- Thursday 12 Dec 2019
“ಭಾರತೀಯರು,ಚೀನೀಯರು ಎಸೆವ ತ್ಯಾಜ್ಯ ಲಾಸ್ ಏಂಜಲೀಸ್ಗೆ ಬರ್ತಿದೆ’
Team Udayavani, Nov 13, 2019, 7:17 PM IST
ನ್ಯೂಯಾರ್ಕ್: ಭಾರತ, ಚೀನ, ರಷ್ಯಾದಂತಹ ದೇಶಗಳು ಸಮುದ್ರಕ್ಕೆಸೆವ ತ್ಯಾಜ್ಯಗಳು ಲಾಸ್ ಏಂಜಲೀಸ್ ಕಡೆಗೆ ಬರುತ್ತಿವೆ. ಅಲ್ಲಿ ತ್ಯಾಜ್ಯ ನಿಯಂತ್ರಣಕ್ಕೆ ಅವರು ಏನನ್ನೂ ಮಾಡುತ್ತಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೂರಿದ್ದಾರೆ.
ಹವಾಮಾನ ಬದಲಾವಣೆ ಒಂದು ಸಂಕೀರ್ಣ ವಿಚಾರವಾಗಿದ್ದು, ನಾನು ಈ ಬಗ್ಗೆ ಚಿಂತಿತನಾಗಿದ್ದೇನೆ ಮತ್ತು ನಾನೂ ಹಲವು ವಿಧದಲ್ಲಿ ಓರ್ವ ಪರಿಸರವಾದಿಯಾಗಿದ್ದೇನೆ ಎಂದು ಹೇಳಿದ್ದಾರೆ.
ನ್ಯೂಯಾರ್ಕ್ ಅರ್ಥಶಾಸ್ತ್ರ ಕ್ಲಬ್ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಮಾತನಾಡುತ್ತ, ಹವಾಮಾನದ ಬಗ್ಗೆ ಹೆಚ್ಚು ಚಿಂತಿತನಾಗಿದ್ದೇನೆ. ನಾನು ಅತ್ಯಂತ ಶುದ್ಧ ಗಾಳಿ-ನೀರು ಜಗತ್ತಿನಲ್ಲಿರಬೇಕೆಂದು ಬಯಸುತ್ತೇನೆ ಎಂದು ಹೇಳಿದ್ದಾರೆ.
ಇದೇ ವೇಳೆ ಪ್ಯಾರಿಸ್ ಹವಾಮಾನ ಒಪ್ಪಂದ ಅಮೆರಿಕ ಪಾಲಿಗೆ ದುರಂತವಾಗಿದೆ. ಬೇರೆಲ್ಲ ದೇಶಗಳ ಬಗ್ಗೆ ಅದೇನೂ ಮಾಡಿಲ್ಲ. ಭಾರತದಂತೆ ನಾವು ಕೂಡ ಅಭಿವೃದ್ಧಿ ಹೊಂದುತ್ತಿರುವ ದೇಶವಾಗಿದೆ ಎಂದು ಪ್ರತಿಪಾದಿಸಿದ್ದಾರೆ.
ಅಚ್ಚರಿಯ ವಿಚಾರವೆಂದರೆ, ಈ ಮೊದಲು ಹವಾಮಾನ ಬದಲಾವಣೆ, ಜಾಗತಿಕ ತಾಪಮಾನ ಎಂದೇ ಇಲ್ಲ ಎಂದು ಹೇಳುತ್ತಿದ್ದ ಟ್ರಂಪ್ ಇದೀಗ ಬೇರೆ ದೇಶಗಳನ್ನು ಇದಕ್ಕೆ ದೂಷಿಸುತ್ತಿದ್ದಾರೆ. ಜಗತ್ತಿನಲ್ಲೇ ಅತ್ಯಧಿಕ ಇಂಗಾಲ ಹೊರಸೂಸುವ ದೇಶಗಳಲ್ಲಿ ಅಮೆರಿಕ ಮುಂಚೂಣಿಯಲ್ಲಿದೆ.
ಈ ವಿಭಾಗದಿಂದ ಇನ್ನಷ್ಟು
-
ಬೆಂಗಳೂರು: ಈ ವರ್ಷಾಂತ್ಯದೊಳಗೆ ಎಐಸಿಸಿ ಪುನಾರಚನೆಯಾಗಲಿದ್ದು, ಆ ವೇಳೆಯಲ್ಲಿಯೇ ರಾಜ್ಯದಲ್ಲಿಯೂ ಕೆಪಿಸಿಸಿ ಪುನಾರಚನೆ ಮಾಡಲು ಸಿದ್ಧತೆ ನಡೆದಿದೆ. ರಾಷ್ಟ್ರಮಟ್ಟದಲ್ಲಿ...
