ರಾಜ್ಯದಲ್ಲಿ ಮತ್ತೆ ಐದು ಸೋಂಕು ಪ್ರಕರಣಗಳು: ಐವರಿಗೂ ನಿಜಾಮುದ್ದೀನ್ ನಂಟು
Team Udayavani, Apr 5, 2020, 6:57 PM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ -19 ಸೋಂಕಿತರ ಸಂಖ್ಯೆ ಪ್ರತಿ ದಿನವೂ ಏರಿಕೆಯಾಗುತ್ತಿದೆ. ರಾಜ್ಯ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಮತ್ತೆ ಐವರಿಗೆ ಸೋಂಕು ತಗಲಿರುವುದು ದೃಢವಾಗಿದೆ. ಶನಿವಾರ ಸಂಜೆಯ ನಂತರ ಒಟ್ಟು ಏಳು ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ.
ಬೆಳಗಾವಿಯ ರಾಯಬಾಗ ತಾಲೂಕಿನ ನಾಲ್ವರಿಗೆ ಸೋಂಕು ತಗುಲಿದ್ದು, ಬಳ್ಳಾರಿ ಜಿಲ್ಲೆಯ ಓರ್ವನಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಈ ಐವರಿಗೂ ದಿಲ್ಲಿಯ ನಿಜಾಮುದ್ದೀನ್ ಸಭೆಯ ನಂಟಿದೆ ಎಂದು ಖಚಿತವಾಗಿದೆ.
ಇಂದು ಬೆಳಗಿನ ಹೆಲ್ತ್ ಬುಲೆಟಿನ್ ನಲ್ಲಿ ಬೆಂಗಳೂರು ಮಡಿವಾಳದ ಪತಿ ಪತ್ನಿಗೆ ಸೋಂಕು ಇರುವ ಬಗ್ಗೆ ಆರೋಗ್ಯ ಇಲಾಖೆ ಖಚಿತಪಡಿಸಿತ್ತು. ರವಿವಾರ ಸಂಜೆ ಮತ್ತೊಂದು ಬುಲೆಟಿನ್ ಬಿಡುಗಡೆ ಮಾಡಿದ್ದು, ಅದರಲ್ಲಿ ಹೊಸ ಐವರು ಸೋಂಕಿತರ ಮಾಹಿತಿ ನೀಡಿದೆ.
ಬೆಳಗಾವಿ ರಾಯಬಾಗದ ಮೂವರು ಮಹಿಳೆಯರು ಮತ್ತು ಓರ್ವ ಪುರುಷನಿಗೆ ಸೋಂಕು ದೃಢವಾಗಿದೆ. ಬಳ್ಳಾರಿಯ 41 ವರ್ಷ ವಯಸ್ಸಿನ ಪುರುಷನಿಗೆ ಸೋಂಕು ಇರುವ ಖಚಿತವಾಗಿದೆ.
ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 151ಕ್ಕೇರಿದೆ. ಇದರಲ್ಲಿ ನಾಲ್ವರು ಮೃತಪಟ್ಟಿದ್ದು, 12 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಗುಣಮುಖರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