ಯುಎಇ ಕನ್ನಡಿಗರಿಗೆ ವಿಮಾನ ವ್ಯವಸ್ಥೆ: ಡಾ. ಅಶ್ವತ್ಥನಾರಾಯಣ ಪತ್ರಕ್ಕೆ ಕೇಂದ್ರ ಸ್ಪಂದನೆ


Team Udayavani, May 6, 2020, 8:00 PM IST

 ಯುಎಇ ಕನ್ನಡಿಗರಿಗೆ ವಿಮಾನ ವ್ಯವಸ್ಥೆ: ಡಾ. ಅಶ್ವತ್ಥನಾರಾಯಣ ಪತ್ರಕ್ಕೆ ಕೇಂದ್ರ ಸ್ಪಂದನೆ

ಬೆಂಗಳೂರು: ಕೋವಿಡ್‌ನಿಂದಾಗಿ ಅರಬ್‌ ರಾಷ್ಟ್ರಗಳಲ್ಲಿ ಸಂಕಷ್ಟಕ್ಕೆ ಸಿಲುಕಿ ದೇಶಕ್ಕೆ ವಾಪಸಾಗಲು ಬಯಸಿರುವ ಕನ್ನಡಿಗರಿಗೆ ವಿಮಾನದ ವ್ಯವಸ್ಥೆ ಮಾಡುವಂತೆ ಕೋರಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಬರೆದಿದ್ದ ಪತ್ರಕ್ಕೆ ಸ್ಪಂದಿಸಿರುವ ಕೇಂದ್ರ ಸರ್ಕಾರ, ಮೇ 10 ಅಥವಾ 11ಕ್ಕೆ ವಿಮಾನದ ವ್ಯವಸ್ಥೆ ಮಾಡಲಿದೆ.

ಭಾನುವಾರ ದುಬೈ ಕನ್ನಡಿಗರ ಜತೆ ವೀಡಿಯೋ ಸಂವಾದ ನಡೆಸಿದ್ದ ಡಾ. ಅಶ್ವತ್ಥನಾರಾಯಣ, ಅವರ ಸಮಸ್ಯೆಗಳನ್ನು ಆಲಿಸಿ ಸರ್ಕಾರದ ಕಡೆಯಿಂದ ಆಗುವ ಎಲ್ಲ ಸಹಾಯ ಮಾಡುವುದಾಗಿ ಆಶ್ವಾಸನೆ ನೀಡಿದ್ದರು. ಅದರಂತೆ ಬುಧವಾರ ಕೇಂದ್ರ ಸರ್ಕಾರಕ್ಕೆ ಅವರು ಪತ್ರ ಬರೆದಿದ್ದರು. ಇದಕ್ಕೆ ಸ್ಪಂದಿಸಿದ ಕೇಂದ್ರ ಸರ್ಕಾರ ವಿಮಾನದ ವ್ಯವಸ್ಥೆ ಮಾಡಿದೆ. ಜತೆಗೆ, ನಗ್ಮಾ ಮಲಿಕ್‌ ಅವರನ್ನು ರಾಜ್ಯದ ಸಮನ್ವಯಕಾರರನ್ನಾಗಿ ನೇಮಿಸಿದೆ. ಇತರೆ ರಾಷ್ಟ್ರಗಳಲ್ಲಿ ಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ವಾಪಸ್‌ ಕರೆತರಲು ಅವರು ಸಹಕರಿಸಲಿದ್ದಾರೆ.

ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಜೈಶಂಕರ್‌ ಅವರಿಗೆ ಪತ್ರ ಬರೆದಿದ್ದ ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ, “ವಿಶ್ವದ ನಾನಾ ಭಾಗಗಳಲ್ಲಿ ಸಿಲುಕಿರುವ ಭಾರತೀಯರನ್ನು ವಾಪಸ್‌ ಕರೆತರಲು ವಿದೇಶ ವ್ಯವಹಾರಗಳ ಸಚಿವಾಲಯ ವಿಮಾನದ ವ್ಯವಸ್ಥೆ ಕಲ್ಪಿಸಿರುವುದು ಸಂತಸದ ವಿಷಯ. ಇದೇ ರೀತಿ ಅರಬ್‌ ರಾಷ್ಟ್ರಗಳಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಕನ್ನಡಿಗರನ್ನು ವಾಪಸ್‌ ಕರೆತರಲು ಯಾವುದೇ ಈವರೆಗೆ ಯಾವುದೇ ವಿಮಾನದ ವ್ಯವಸ್ಥೆ ಆಗಿಲ್ಲ. ಈ ಸಂಬಂಧ ಅಗತ್ಯ ನೆರವು ನೀಡಿ ಸಹಕರಿಸಿ,”ಎಂದು ಮನವಿ ಮಾಡಿದ್ದರು.

ಅಲ್ಲದೆ, “ಸದ್ಯ ಕರ್ನಾಟಕದ ಮೂಲದ 1904 ಮಂದಿ ಯುಎಇಯಲ್ಲಿದ್ದು, ಈ ಪೈಕಿ 121 ಗರ್ಭಿಣಿಯರಿದ್ದಾರೆ. ವೀಸಾ ಅವಧಿ ಮುಗಿದ 522 ನಿರೋದ್ಯೋಗಿಗಳು, 157 ರೋಗಿಗಳು ಇತರ 95 ಮಂದಿ ಇತರೆ ಕಾರಣಗಳಿಂದ ವಾಪಸ್‌ ಬರಲಾರದೆ ಸಂಕಷ್ಟಕ್ಕೆ ಸಿಲುಕಿ ತಾಯ್ನಾಡಿಗೆ ವಾಪಸಾಗಲು ಸರ್ಕಾರದ ನೆರವನ್ನು ಕೋರಿರುತ್ತಾರೆ. ಅವರನ್ನು ಕರ್ನಾಟಕಕ್ಕೆ ವಾಪಸ್‌ ಕರೆತರಲು ವಿದೇಶ ವ್ಯವಹಾರಗಳ ಸಚಿವಾಲಯ ಸೂಕ್ತ ವಿಮಾನ ವ್ಯವಸ್ಥೆ ಮಾಡಬೇಕು,”ಎಂದು ಪತ್ರದಲ್ಲಿ ಕೋರಿದ್ದರು.

ಈ ಮಧ್ಯೆ, ಡಾ. ಅಶ್ವತ್ಥನಾರಾಯಣ ಅವರಿಗೆ ಪತ್ರ ಬರೆದಿರುವ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ ಸದಾನಂದ ಗೌಡ ಅವರು, ಅರಬ್ ರಾಷ್ಟ್ರಗಳಲ್ಲಿರುವ ಕನ್ನಡಿಗರಿಗೆ ಭಾರತಕ್ಕೆ ಮರಳಲು ವಿಮಾನ ವ್ಯವಸ್ಥೆ ಕಲ್ಪಿಸುವ ಬಗ್ಗೆ ತಾವು ಕೂಡ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವರಿಗೆ ಪತ್ರ ಬರೆದಿರುವುದಲ್ಲದೆ, ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಯುಎಇ- ಮಂಗಳೂರು ವಿಮಾನದ ವ್ಯವಸ್ಥೆಗೆ ಆದ್ಯತೆ ನೀಡಲು ಕೋರಿರುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.