ಗಂಗೊಳ್ಳಿ: ಸ್ಕೀಮ್‌ ಹೆಸರಿನಲ್ಲಿ ಗ್ರಾಹಕರಿಗೆ ಕೋಟ್ಯಂತರ ರೂ. ವಂಚನೆ


Team Udayavani, Feb 1, 2023, 9:06 PM IST

ಗಂಗೊಳ್ಳಿ: ಸ್ಕೀಮ್‌ ಹೆಸರಿನಲ್ಲಿ ಗ್ರಾಹಕರಿಗೆ ಕೋಟ್ಯಂತರ ರೂ. ವಂಚನೆ

ಗಂಗೊಳ್ಳಿ: ಗ್ರಾಹಕರಿಂದ ವಾರದ ಕಂತು ಸಂಗ್ರಹಿಸಿ ಅಧಿಕ ಹಣ ಕೊಡುವುದಾಗಿ ಹೇಳಿದ ಸಂಸ್ಥೆಯೊಂದು ಕೋಟ್ಯಂತರ ರೂ. ವಂಚಿಸಿದೆ.

ಕುಂದಬಾರಂದಾಡಿ ಗ್ರಾಮ ತೊರಳ್ಳಿ ನಡುಮನೆಯ ರತ್ನಾ ಪೊಲೀಸರಿಗೆ ದೂರು ನೀಡಿದ್ದು, ಅವರು ಪದ್ಮಾ ಹೆಗ್ಡೆ ಅವರ ಪದ್ಮಾ ರಾಯಲ್‌ ಚಾಲೆಂಜ್‌ ಸ್ಕೀಮ್‌ ಉದ್ಯಮದಲ್ಲಿ ಸದಸ್ಯರಾಗಿದ್ದರು. ಪದ್ಮಾ ಹೆಗ್ಡೆ ಹಾಗೂ ಮೂಕಾಂಬು ಅವರು ಸೇರಿ ತಮ್ಮ ಉದ್ಯಮದಲ್ಲಿ ನೀವು ಸದಸ್ಯರಾದರೆ ನಿಮ್ಮನ್ನು ಕ್ಯಾಶಿಯರ್‌ ಆಗಿಸುತ್ತೇವೆ. 2 ಲಕ್ಷ ರೂ. ಡೆಪಾಸಿಟ್‌ ಇಟ್ಟರೆ, 20 ಸಾವಿರ ರೂ. ಸಂಬಳ ನೀಡುವುದಾಗಿ ನಂಬಿಸಿದ್ದರು. ರತ್ನಾ ಅವರು 2 ಲಕ್ಷ ರೂ. ಡೆಪಾಸಿಟ್‌ ಇಟ್ಟು ಸಂಸ್ಥೆಗೆ ಗ್ರಾಹಕರನ್ನು ಸೇರುವಂತೆ ಮಾಡಿದರು. ಒಬ್ಬ ಗ್ರಾಹಕರನ್ನು ಸೇರ್ಪಡೆ ಮಾಡಿದರೆ 100 ರೂ. ಕಮಿಷನ್‌ ನೀಡುವುದಾಗಿ ನಂಬಿಸಿದ್ದರು. ಅದರಂತೆ ರತ್ನಾ 131 ಗ್ರಾಹಕರನ್ನು ಸೇರ್ಪಡೆಗೊಳಿಸಿದ್ದರು.

ಅಧಿಕ ಲಾಭ
ಗ್ರಾಹಕರು ವಾರಕ್ಕೆ 500 ರೂ.ನಂತೆ 50 ಕಂತು ಕಟ್ಟಿದಲ್ಲಿ ಅವರಿಗೆ 34ಸಾವಿರ ರೂ. ನೀಡುವುದಾಗಿಯೂ, ವಾರಕ್ಕೆ 950 ರೂ. 50 ಕಂತು ಕಟ್ಟಿದಲ್ಲಿ 68 ಸಾವಿರ ರೂ., ತಿಂಗಳಿಗೆ 1ಸಾವಿರ ರೂ. 12 ಕಂತು ಕಟ್ಟಿದರೆ 17ಸಾವಿರ ರೂ., ತಿಂಗಳಿಗೆ 2 ಸಾವಿರ ರೂ.ನಂತೆ 12 ತಿಂಗಳು ಕಟ್ಟಿದರೆ 34 ಸಾವಿರ ರೂ., 50 ಸಾವಿರ ರೂ.ಒಂದು ವರ್ಷ ಡೆಪಾಸಿಟ್‌ ಇಟ್ಟರೆ 80ಸಾವಿರ ರೂ ., 1ಲಕ್ಷ ರೂ. ಒಂದು ವರ್ಷ ಡೆಪಾಸಿಟ್‌ ಇಟ್ಟರೆ 1.60 ಲಕ್ಷ ರೂ.ಕೊಡುವುದಾಗಿ ಹೇಳಿದ್ದರು.

