ಕ್ಷೇತ್ರದ ಮತದಾರರು ನನ್ನ ಜೊತೆ ಇದ್ದಾರೆ, ಹೆದರುವ ಪ್ರಶ್ನೆಯೇ ಇಲ್ಲ: ಶಾಸಕ ಮುನವಳ್ಳಿ

ಸಾವಿರಾರು ಕೋಟಿ ರೂ.ಗಳಲ್ಲಿ ಕ್ಷೇತ್ರದ ಅಭಿವೃದ್ಧಿ ಕೂಲಿ ಕೇಳಿ ಚುನಾವಣೆಗೆ ಹೋಗುವೆ

Team Udayavani, Feb 8, 2023, 7:21 PM IST

ಪಕ್ಷ, ಕ್ಷೇತ್ರದ ಮತದಾರರು ನನ್ನ ಜೊತೆ ಇದ್ದಾರೆ, ಹೆದರುವ ಪ್ರಶ್ನೆಯೇ ಇಲ್ಲ: ಶಾಸಕ ಮುನವಳ್ಳಿ

ಗಂಗಾವತಿ: ನಿಷ್ಠಾವಂತ ಕಾರ್ಯಕರ್ತರು ಹಾಗೂ ಕ್ಷೇತ್ರದ ಜನರು ನನ್ನ ಬೆನ್ನ ಹಿಂದೆ ಇದ್ದಾರೆ. ದೇಶದಾದ್ಯಂತ ಬಿಜೆಪಿ ಪಕ್ಷಕ್ಕೆ ಓಟ್ ಬ್ಯಾಂಕ್ ಸೃಷ್ಠಿ ಮಾಡಿರುವ ವಿಶ್ವನಾಯಕ ಪ್ರಧಾನಮಂತ್ರಿ ಮೋದಿಯವರಿದ್ದಾರೆ. ಸಾವಿರಾರು ಕೋಟಿ.ರೂ.ಗಳ ಅನುದಾನ ತಂದು ಕ್ಷೇತ್ರದ ಅಭಿವೃದ್ಧಿ ಮಾಡಿದ್ದು ಮತದಾರರಿಂದ ಕೂಲಿ ಕೇಳಿ ನಾನೇ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆಗೆ ಹೋಗುವೆ ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು.

ಅವರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಗಂಗಾವತಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವ ಉದ್ದೇಶದಿಂದ ಇಲ್ಲಿ ಮನೆ ಮಾಡಿ ನೂತನ ಪ್ರಾದೇಶಿಕ ಪಕ್ಷ ಸ್ಥಾಪಿಸಿ ರಾಜ್ಯದ ಗಮನ ಸೆಳೆದಿದ್ದಾರೆ. ಆದರೆ ಸ್ಥಳೀಯವಾಗಿ ಕಳೆದ 40 ವರ್ಷಗಳಿಂದ ಗಂಗಾವತಿ ಜನತೆಯ ಕಷ್ಟ ಸುಖಗಳಿಗೆ ತಾವು ನೆರವಾಗಿದ್ದು ನನ್ನ ಕಷ್ಟಸುಖಗಳಿಗೆ ಜನರು ಸಹ ಆಶ್ರಯವಾಗಿದ್ದಾರೆ. ಎಲ್ಲಿಂದಲೋ ಬಂದು ಕೋಟಿಗಟ್ಟಲೇ ಬಣ್ಣದ ಮಾತನಾಡುವವರಿಗೆ ಜನರ ಆಶೀರ್ವಾದ ಸಿಗಲು ಹೇಗೆ ಸಾಧ್ಯ. ವಿಶ್ವ ನಾಯಕ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ
ಅಮಿತ್ ಷಾ ಅವರು ಗಂಗಾವತಿ ಕ್ಷೇತ್ರವನ್ನು ವಿಶೇಷವಾಗಿ ಪರಿಗಣಸಿದ್ದು ಇಲ್ಲಿರುವ ಐತಿಹಾಸಿಕ ಕಿಷ್ಕಿಂದಾ ಕ್ಷೇತ್ರವನ್ನು ವಿಶ್ವದ ಪವಿತ್ರ ಕ್ಷೇತ್ರಗಳಲ್ಲಿ ಗುರುತಿಸುವಂತೆ ಅಭಿವೃದ್ಧಿ ಪಡಿಸುವ ನೀಲನಕ್ಷೆ ಸಿದ್ಧವಾಗಿದೆ. ತಾವು ಶಾಸಕರಾದ ಎರಡು ಅವಧಿಯಲ್ಲಿ ಇಡೀ ಕ್ಷೇತ್ರ ಸಮಗ್ರ ಶಿಕ್ಷಣ, ಆರೋಗ್ಯ. ಕೃಷಿ, ರಸ್ತೆ ಸೇರಿ ಮೂಲಸೌಕರ್ಯಗಳಿಗೆ ಸಾವಿರಾರು ಕೋಟಿ ಅನುದಾನ ತಂದು ಅಭಿವೃದ್ಧಿ ಮಾಡಿದ್ದು ಇದಕ್ಕೆ ಪರಿಹಾರವಾಗಿ ಚುನಾವಣೆಯಲ್ಲಿ ತಮಗೆ ಮತ ನೀಡುವಂತೆ ಕೂಲಿ ಕೇಳಲಿದ್ದು ಎಲ್ಲಿಂದಲೋ ಬಂದು ಬಣ್ಣದ ಮಾತಾಡಿ ಕೋಟಿಗಟ್ಟಲೇ ಹಣ ನೀಡುವ ಭರವಸೆ ನೀಡುವವರನ್ನು ಜನರು ಹೇಗೆ ಸ್ವಾಗತ ಮಾಡಲು ಸಾಧ್ಯ. ತಾವು ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ನೆಪದಲ್ಲಿ ಕ್ಷೇತ್ರದ ಜನರನ್ನು ಭೇಟಿಯಾದ ಸಂದರ್ಭದಲ್ಲಿ ಪ್ರತಿಯೊಬ್ಬರೂ ನಾವೆಲ್ಲ ನಿಮ್ಮೊಂದಿಗಿದ್ದೇವೆ ಧೈರ್ಯದಿಂದ ಚುನಾವಣೆ ಎದುರಿಸುವಂತೆ ಅಭಯ ನೀಡುತ್ತಿದ್ದಾರೆ. ಬಿಜೆಪಿಯಲ್ಲಿ ಗಟ್ಟಿ ಮುಖಂಡರು ಕಾರ್ಯಕರ್ತರಿದ್ದು ಜೊಳ್ಳು ಗಾಳಿಗೆ ತೂರಿ ಹೋಗಿದೆ ಎಂದು ಹೇಳಿದರು.

ಪಕ್ಷ ನಿಷ್ಠೆ ಹೊಂದಿದ ಸಾವಿರಾರು ಕಾರ್ಯಕರ್ತರು ನನ್ನೊಂದಿಗಿದ್ದಾರೆ. ನಾನು ಯಾರನ್ನು ಟೀಕಿಸುವುದಿಲ್ಲ ಅವಾಚ್ಯಶಬ್ದಗಳ ಮೂಲಕ ಬೈಯುವುದಿಲ್ಲ. ಇದರಿಂದ ಪರಸ್ಪರ ಹೇಳಿಕೆ ಮತದಾರರಿಗೆ ತಲೆ ನೋವು ತರಿಸುತ್ತದೆ. ನಮ್ಮ ಕೆಲಸಗಳೇ ವಿರೋಧಿಗಳಿಗೆ ಉತ್ತರವಾಗಿರಬೇಕೆನ್ನುವ ಮನೋಭಾವ ನನ್ನದು. ವಿಶ್ವದ ಅತೀ ಹೆಚ್ಚು ಸದಸ್ಯತ್ವ ಕಾರ್ಯಕರ್ತರನ್ನು ಹೊಂದಿದ ದೇಶ ಭಕ್ತ ರಾಜಕೀಯ ಪಕ್ಷ ಬಿಜೆಪಿಯಾಗಿದ್ದು ಕಾಂಗ್ರೆಸ್, ಜೆಡಿಎಸ್ ಸೇರಿ ಯಾವ ಪ್ರಾದೇಶಿಕ ಪಕ್ಷದಿಂದಲೂ ಬಿಜೆಪಿಯನ್ನು ಮಣಿಸಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ವಿರೋಧಿಗಳಿಗೆ ಟಾಂಗ್ ನೀಡಿದರು.

ಇದನ್ನೂ ಓದಿ: ಚಿಕ್ಕೋಡಿ: ಸಂಬಂಧಿಯನ್ನೇ ಕೊಲೆಗೈದ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.