ಪ್ರವಾಸಿಗರಿಗೆ ಉಪಚಾರ ಮಾಡಿಸಿ ಸಣ್ಣಪುಟ್ಟ ವ್ಯಾಪಾರ ಮಾಡುವವರನ್ನು ಒಕ್ಕಲೆಬ್ಬಿಸದಂತೆ ಮನವಿ


Team Udayavani, Sep 29, 2021, 6:35 PM IST

ಪ್ರವಾಸಿಗರಿಗೆ ಉಪಚಾರ ಮಾಡಿಸಿ ಸಣ್ಣಪುಟ್ಟ ವ್ಯಾಪಾರ ಮಾಡುವವರನ್ನು ಒಕ್ಕಲೆಬ್ಬಿಸದಂತೆ ಮನವಿ

ಗಂಗಾವತಿ: ಆನೆಗೊಂದಿ ಸಾಣಾಪೂರ ಭಾಗದಲ್ಲಿ ನೈಸರ್ಗಿಕವಾಗಿ ಗುಡಿಸಲು ಹಾಕಿಕೊಂಡು ವ್ಯಾಪಾರ ವಹಿವಾಟು ನಡೆಸಿ ಪ್ರವಾಸಿಗರಿಗೆ ಊಟ ಉಪಚಾರ ಮಾಡುವವರನ್ನು ಒಕ್ಕಲೆಬ್ಬಿಸಬಾರದು ಮತ್ತು ಆನೆಗೊಂದಿ ಭಾಗದ 15 ಗ್ರಾಮಗಳಲ್ಲಿ ಹಂಪಿ ಅಭಿವೃದ್ಧಿ ಪ್ರಾಧಿಕಾರದ ನಿಯಮಗಳನ್ನು ಸರಳೀಕರಣ ಮಾಡುವಂತೆ ಗ್ರಾ.ಪಂ.ಗಳ ಸದಸ್ಯರು ಹಾಗೂ ವ್ಯಾಪಾರಸ್ಥರು ಶಾಸಕ ಪರಣ್ಣ ಮುನವಳ್ಳಿ ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಗ್ರಾ.ಪಂ.ಸದಸ್ಯ ಕೋಡಿ ನಾಗೇಶ ಮಾತನಾಡಿ, ಅಂಜನಾದ್ರಿ ಬೆಟ್ಟ ಹಾಗೂ ಆನೆಗೊಂದಿ ಭಾಗದ ಪ್ರಕೃತಿ ಸೌಂದರ್ಯ ಸವಿಯಲು ದೇಶ ವಿದೇಶದ ಜನರು ಆಗಮಿಸುತ್ತಾರೆ. ಅವರಿಗೆ ವಸತಿ ಊಟ ಕಲ್ಪಿಸಲು ಸ್ಥಳೀಯರು ಗುಡಿಸಲುಗಳನ್ನು ಅವರಿಗೆ ಬಾಡಿಗೆಗೆ ನೀಡಿ ದುಡಿಮೆ ಮಾಡುತ್ತಿದ್ದಾರೆ.

ಎಲ್ಲಿಯೂ ಸಿಮೆಂಟ್ ಕಟ್ಟಡ ನಿರ್ಮಿಸಿಲ್ಲ. ಆದರೂ ಕೆಲವರು ಹೊಟ್ಟೆ ಕಿಚ್ಚಿನಿಂದ ಜಿಲ್ಲಾಧಿಕಾರಿಗಳಿಗೆ ದೂರು ನೀಡುವ ಮೂಲಕ ಸ್ಥಳೀಯರನ್ನು ಒಕ್ಕಲೆಬ್ಬಿಸಲು ಯತ್ನ ನಡೆಸಿದ್ದಾರೆ. ಈಗಾಗಲೇ ಸುಪ್ರೀಂ ಕೋರ್ಟಿನ ಆದೇಶದಂತೆ ವಿರೂಪಾಪೂರ ಗಡ್ಡಿಯಲ್ಲಿದ್ದ ಸುಮಾರು 28 ರೆಸಾರ್ಟ್ ತೆರವು ಮಾಡಲಾಗಿದೆ.

ಪ್ರಸ್ತುತ ಕೇಂದ್ರ ಮತ್ತು ರಾಜ್ಯ ಪುರಾತತ್ವ ಇಲಾಖೆಯ ಸ್ಮಾರಕಗಳಿರದ ಜಾಗದಲ್ಲಿ ಗುಡಿಸಲು ಹಾಕಿಕೊಂಡು ಸಣ್ಣ ಪುಟ್ಟ ವ್ಯಾಪಾರ ಮಾಡಲಾಗುತ್ತಿದೆ. ಇದರಲ್ಲಿ ಯಾರಾದರೂ ಅನೈತಿಕ ಚಟುವಟಿಕೆ ನಡೆಸಿದರೆ ಪೊಲೀಸ್ ಇಲಾಖೆ ಕಾನೂನು ಕ್ರಮ ಕೈಗೊಳ್ಳಲಿ ಅದು ಬಿಟ್ಟು ನೇರ ಪರೋಕ್ಷವಾಗಿ ಸ್ಥಳೀಯ ಜನರಿಗೆ ಉದ್ಯೋಗ ದೊರಕಿಸಿರುವ ಹೊಟೇಲ್ ಉದ್ಯಮ ನಾಶ ಮಾಡಲು ಜಿಲ್ಲಾಡಳಿತ ಮುಂದಾಗಬಾರದು. ಶಾಸಕರು ಸಂಸದರು ಸಚಿವರು ಹಾಗೂ ಜಿಲ್ಲಾಡಳಿತ ಕೂಡಲೇ ಹಂಪಿ ಅಭಿವೃದ್ಧಿ ಪ್ರಾಧಿಕಾರದ 2021 ನೇ ಮಾಸ್ಟರ್ ಪ್ಲಾನ್(ಮಹಾಯೋಜನೆ)ಯಲ್ಲಿ ಆನೆಗೊಂದಿ ಭಾಗದಲ್ಲಿಯೂ ವ್ಯಾಪಾತರ ವಹಿವಾಟು ನಡೆಸಲು ಅವಕಾಶ ಕಲ್ಪಿಸಲು ನಿಯಮಗಳನ್ನು ಸರಳೀಕರಣ ಮಾಡಬೇಕು. ಹೊಸಪೇಟೆ ಭಾಗದಲ್ಲಿ ರೆಸಾರ್ಟ್ ಸೇರಿ ಎಲ್ಲಾ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಿದಂತೆ ಆನೆಗೊಂದಿ ಭಾಗದಲ್ಲಿ ಕಲ್ಪಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಎಜಿಪಿ ಎಚ್.ಸಿ.ಯಾದವ್, ತಾ.ಪಂ.ಮಾಜಿ ಸದಸ್ಯ ವೈ.ರಮೇಶ, ಗ್ರಾ.ಪಂ.ಅಧ್ಯಕ್ಷೆ ದುರುಗಮ್ಮ, ಉಪಾಧ್ಯಕ್ಷ ಶೇರಖಾನ್, ಗ್ರಾ.ಪಂ.ಸದಸ್ಯರಾದ ಅಶೋಕರಾಣಿ, ನಾಗೇಂದ್ರ, ರಾಮಾಂಜನೇಯ, ಸುನೀಲ್, ಅಜಗರ್ ಸೇರಿ ಅನೇಕರಿದ್ದರು.

ಇದನ್ನೂ ಓದಿ : ಆಟವಾಡುತ್ತಿದ್ದ ಬಾಲಕನ ಮೇಲೆ ಹತ್ತಿದ ಫೋರ್ಡ್ ಕಾರು

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.