ಸ್ವಾತಂತ್ರ್ಯ ಹೋರಾಟ; ಬಾಪು ಕೈಯಲ್ಲಿ ಹೂಂಕರಿಸಿದ್ದ ಬೆತ್ತ ಕನ್ನಡ ನೆಲದ್ದು

ಸಾಬರಮತಿಯಿಂದ ದಂಡಿವರೆಗೆ ಸುಮಾರು 390 ಕಿಮೀ ಯಾತ್ರೆ ಕೈಗೊಂಡಾಗ ಇದೇ ಬೆತ್ತವನ್ನು ಬಳಸಿದ್ದರು.

Team Udayavani, Aug 15, 2022, 11:57 AM IST

ಸ್ವಾತಂತ್ರ್ಯ ಹೋರಾಟ; ಬಾಪು ಕೈಯಲ್ಲಿ ಹೂಂಕರಿಸಿದ್ದ ಬೆತ್ತ ಕನ್ನಡ ನೆಲದ್ದು

ಹುಬ್ಬಳ್ಳಿ: ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಗಾಂಧೀಜಿ ಕೈಗೊಂಡ ದಂಡಿಯಾತ್ರೆ ತನ್ನದೇ ಮಹತ್ವ ಪಡೆದುಕೊಂಡಿದೆ. ಸಾಬರಮತಿಯಿಂದ ದಂಡಿವರೆಗೆ ಸುಮಾರು 390 ಕಿ.ಮೀ. ಯಾತ್ರೆಯಲ್ಲಿ ಗಾಂಧೀಜಿ ಬಳಸಿದ್ದ ದೊಡ್ಡದಾದ ಬೆತ್ತ ಕನ್ನಡದ ನೆಲದ್ದು. ಅದನ್ನು ನೀಡಿದ್ದು ಕರ್ನಾಟಕದ ಮೊದಲ ರಾಷ್ಟ್ರಕವಿ ಎಂಬ ಖ್ಯಾತಿಯ ಮಂಜೇಶ್ವರ ಗೋವಿಂದ ಪೈಗಳು ಎನ್ನುವುದು ವಿಶೇಷ.

ದಂಡಿಯಾತ್ರೆಯಲ್ಲಿ ದೇಶದ ಸಹಸ್ರಾರು ಜನರು ಗಾಂಧೀಜಿ ಅವರನ್ನು ಹಿಂಬಾಲಿಸಿದ್ದರು. ಉತ್ತರ ಕನ್ನಡ, ಕರಾವಳಿ ಪ್ರದೇಶ ಸೇರಿ ದೇಶದ ವಿವಿಧೆಡೆಗಳಲ್ಲಿ ಉಪ್ಪಿನ ಸತ್ಯಾಗ್ರಹ ಭುಗಿಲೆದ್ದು ಸಂಚಲನ ಮೂಡಿಸಿತ್ತು.

ಕನ್ನಡ ನೆಲದ ಬಡಿಗೆ:
ಸ್ವಾತಂತ್ರ್ಯ ಹೋರಾಟಗಾರ, ಸಮಾಜ ಸುಧಾರಕ, ಪತ್ರಕರ್ತ ದತ್ತಾತ್ರೇಯ ಬಾಲಕೃಷ್ಣ ಕಾಲೇಲಕರ (ಕಾಕಾ ಕಾಲೇಲಕರ್‌ ಎಂದೇ ಖ್ಯಾತಿ) ಸ್ವಾತಂತ್ರ್ಯ ಹೋರಾಟಕ್ಕೆ ತಮ್ಮದೇ ಕೊಡುಗೆ ನೀಡಿದ್ದಾರೆ. ಅಷ್ಟೇ ಅಲ್ಲದೆ ರಾಷ್ಟ್ರಭಾಷೆ ಕಾರಣದಿಂದ ಇಡೀ ದೇಶಸುತ್ತಿದ್ದರು. ಕಾಲೇಲಕರ ಅವರು ಕನ್ನಡದ ನೆಲ ಮಂಜೇಶ್ವರಕ್ಕೆ ಭೇಟಿ ನೀಡಿದ್ದರು.

