ಗಾಳಿಮಳೆ: ನಾಲ್ವರ ಸಾವು
Team Udayavani, Jun 2, 2019, 6:00 AM IST
ಸಾಂದರ್ಭಿಕ ಚಿತ್ರ
ಕಾಳಗಿ: ಪ್ರತ್ಯೇಕ ಘಟನೆಗಳಲ್ಲಿ ಭಾರೀ ಗಾಳಿಮಳೆಗೆ ರಾಜ್ಯದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಮಂಗಲಗಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಗುಡುಗು, ಬಿರುಗಾಳಿ ಸಹಿತ ಸುರಿದ ಭಾರೀ ಮಳೆಗೆ ಮನೆಯೊಂದರ ಮೇಲ್ಛಾವಣಿ ಕುಸಿದು ಮೂವರು ಮೃತಪಟ್ಟಿದ್ದಾರೆ. ನಾಲ್ವರಿಗೆ ಗಾಯಗಳಾಗಿವೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನಲ್ಲಿ ಗಾಳಿಗೆ ಮರ ಉರುಳಿ ಓರ್ವ ವೃದ್ಧರು ಸಾವನ್ನಪ್ಪಿದ್ದಾರೆ.
ಮೂರ್ನಾಲ್ಕು ದಿನಗಳಲ್ಲಿ ಕೇರಳಕ್ಕೆ ಮುಂಗಾರು
ಇದೇವೇಳೆ ಮುಂಗಾರು ಮಾರುತಗಳ ಮುನ್ನಡೆ ನಿಧಾನವಾಗಿ ಬಲಗೊಳ್ಳುತ್ತಿದೆ. ಬಂಗಾಲ ಕೊಲ್ಲಿ ಸಮುದ್ರದ ನೈಋತ್ಯ, ಆಗ್ನೇಯ, ಪೂರ್ವ ಮತ್ತು ಕೇಂದ್ರ ಭಾಗಗಳನ್ನು ಈಗಾಗಲೇ ಆವರಿಸಿದ್ದು, ಅಂಡಮಾನ್ ಸಮುದ್ರ ಮತ್ತು ಅಂಡಮಾನ್ – ನಿಕೋಬಾರ್ ದ್ವೀಪಗಳನ್ನೂ ನಿಧಾನವಾಗಿ ತಲುಪುತ್ತಿವೆ. ಇನ್ನು ಮೂರ್ನಾಲ್ಕು ದಿನಗಳಲ್ಲಿ ಕೇರಳ ಕರಾವಳಿ ತಲುಪಲಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಕೇರಳ ಕರಾವಳಿಗೆ ಜೂನ್ 6ರಂದು ಆಗಮಿಸಲಿವೆ ಎಂದು ಅದು ತಿಳಿಸಿದೆ.
ಈ ನಡುವೆ ಖಾಸಗಿ ಹವಾಮಾನ ಮುನ್ಸೂಚನೆ ಸಂಸ್ಥೆಯಾದ ಸ್ಕೈಮೆಟ್ ಕೂಡ ಪ್ರಕಟನೆಯೊಂದನ್ನು ಹೊರಡಿಸಿದ್ದು, ಮುಂಗಾರು ಮಾರುತಗಳು ಜೂ. 7ರಂದು ಕೇರಳ ಕರಾವಳಿಗೆ ಅಪ್ಪಳಿಸಲಿವೆ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್