ಕಚೇರಿಗೆ ಜಮೆ
ಕೆಲವು ಗ್ರಾಹಕರಲ್ಲಿ ವಾರಕ್ಕೆ 500 ರೂ., ಕೆಲವು ಗ್ರಾಹಕರಲ್ಲಿ 1 ಸಾವಿರ ರೂ. ಸಂಗ್ರಹಿಸುತ್ತಿದ್ದು, ಹಣವನ್ನು ಬಗ್ವಾಡಿಯಲ್ಲಿರುವ ಪದ್ಮಾ ಹೆಗ್ಡೆ ಅವರ ಕಚೇರಿಯಲ್ಲಿ ಪದ್ಮಾ ಹೆಗ್ಡೆ, ಸೆಲ್ವಾರಾಜ, ಪದ್ಮಾ ಹೆಗ್ಡೆ ಅವರ ಪುತ್ರ ದಿಶಾಂತ್‌ ಹೆಗ್ಡೆ, ಪುತ್ರಿ ಸುಹಾನಿ ಹೆಗ್ಡೆ ಅವರು ಸಹಿ ಹಾಕಿ ಹಣ ಸ್ವೀಕರಿಸುತ್ತಿದ್ದರು. ರತ್ನಾ ಅವರು ಗ್ರಾಹಕರಿಂದ ಹಣ ಸಂಗ್ರಹಿಸುವ ಬಗ್ಗೆ ಪದ್ಮಾ ಹೆಗ್ಡೆ ಅವರು ನೀಡಿದ ಕಾರ್ಡ್‌ಗೆ ಹಣ ಸ್ವೀಕರಿಸಿದ ಬಗ್ಗೆ ಸಹಿ ಹಾಕುತ್ತಿದ್ದರು. ಸಂಸ್ಥೆಗೆ ಗ್ರಾಹಕರಿಂದ ಹಣ ಡೆಪಾಸಿಟ್‌ ಇರಿಸಿಕೊಂಡು ಅವರಿಗೆ ಕರಾರು ಪತ್ರ ನೀಡುತ್ತಿದ್ದರು.

ವಂಚನೆ
ಸುಜಾತಾ ಹಾಗೂ ಅವರ ಗ್ರಾಹಕರಿಗೆ 24.05 ಲಕ್ಷ ರೂ., ಸುಭಾಷ ಹಾಗೂ ಅವರ ಗ್ರಾಹಕರಿಗೆ 5,92,500 ರೂ., ಭಾಗ್ಯಶ್ರೀ ಹಾಗೂ ಅವರ ಗ್ರಾಹಕರಿಗೆ 7,87,500 ರೂ., ಯಶೋದಾ ಹಾಗೂ ಅವರ ಗ್ರಾಹಕರಿಗೆ 9.12 ಲಕ್ಷ ರೂ., ರೇವತಿ ಹಾಗೂ ಅವರ ಗ್ರಾಹಕರಿಗೆ 4,05,800 ರೂ., ದೀಪಾ ಹಾಗೂ ಅವರ ಗ್ರಾಹಕರಿಗೆ 3.94 ಲಕ್ಷ ರೂ., ರಾಘವೇಂದ್ರ ಪೂಜಾರಿ ಹಾಗೂ ಅವರ ಗ್ರಾಹಕರಿಗೆ 11,00,515 ರೂ., ಭಾರತಿ ಹಾಗೂ ಅವರ ಗ್ರಾಹಕರಿಗೆ 2.14 ಲಕ್ಷ ರೂ., ಸರೋಜಾ ಹಾಗೂ ಅವರ ಗ್ರಾಹಕರಿಗೆ 3.90 ಲಕ್ಷ ರೂ., ಸವಿತಾ ಹಾಗೂ ಅವರ ಗ್ರಾಹಕರಿಗೆ 76,300 ರೂ., ಸುಶೀಲಾ ಹಾಗೂ ಅವರ ಗ್ರಾಹಕರಿಗೆ 2.50 ಲಕ್ಷ ರೂ. ಒಟ್ಟು 1,07,60,615 ರೂ. ಸಂಗ್ರಹಿಸಿ ಮರಳಿ ನೀಡಿಲ್ಲ.

ಶಾಲೆಗೂ ವಂಚನೆ
2022 ನೇ ಸಾಲಿನ ಜೂನ್‌ ತಿಂಗಳಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂದಬಾರಂದಾಡಿ ಶಾಲೆಯನ್ನು 5 ವರ್ಷಗಳವರೆಗೆ ದತ್ತು ಪಡೆದು 6 ಜನ ಗೌರವ ಶಿಕ್ಷಕಿಯರನ್ನು ಹಾಗೂ ಇಬ್ಬರು ಆಯಾರನ್ನು ನೇಮಿಸಿ ಸಂಬಳ ಕೊಡುವುದಾಗಿ ಹೇಳಿದ್ದು, ಶಾಲಾ ಮಕ್ಕಳಿಗೆ ಮೂಲ ಸೌಕರ್ಯ ಒದಗಿಸುವುದಾಗಿ ಹೇಳಿ ಮಕ್ಕಳಿಗೂ ಮೂಲ ಸೌಕರ್ಯವನ್ನು ಒದಗಿಸದೇ, ಶಿಕ್ಷಕರಿಗೆ ಹಾಗೂ ಆಯಾಗಳಿಗೆ ಸಂಬಳ ಕೊಡದೇ ನಂಬಿಸಿ ಮೋಸ ಮಾಡಿದ್ದಾರೆ. , ಸದಸ್ಯರಿಗೆ ಹಾಗೂ ಗ್ರಾಹಕರಿಗೆ ಹಿಂದಿರುಗಿಸಬೇಕಾದ ಹಣವನ್ನು ನೀಡದೇ ಅವರ ಕಚೇರಿಗಳನ್ನು ಬಂದ್‌ ಮಾಡಿ ಸದಸ್ಯರು ಹಾಗೂ ಗ್ರಾಹಕರಿಗೆ ನಂಬಿಸಿ ಮೋಸ ಮಾಡಿದ್ದಾಗಿ ನೀಡಿದ ದೂರಿನಂತೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ದೇಶದ ಆರ್ಥಿಕ ಅಭಿವೃದ್ದಿಗೆ ಪೂರಕವಾದ ಬಜೆಟ್:ಗೃಹ ಸಚಿವ ಆರಗ ಜ್ಞಾನೇಂದ್ರ

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.