ರಾಷ್ಟ್ರಭಾಷೆಗೆ ದೇಶ ಸುತ್ತುವ ಕಾರ್ಯದ ಜತೆಗೆ ಆತ್ಮೀಯ ಸ್ನೇಹಿತ ರಾಷ್ಟ್ರಕವಿ ಗೋವಿಂದ ಪೈ ಅವರನ್ನು ಭೇಟಿಯಾಗಲೆಂದು ಮಂಜೇಶ್ವರಕ್ಕೆ ಬಂದಿದ್ದರು. ಕಾಲೇಲಕರ ಅವರು ಮಂಜೇಶ್ವರದಿಂದ ಹೊರಡುವಾಗ ಗೋವಿಂದ ಪೈ ಅವರು ಸ್ನೇಹಿತನಿಗೆ ತಮ್ಮ ನೆನಪಿಗಾಗಿ ದೊಡ್ಡ ಕೋಲು(ಬೆತ್ತ) ನೀಡಿದ್ದರು. ಗಾಂಧೀಜಿ ದಂಡಿಯಾತ್ರೆ ಕೈಗೊಂಡಾಗ ಕಾಲೇಲಕರ ಅವರು ಮಂಜೇಶ್ವರದಲ್ಲಿ ಗೋವಿಂದ ಪೈ ಅವರು ತಮಗೆ ನೀಡಿದ್ದ ಬಡಿಗೆಯನ್ನೇ ಗಾಂಧೀಜಿಗೆ ನೀಡಿದ್ದರಂತೆ. ಗಾಂಧೀಜಿ 1930ರಲ್ಲಿ ಗುಜರಾತ್‌ನ ಸಾಬರಮತಿಯಿಂದ ದಂಡಿವರೆಗೆ ಸುಮಾರು 390 ಕಿಮೀ ಯಾತ್ರೆ ಕೈಗೊಂಡಾಗ ಇದೇ ಬೆತ್ತವನ್ನು ಬಳಸಿದ್ದರು.

ಉತ್ತರ ಕರ್ನಾಟಕ ವೇದಿಕೆ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ 38ನೇ ಅಧಿವೇಶನ 1923ರಲ್ಲಿ ಕಾಕಿನಾಡದಲ್ಲಿ ಗಾಂಧೀಜಿ ಅನುಪಸ್ಥಿತಿಯಲ್ಲಿಯೇ ನಡೆದಿತ್ತು. ಮುಂದಿನ ಅಧಿವೇಶನ ಎಲ್ಲಿ ಎಂಬ ವಿಚಾರಕ್ಕೆ ಅನೇಕ ಕಡೆಯವರು ಪ್ರಸ್ತಾವನೆ ಮಂಡಿಸಿದ್ದರಾದರೂ, ಕನ್ನಡದವರೇ ಆದ ಅಂದಿನ ರಾಷ್ಟ್ರೀಯ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಗಳಲ್ಲಿ ಒಬ್ಬರಾದ ಗಂಗಾಧರರಾವ್‌ ದೇಶಪಾಂಡೆ ಕರ್ನಾಟಕದಲ್ಲಿ ಅಧಿವೇಶನ ನಡೆಯುವಂತೆ ಸಭೆ ಸಮ್ಮತಿ ಪಡೆಯುವಲ್ಲಿ ಯಶಸ್ವಿ
ಯಾಗಿದ್ದರು. 1924ರ ಡಿಸೆಂಬರ್‌ ಕೊನೆ ವಾರದಲ್ಲಿ ಬೆಳಗಾವಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ 39ನೇ ಅಧಿವೇಶನ ನಡೆದಿತ್ತು. ಅಧಿವೇಶನ ಸ್ಥಳಕ್ಕೆ ವಿಜಯನಗರ ಎಂದು ಹೆಸರಿಸಲಾಗಿತ್ತು.

