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
MUST WATCH
ಹೊಸ ಸೇರ್ಪಡೆ
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
Dublin; ಆಸೀಸ್ ಸರಣಿ ಮುಂದೂಡಿದ ಐರ್ಲೆಂಡ್
T20 Cricket: “ವಿಂಡೀಸ್ ಪರ ಟಿ20 ವಿಶ್ವಕಪ್ ಆಡಲ್ಲ’: ಸುನೀಲ್ ನಾರಾಯಣ್ ಸ್ಪಷ್ಟ ನುಡಿ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!