ನಾಲ್ಕು ಸಾವಿರ ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣ
Team Udayavani, Mar 29, 2020, 12:45 PM IST
ಲಂಡನ್, ಮಾ. 28: ಲಂಡನ್ ನಲ್ಲಿ ಕೋವಿಡ್ -19 ಸೋಂಕು ಹೊಂದಿದವರಿಗೆ ಚಿಕಿತ್ಸೆ ನೀಡಲು ಮೆಗಾ ಆಸ್ಪತ್ರೆಯನ್ನು ನಿರ್ಮಿಸಿದೆ. ಅದರ ಸಾಮರ್ಥ್ಯ ಎಷ್ಟು ಗೊತ್ತೇ ನಾಲ್ಕು ಸಾವಿರ ಹಾಸಿಗೆಗಳು. ಪೂರ್ವ ಲಂಡನ್ನಲ್ಲಿರುವ ಎಕ್ಸೆಲ್ ಪ್ರದರ್ಶನ ಕೇಂದ್ರವನ್ನೇ ಎನ್ ಎಚ್ ಎಸ್ ನೈಟಿಂಗೇಲ್ ತುರ್ತು ಕೊರೊನಾ ಆಸ್ಪತ್ರೆಯನ್ನಾಗಿ ಮಾರ್ಪಡಿಸುತ್ತಿದೆ.
ಬ್ರಿಟನ್ನಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿದೆ. ಲಂಡನ್ನಲ್ಲಿ ತುರ್ತಾಗಿ ಆಸ್ಪತ್ರೆ ನಿರ್ಮಿಸಿ ಚಿಕಿತ್ಸೆ ಆರಂಭಿಸದಿದ್ದರೆ ದುರಂತ ಇನ್ನೂ ಹೆಚ್ಚಬಹುದೆಂಬುದು ಬ್ರಿಟನ್ ಸರಕಾರದ ಆತಂಕ. ಈ ಹಿನ್ನೆಲೆಯಲ್ಲಿ ಎಲ್ಲ ಪೂರ್ವ ಸಿದ್ಧತೆ ಆರಂಭ ವಾಗಿದೆ. ಶುಕ್ರವಾರ ಒಂದೇ ದಿನ 181 ಹೊಸ ಪ್ರಕರಣ ಗಳು ದಾಖಲಾಗಿದ್ದು, 784 ಮಂದಿ ಇದುವರೆಗೂ ಸತ್ತಿದ್ದಾರೆ. ಸಾಮಾಜಿಕ ಅಂತರಕ್ಕೆ ಪ್ರಾಮುಖ್ಯ ಸಾಮಾಜಿಕ ಅಂತರಕ್ಕೆ ಸಾಕಷ್ಟು ಪ್ರಾಮುಖ್ಯ ನೀಡಿ ಹಾಸಿಗೆಗಳನ್ನು ಜೋಡಿಸಲಾಗುತ್ತಿದೆ.
ಅಗತ್ಯ ವಸ್ತುಗಳ ಪೂರೈಕೆಗಾಗಿ ಮತ್ತು ಸೋಂಕಿತರನ್ನು ಆಸ್ಪತ್ರೆಗೆ ತಲುಪಿಸಲು ಆಧುನಿಕ ವ್ಯವಸ್ಥೆ ಯನ್ನು ಒಳಗೊಂಡು ಸುಸಜ್ಜಿತ ಆಂಬ್ಯುಲೆನ್ಸ್ ಒದಗಿ ಸಲಾ ಗುವುದು. ಒಟ್ಟು ಎರಡು ವಿಭಾಗಗ ಳನ್ನು ರೂಪಿಸಲಿದ್ದು, ತಲಾ 2 ಸಾವಿರ ಮಂದಿಗೆ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗು ತ್ತಿದೆ. ಚಿಕಿತ್ಸೆಗೆ ಅಗತ್ಯವಿರುವ ಆಮ್ಲಜನಕ ಟ್ಯಾಂಕ್ ಮತ್ತಿ ತರ ವೈದ್ಯ ಕೀಯ ಉಪಕರಣಗಳನ್ನು ಒದಗಿಸಲಾಗುತ್ತಿದೆ.
ಎಪ್ರಿಲ್ 4ರಂದು ಪ್ರಾರಂಭ ಆಸ್ಪತ್ರೆ ರೂಪಿಸುವ ಕಾರ್ಯ ಕೊನೆಯ ಹಂತದಲ್ಲಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಎಪ್ರಿಲ್ 4ರಂದು ಆಸ್ಪತ್ರೆ ಕಾರ್ಯಾರಂಭ ಮಾಡಲಿದೆ. ಇನ್ನೂ ಜಾಗತಿಕ ಸಾಂಕ್ರಾಮಿಕ ಪಿಡುಗನ್ನು ನಿಯಂತ್ರಿಸುವಲ್ಲಿ 40 ವರ್ಷಗಳ ಕಾರ್ಯಾನುಭವ ಇರುವ ಬೊಗ್ಸೆ„ಡ್ನ (62) ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಯಲಿದೆ. ಈ ಆಸ್ಪತ್ರೆಯ ಉದ್ದ ಸುಮಾರು ಒಂದು ಕಿ.ಮೀ. ಅಗಲವೂ ಸಾಕಷ್ಟಿದೆ. ನಾಲ್ಕು ಸಾವಿರ ಮಂದಿಗೆ ಚಿಕಿತ್ಸೆ ನೀಡಲು ಸಿದ್ಧಗೊಳ್ಳುತ್ತಿರುವ ಈ ಆಸ್ಪತ್ರೆ ಇದುವರೆಗೆ ಲಂಡನ್ನ ಪ್ರದರ್ಶನ ಕೇಂದ್ರವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