ಪ್ರವೇಶ ದ್ವಾರಕ್ಕೆ ಹಂಪಿಯ ವಿರೂಪಾಕ್ಷ ದೇವಸ್ಥಾನದ ಗೋಪುರ ಮಾದರಿಯ ಬೃಹತ್‌ ಕಮಾನು ನಿರ್ಮಿಸಲಾಗಿತ್ತು. ಅಧಿವೇಶನದಲ್ಲಿ ಹುಯಿಲಗೋಳ ನಾರಾಯಣರಾವ್‌ ಅವರ “ಉದಯವಾಗಲಿ ಚೆಲುವ ಕನ್ನಡ ನಾಡು’ ಹಾಡು ಮೊಳಗಿದ್ದು, ಹಿಂದೂಸ್ಥಾನಿ ಗಾಯಕಿ ಡಾ|ಗಂಗೂಬಾಯಿ ಹಾನಗಲ್ಲ ತಮ್ಮ 11ನೇ ವಯಸ್ಸಿನಲ್ಲಿಯೇ ಇದೇ ಅಧಿವೇಶನದಲ್ಲಿ ಪ್ರಾರ್ಥನೆ ಹಾಡು ಹಾಡಿದ್ದು ಉತ್ತರ ಕರ್ನಾಟಕದ ಹೆಮ್ಮೆಯ ಸಂಗತಿಗಳಾಗಿವೆ.

ಸ್ವದೇಶಿ ಕ್ರಾಂತಿಗೆ ಕಿಡಿ ಹೊತ್ತಿಸಿದ್ದ ಅಧಿವೇಶನ
ಬೆಳಗಾವಿಯಲ್ಲಿ 1924ರಲ್ಲಿ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಅಧಿವೇಶನದಲ್ಲಿ ಪ್ರಮುಖವಾಗಿ ಹಿಂದೂ-ಮುಸ್ಲಿಂರ ಐಕ್ಯತೆ, ವಿದೇಶಿ ವಸ್ತ್ರ ಬಹಿಷ್ಕಾರ, ಸ್ವದೇಶಿ ಉತ್ಪನ್ನಗಳ ಬಳಕೆಗೆ ಒತ್ತು ನೀಡುವ ಚರ್ಚೆ, ಘೋಷಣೆಗಳು ಮೊಳಗಿದ್ದವು.

ಸ್ವದೇಶಿ ಮಂತ್ರ ಘೋಷಣೆ ಪರಿಣಾಮ ಬೆಂಗಳೂರಿನಲ್ಲಿ ಪೇಪರ್‌ ಸಂಸ್ಕರಣೆ , ಕಡ್ಡಿಪೆಟ್ಟಿಗೆ ತಯಾರಿಕೆ, ಮೇಣ ಮತ್ತು ಅರಗ ತಯಾರಿಕೆ ಉದ್ಯಮ ಆರಂಭವಾದರೆ, ಬೆಳಗಾವಿಯಲ್ಲಿ ಚರ್ಮ ಸಂಸ್ಕರಣೆ, ಮೈಸೂರಿನಲ್ಲಿ ಅಗರಬತ್ತಿಗಳ ತಯಾರಿಕೆ, ಬಳ್ಳಾರಿಯಲ್ಲಿ ಇಟ್ಟಿಗೆ ತಯಾರಿಕೆ, ಹುಬ್ಬಳ್ಳಿಯಲ್ಲಿ ಆಹಾರ ಸಂಸ್ಕರಣೆ, ಮಂಗಳೂರಿನಲ್ಲಿ ತೈಲ ಉದ್ಯಮ, ಧಾರವಾಡದಲ್ಲಿ ಬಟ್ಟೆ ಉತ್ಪಾದನೆ ಉದ್ಯಮಗಳು ಆರಂಭಗೊಂಡಿದ್ದವು.

● ಅಮರೇಗೌಡ ಗೋನವಾರ

ಟಾಪ್ ನ್ಯೂಸ್

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Hubli; ಜೋಶಿ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಸ್ವಾಮೀಜಿ ಮುಂದಾಗಬಾರದು: ಯಡಿಯೂರಪ್ಪ

Hubli; ಜೋಶಿ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಸ್ವಾಮೀಜಿ ಮುಂದಾಗಬಾರದು: ಯಡಿಯೂರಪ್ಪ

Hubli; ಸಿದ್ಧರಾಮಯ್ಯನವರೇ ನೀವು ಯಾವ ಮುಖ ಇರಿಸಿಕೊಂಡು ಆಡಳಿತ ಮಾಡುತ್ತಿದ್ದೀರಿ: ಜೋಶಿ

Hubli; ಸಿದ್ಧರಾಮಯ್ಯನವರೇ ನೀವು ಯಾವ ಮುಖ ಇರಿಸಿಕೊಂಡು ಆಡಳಿತ ಮಾಡುತ್ತಿದ್ದೀರಿ: ಜೋಶಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.