-
ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಬೇಕೋ, ಬೇಡವೋ ಎಂಬ ಕುರಿತು ಸರಕಾರಕ್ಕೆ ಇನ್ನೂ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ....
-
ಆರೋಪ ರುಜುವಾತಾಗಬೇಕಾದ ಮೊದಲೇ ಹತ್ಯೆಗೈಯ್ಯಲ್ಪಡುವುದು ಸಾಮಾನ್ಯ ಸಂದರ್ಭದಲ್ಲಿ ಸರಿಯಾದದ್ದಲ್ಲ ನಿಜ. ಆದರೆ ದೇಶದಲ್ಲಿ ದುರುಳರ ಅಟ್ಟಹಾಸ ಮೇರೆ ಮೀರುತ್ತಿರುವಾಗ,...
-
ಬೆಂಗಳೂರು: ಪಾರದರ್ಶಕತೆ ಹಾಗೂ ಯೋಜನೆಗಳಿಗೆ ವೇಗ ನೀಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇ- ಆಡಳಿತ ಜಾರಿಗೊಳಿಸಲು ಮುಂದಾಗಿದ್ದು, ಬರುವ ತಿಂಗಳಿನಿಂದಲೇ...
-
ದಿನದಿನಕ್ಕೆ ಮಹಿಳೆಯರ ಬಗ್ಗೆ ಬೇಜವಾಬ್ದಾರಿ ಹೇಳಿಕೆ ನೀಡುವ ರಾಜಕಾರಣಿಗಳ ಸಂಖ್ಯೆಹೆಚ್ಚುತ್ತಿದೆ. ಜನನಾಯಕರಿಗೆ ಸೂಕ್ಷ್ಮತೆಯ ಪ್ರಜ್ಞೆಯೊಂದನ್ನು ಜನಾಭಿಪ್ರಾಯದ...
ಹೊಸ ಸೇರ್ಪಡೆ
-
ಬೆಂಗಳೂರು: ಈ ವರ್ಷಾಂತ್ಯದೊಳಗೆ ಎಐಸಿಸಿ ಪುನಾರಚನೆಯಾಗಲಿದ್ದು, ಆ ವೇಳೆಯಲ್ಲಿಯೇ ರಾಜ್ಯದಲ್ಲಿಯೂ ಕೆಪಿಸಿಸಿ ಪುನಾರಚನೆ ಮಾಡಲು ಸಿದ್ಧತೆ ನಡೆದಿದೆ. ರಾಷ್ಟ್ರಮಟ್ಟದಲ್ಲಿ...
-
ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಬೇಕೋ, ಬೇಡವೋ ಎಂಬ ಕುರಿತು ಸರಕಾರಕ್ಕೆ ಇನ್ನೂ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ....
-
ಆರೋಪ ರುಜುವಾತಾಗಬೇಕಾದ ಮೊದಲೇ ಹತ್ಯೆಗೈಯ್ಯಲ್ಪಡುವುದು ಸಾಮಾನ್ಯ ಸಂದರ್ಭದಲ್ಲಿ ಸರಿಯಾದದ್ದಲ್ಲ ನಿಜ. ಆದರೆ ದೇಶದಲ್ಲಿ ದುರುಳರ ಅಟ್ಟಹಾಸ ಮೇರೆ ಮೀರುತ್ತಿರುವಾಗ,...
-
ಬೆಂಗಳೂರು: ಪಾರದರ್ಶಕತೆ ಹಾಗೂ ಯೋಜನೆಗಳಿಗೆ ವೇಗ ನೀಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇ- ಆಡಳಿತ ಜಾರಿಗೊಳಿಸಲು ಮುಂದಾಗಿದ್ದು, ಬರುವ ತಿಂಗಳಿನಿಂದಲೇ...
-
ದಿನದಿನಕ್ಕೆ ಮಹಿಳೆಯರ ಬಗ್ಗೆ ಬೇಜವಾಬ್ದಾರಿ ಹೇಳಿಕೆ ನೀಡುವ ರಾಜಕಾರಣಿಗಳ ಸಂಖ್ಯೆಹೆಚ್ಚುತ್ತಿದೆ. ಜನನಾಯಕರಿಗೆ ಸೂಕ್ಷ್ಮತೆಯ ಪ್ರಜ್ಞೆಯೊಂದನ್ನು ಜನಾಭಿಪ್ರಾಯದ...