ಮಂಗಳೂರು ಮೀನುಗಾರಿಕೆ ವಿ.ವಿ. ಸ್ಥಾಪನೆಗೆ ಹೆಚ್ಚಿದ ಪ್ರಯತ್ನ


Team Udayavani, Jul 13, 2021, 7:30 AM IST

ಮಂಗಳೂರು ಮೀನುಗಾರಿಕೆ ವಿ.ವಿ. ಸ್ಥಾಪನೆಗೆ ಹೆಚ್ಚಿದ ಪ್ರಯತ್ನ

ಮಂಗಳೂರು: ನಗರದ ಮೀನುಗಾರಿಕೆ ಕಾಲೇಜನ್ನು ಕೇಂದ್ರೀಕರಿಸಿ ಕರ್ನಾಟಕ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾ ನಿಲಯ ಸ್ಥಾಪಿಸುವ ಪ್ರಸ್ತಾವನೆಗೆ ಬೀದರ್‌ನ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯ (ಕೆವಿಎಎಫ್‌ಎಸ್‌ಯು)ವು ನಕಾರಾತ್ಮಕ ಧೋರಣೆ ತಳೆದಿದ್ದರೂ ಮೀನುಗಾರಿಕೆ ಕಾಲೇಜಿನಿಂದ ಪ್ರಯತ್ನಗಳು ಮುಂದುವರಿದಿವೆ.
ಕೆವಿಎಎಫ್‌ಎಸ್‌ ಧೋರಣೆ ಯನ್ನು ಖಂಡಿಸಿ ಮೀನುಗಾರಿಕೆ ಕಾಲೇಜು ಈಗಾಗಲೇ ಪ್ರತಿ ಭಟನ ಪತ್ರವನ್ನು ಕಳುಹಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮೀನುಗಾರಿಕೆ ವಿ.ವಿ. ಸ್ಥಾಪನೆ ಕುರಿತು ಸರಕಾರದ ಮೇಲೆ ಒತ್ತಡ ತರುವುದಾಗಿ ತಿಳಿಸಿದ್ದಾರೆ.

ದೇಶದ ಪ್ರಥಮ ಕಾಲೇಜು
53 ವರ್ಷಗಳ ಇತಿಹಾಸವಿರುವ ಮಂಗಳೂರು ಮೀನುಗಾರಿಕೆ ಕಾಲೇಜು ಭಾರತಕ್ಕೆ ಪ್ರಥಮ. ಆದರೆ ಈಗ ತಮಿಳುನಾಡು, ಕೇರಳ, ಮಹಾರಾಷ್ಟ್ರಗಳಲ್ಲಿ ಮೀನುಗಾರಿಕೆ ವಿ.ವಿ. ಮತ್ತು ಅವುಗಳ ಸಂಯೋಜಿತ ಕಾಲೇಜುಗಳಿವೆ. ಒಡಿಶಾ, ತೆಲಂಗಾಣಗಳು ವಿ.ವಿ. ಸ್ಥಾಪಿಸುವ ಬಗ್ಗೆ ಅಧಿ ಸೂಚನೆ ಹೊರಡಿಸಿವೆ. ಆದ್ದರಿಂದ ಈ ಎಲ್ಲ ರಾಜ್ಯಗಳಲ್ಲಿ ಮೀನುಗಾರಿಕೆ ದೊಡ್ಡ ಉದ್ಯಮ ವಾಗಿ ಬೆಳೆದಿದ್ದು ರಾಷ್ಟ್ರ ಮಟ್ಟದಲ್ಲಿ 5ನೇ ಸ್ಥಾನ ದಲ್ಲಿವೆ. ಕರ್ನಾಟಕವು ದೇಶದಲ್ಲಿ 2ನೇ ಅತೀ ದೊಡ್ಡ ಜಲ ಪ್ರದೇಶವನ್ನು ಹೊಂದಿದ್ದರೂ ಮತ್ಸ್ಯ ಕೃಷಿಯಲ್ಲಿ 9-10ನೇ ಸ್ಥಾನದಲ್ಲಿದೆ. ರಾಜ್ಯದ ಕರಾವಳಿಯಲ್ಲಿ ಮೀನುಗಾರಿಕೆಯ ಅಭಿ ವೃದ್ಧಿಗೆ ವಿಪುಲ ಅವಕಾಶಗಳಿದ್ದರೂ ಉತ್ತೇಜನದ ಕೊರತೆಯಿಂದಾಗಿ ನಿರೀಕ್ಷಿತ ಸಾಧನೆ ಮಾಡಲು ಸಾಧ್ಯವಾಗಿಲ್ಲ.

