ಗಂಗಾವತಿ: ಮನೋಹರಸ್ವಾಮಿ ಅಪಹರಣ ಪ್ರಕರಣದಲ್ಲಿರುವ ನಗರಸಭೆ ಸದಸ್ಯರ ಬಂಧನಕ್ಕೆ ಆಗ್ರಹ
Team Udayavani, Oct 31, 2020, 7:18 PM IST
ಗಂಗಾವತಿ: ಕಾಂಗ್ರೆಸ್ ನಗರಸಭೆ ಸದಸ್ಯ ಮನೋಹರ ಸ್ವಾಮಿ ಹಿರೇಮಠ ಅವರ ಅಪಹರಣ ಪ್ರಕರಣದಲ್ಲಿರುವ ನಗರಸಭೆ ಸದಸ್ಯರನ್ನು ಕೂಡಲೇ ಬಂಧಿಸುವಂತೆ ಮಾಜಿ ಸಂಸದ ಶಿವರಾಮಗೌಡ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಗಂಗಾವತಿ ಡಿವೈಎಸ್ ಪಿ ಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಿವರಾಮಗೌಡ ಮಾತನಾಡಿ, ಬಿಜೆಪಿ ಶಾಸಕರು ಕಾಂಗ್ರೆಸ್ ಸದಸ್ಯರನ್ನು ಅಪಹರಣ ಮಾಡಿಸುವ ಮೂಲಕ ಕೆಟ್ಟ ರಾಜಕೀಯ ಮಾಡುತ್ತಿದ್ದಾರೆ. ಅಧಿಕಾರದ ಆಸೆಯಿಂದ ಗಂಗಾವತಿಯಲ್ಲಿ ಕ್ರಿಮಿನಲ್ ರಾಜಕೀಯ ಮಾಡುವುದು ಸರಿಯಲ್ಲ. ಕೂಡಲೇ ಕಿಡ್ನಾಪ್ ಕೇಸ್ ನಲ್ಲಿ ಹೆಸರು ಇರುವ ಬಿಜೆಪಿ ನಗರಸಭೆ ಸದಸ್ಯರು ಹಾಗು ಕಾರ್ಯಕರ್ತರನ್ನು ಬಂಧಿಸಬೇಕು. ನ.02 ರಂದು ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಸಂದರ್ಭದಲ್ಲಿ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಬೇಕೆಂದು ಒತ್ತಾಯಿಸಿದರು.
ಇದನ್ನೂ ಓದಿ:ಬೆಂಗಳೂರು-ಹೈದರಾಬಾದ್ ಬಿಗ್ ಫೈಟ್: ಟಾಸ್ ಗೆದ್ದ ವಾರ್ನರ್ ಪಡೆ ಬೌಲಿಂಗ್ ಆಯ್ಕೆ
ಶೀಘ್ರ ಬಂಧನ: ಕಾಂಗ್ರೆಸ್ ಸದಸ್ಯ ಮನೋಹರ ಸ್ವಾಮಿ ಹಿರೇಮಠ ಅಪಹರಣ ಪ್ರಕರಣದಲ್ಲಿ ಪಾಲ್ಗೊಂಡವರನ್ನು ಶೀಘ್ರ ಬಂಧಿಸಲಾಗುತ್ತದೆ. ನ.02 ರಂದು ನಗರಸಭೆ ಚುನಾವಣೆ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲಾಗುತ್ತದೆ. ಹೆಚ್ಚಿನ ಬಂದೋಬಸ್ತ್ ಮಾಡಲಾಗುತ್ತದೆ. ನಿಷೇದಾಜ್ಞೆ ಜಾರಿ ಮಾಡಲಾಗುತ್ತದೆ ಸಾರ್ವಜನಿಕರಿಗೆ ಇದರಿಂದ ಯಾವುದೇ ತೊಂದರೆಯಾಗುವುದಿಲ್ಲ ಎಂದು ಡಿವೈಎಸ್ ಪಿ ರುದ್ರೇಶ ಉಜ್ಜನಕೊಪ್ಪ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
MUST WATCH
ಹೊಸ ಸೇರ್ಪಡೆ
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ
Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್ ಕಾನ್ಸ್ಟೆಬಲ್ ಗೆ ಗಾಯ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು