ಮಾಸ್ಟರ್ ಮೈಂಡ್ ವಾಸಿಂ ಪಠಾಣಗೆ ಐದು ತಾಸು ಖಾಕಿ ಡ್ರಿಲ್
ಮತ್ತೆ 9 ಜನರ ಸೆರೆ; ಬಂಧಿತರ ಸಂಖ್ಯೆ 135ಕ್ಕೇರಿಕೆ
Team Udayavani, Apr 22, 2022, 9:34 AM IST
ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಪ್ರಕರಣಕ್ಕೆ ಸಂಬಂಧಿಸಿ ಗಲಭೆಯ ಮಾಸ್ಟರ್ ಮೈಂಡ್ ಎನ್ನಲಾದ ವಾಸಿಂ ಪಠಾಣ, ರೌಡಿಶೀಟರ್ ಅಬ್ದುಲ್ ಮಲ್ಲಿಕ ಬೇಪಾರಿ ಸೇರಿದಂತೆ ಒಂಬತ್ತು ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಇದುವರೆಗೆ ಈ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 135ಕ್ಕೇರಿದೆ.
ಗಲಭೆ ನಂತರ ಕಳೆದ ಮೂರ್ನಾಲ್ಕು ದಿನಗಳಿಂದ ತಲೆಮರೆಸಿಕೊಂಡಿದ್ದ ವಾಸಿಂನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಈತ ಗಲಭೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದನೇ, ಈತನ ಪೂರ್ವಾಪರ ಏನೆಂಬುದರ ಕುರಿತು ಪೊಲೀಸರು ಸುಮಾರು ಐದಾರು ತಾಸು ತೀವ್ರ ವಿಚಾರಣೆ ನಡೆಸಿದ್ದಾರೆ.
ಈ ವೇಳೆ ಆತ ತಾನು ಯಾವುದೇ ಮಸೀದಿಗೆ ಸಂಬಂಧಪಟ್ಟವನ್ನಲ್ಲವೆಂದು ಹೇಳಿಕೊಂಡಿದ್ದಾನೆ ಎನ್ನಲಾಗಿದೆ. ಘಟನೆ ನಂತರ ವಾಸಿಂ ಮೊದಲು ಹೈದರಾಬಾದ್ ನಲ್ಲಿದ್ದ. ನಂತರ ಪೊಲೀಸರು ಪತ್ತೆಗೆ ಮುಂದಾಗಿದ್ದಾರೆ ಎಂಬುದನ್ನು ಅರಿತು ಮುಂಬೈಗೆ ತೆರಳಿ ತಮ್ಮ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡಿದ್ದಾನೆ.
ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಪೊಲೀಸರ ತಂಡ ಬುಧವಾರ ರಾತ್ರಿ ಆತನನ್ನು ವಶಕ್ಕೆ ಪಡೆದು ಬೆಳಗಾವಿಗೆ ಕರೆ ತಂದಿದ್ದಾರೆ. ಗುರುವಾರ ಮಧ್ಯಾಹ್ನ ಹಳೇಹುಬ್ಬಳ್ಳಿ ಠಾಣೆಗೆ ಹೆಚ್ಚಿನ ವಿಚಾರಣೆಗಾಗಿ ಕರೆದುಕೊಂಡು ಬಂದಿದ್ದಾರೆ. ವಾಸಿಂ ಬಂಧನವಾದ ಬಗ್ಗೆ ಸಾರ್ವಜನಿಕವಾಗಿ ತಿಳಿದರೆ ಹೆಚ್ಚಿನ ಜನರು ಸೇರಬಹುದೆಂಬ ಹಿನ್ನೆಲೆಯಲ್ಲಿ ಆತ ಬೆಳಗಾವಿಯಲ್ಲಿದ್ದಾಗ ಅವನಿಂದ, ನಾನು ಘಟನೆಯಲ್ಲಿ ಯಾವುದೇ ತಪ್ಪು ಮಾಡಿಲ್ಲ. ಮಾಡಿದ್ದರೆ ಕಾನೂನು ಕ್ರಮ ಕೈಗೊಳ್ಳಿ ಎಂಬ ವಿಡಿಯೋವುಳ್ಳ ಸಂದೇಶ ಹರಿಬಿಡಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಗುರುವಾರ ಪೊಲೀಸರು ಬಂಧಿತರನ್ನು ವೈದ್ಯಕೀಯ ತಪಾಸಣೆಗೊಳಪಡಿಸಲು ಹಳೇಹುಬ್ಬಳ್ಳಿ ಠಾಣೆಯಿಂದ ಕರೆದೊಯ್ಯುತ್ತಿದ್ದಾಗ ಅವರ ಕುಟುಂಬದ ಸದಸ್ಯರೆಲ್ಲ ಸೇರಿದ್ದರು. ಗಲಭೆಗೆ ಸಂಬಂಧಿಸಿ ಬಂಧಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತ ಸಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