ಇಲ್ಲಿದೆ ಕಾಲೇಜು, ಅಲ್ಲಿದೆ ವಿ.ವಿ.!
ಮಂಗಳೂರಿನ ಕಾಲೇಜು ದೂರದ ಬೀದರ್‌ನ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ಕಾಲೇಜಿಗೆ ಸಂಯೋಜನೆಗೊಂಡಿದೆ. ಪಶು ಮತ್ತು ಪಶು ವೈದ್ಯಕೀಯದ ಜತೆಗೆ ಮೀನುಗಾರಿಕೆಯೂ ಸೇರಿರುವುದರಿಂದ ವಿ.ವಿ.ಗೆ ಮೀನುಗಾರಿಕೆ ಬಗ್ಗೆ ಹೆಚ್ಚು ಗಮನ ಸಾಧ್ಯವಾಗುತ್ತಿಲ್ಲ. ಇವೆಲ್ಲವನ್ನು ಗಮನಿಸಿ, ಮಂಗಳೂರಿನ ಮೀನುಗಾರಿಕೆ ಕಾಲೇಜು ಸಾಕಷ್ಟು ಜಮೀನು ಹೊಂದಿರುವುದರಿಂದ ಈ ಕಾಲೇಜನ್ನು ಕೇಂದ್ರವಾಗಿರಿಸಿ ಮೀನುಗಾರಿಕೆ ವಿ.ವಿ. ಸ್ಥಾಪಿಸಲು 2020ರ ಅಕ್ಟೋಬರ್‌ನಲ್ಲಿ ನಿರ್ಣಯಿಸಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಮೀನುಗಾರಿಕೆ ವಿ.ವಿ. ಅಗತ್ಯವಿಲ್ಲ ಎಂಬ ಕೆವಿಎಎಫ್‌ಎಸ್‌ನ ಧೋರಣೆ ಕಾಲೇಜಿನ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ನಾವು ಕಳುಹಿಸಿರುವ ಪ್ರತಿಭಟನ ಪತ್ರಕ್ಕೆ ಇದುವರೆಗೆ ಕೆವಿಎಎಫ್‌ಎಸ್‌ ಪ್ರತಿಕ್ರಿಯಿಸಿಲ್ಲ ಎಂದು ಕಾಲೇಜಿನ ಮೂಲಗಳು “ಉದಯವಾಣಿ’ಗೆ ತಿಳಿಸಿವೆ.

ಮೀನುಗಾರರು ಮತ್ತು ಮೀನುಗಾರಿಕೆಯ ಪರವಾಗಿ ಕೆಲಸ ಮಾಡಲು ವಿ.ವಿ.ಯ ಅಗತ್ಯ ವಿದ್ದು, ಮಂಗಳೂರಿನಲ್ಲಿ ಸ್ಥಾಪನೆ ಆಗಲೇಬೇಕು. ಅದಕ್ಕೆ ಸಂಯೋ ಜಿತ ವಾಗಿ 4 ಕಾಲೇಜುಗಳನ್ನು ಆರಂಭಿ ಸಲು ಮತ್ತು ಇತರ ಮೀನು ಗಾರಿಕೆ ಅಭಿವೃದ್ಧಿ ಕೆಲಸ ಗಳನ್ನು ಕೈಗೆತ್ತಿಕೊಳ್ಳಲು ಉದ್ದೇ ಶಿಸ ಲಾಗಿದೆ. ಇದಕ್ಕಾಗಿ ಮೀನುಗಾರಿಕೆ ಸಚಿವ ಎಸ್‌. ಅಂಗಾರ ಅವರ ಜತೆಗೂಡಿ ಸರಕಾರದ ಮೇಲೆ ಒತ್ತಡ ತರುತ್ತೇವೆ.
– ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.