ನೀರೆ: ಮನೆ ಅಂಗಳಕ್ಕೆ ಬಂದ ಕಾಡುಕೋಣ!


Team Udayavani, Mar 30, 2022, 7:48 AM IST

ನೀರೆ: ಮನೆ ಅಂಗಳಕ್ಕೆ ಬಂದ ಕಾಡುಕೋಣ!

ಕಾರ್ಕಳ: ನೀರೆ ಗ್ರಾಮದ ಮುಳ್ಯಕ್ಕಾರು ಜಡ್ಡು ಎಂಬಲ್ಲಿ ಕಾಡು ಕೋಣ ಜನವಸತಿ ಪ್ರದೇಶಕ್ಕೆ ನುಗ್ಗಿದ ಘಟನೆ ಮಂಗಳವಾರ ನಡೆದಿದೆ.

ನೀರೆ ಬೈಲೂರಿನ ಮೀಸಲು ಅರಣ್ಯದ ಮುಳ್ಯಕ್ಕಾರು ನಿವಾಸಿ ಲೀಲಾವತಿ ಪೂಜಾರ್ತಿ ಅವರ ಮನೆಯ ಅಂಗಳಕ್ಕೆ ಮಧ್ಯಾಹ್ನ 1.30ರ ವೇಳೆಗೆ ಕಾಡುಕೋಣ ಓಡಿ ಬಂದಿದೆ. ಓಡಾಟಕ್ಕೆ ಮನೆಯ ಕೆಲ ಭಾಗಗಳಿಗೆ ಹಾನಿಯಾಗಿದೆ. ಜಮೀನಿನಲ್ಲಿ ಬೆಳೆದ ಕೃಷಿಯನ್ನು ಹಾಳುಗೆಡವಿದೆ.

ಮನೆ ಮಂದಿ ಬೊಬ್ಬೆ ಹಾಕಿ ಓಡಿಸುವ ಪ್ರಯತ್ನ ಮಾಡಿದರು. ಕಾಡುಕೋಣ ದಾಳಿಯ ಬಗ್ಗೆ ಮನೆಯವರು, ಅಕ್ಕಪಕ್ಕದವರು ಗ್ರಾ.ಪಂ.ಗೆ ಮಾಹಿತಿ ನೀಡಿದರು. ಸ್ಥಳಕ್ಕೆ ನೀರೆ ಗ್ರಾಮ ಪಂಚಾಯತ್‌ ಪಿಡಿಒ, ಅಧ್ಯಕ್ಷರು, ಉಪಾಧ್ಯಕ್ಷರು, ವಾರ್ಡ್‌ ಸದಸ್ಯರು, ತಾ.ಪಂ. ಮಾಜಿ ಸದಸ್ಯರು, ಗ್ರಾಮ ಕರಣಿಕರು ತೆರಳಿ ಪರಿಶೀಲನೆ ನಡೆಸಿದ್ದಲ್ಲದೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು.

ಸೆರೆ ಹಿಡಿಯಲು ಹರಸಾಹಸ
ಕಾರ್ಕಳ ಅರಣ್ಯ ವಿಭಾಗದ ಆರ್‌ಎಫ್ಒ ದಿನೇಶ್‌ ನೇತೃತ್ವದಲ್ಲಿ ಕಾರ್ಕಳ ವನ್ಯಜೀವಿ ವಿಭಾಗದ ಆರ್‌ಎಫ್ಒ ಸ್ಮಿತಾ ಸಹಕಾರದಲ್ಲಿ ಕಾರ್ಕಳ ವಿಭಾಗದ ವನ್ಯಜೀವಿ, ಅರಣ್ಯ ಇಲಾಖೆ ಎರಡು ವಿಭಾಗಗಳ ಫಾರೆಸ್ಟರ್‌, ಅರಣ್ಯ ಇಲಾಖೆ ಅಧಿಕಾರಿ ಸಿಬಂದಿ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಲಾಯಿತು.

ಮಂಗಳೂರಿನಿಂದ ನುರಿತ ಪಶುವೈದ್ಯರನ್ನು ಕರೆಯಿಸಿಕೊಂಡು ಸ್ಥಳಕ್ಕೆ ಜೆಸಿಬಿ, ಟಿಪ್ಪರ್‌, ಟ್ರ್ಯಾಕ್ಟರ್‌ ತರಿಸಿಕೊಂಡು ಸೆರೆಹಿಡಿಯುವ ಕಾರ್ಯಾಚರಣೆ ಆರಂಭಿಸಲಾಯಿತು. ಸತತ ಐದು ಗಂಟೆಗಳ ಪ್ರಯತ್ನದ ಬಳಿಕ ಅರಿವಳಿಕೆ ನೀಡಿ ಕಾಡುಕೋಣವನ್ನು ಸೆರೆಹಿಡಿಯಲಾಯಿತು. ಬಳಿಕ ಕುದುರೆಮುಖ ವನ್ಯಜೀವಿಧಾಮಕ್ಕೆ ಬಿಡಲಾಗಿದೆ.
ಕಾಡುಕೋಣದ ವಯಸ್ಸು ಸುಮಾರು ಎಂಟು ವರ್ಷ ಎಂದು ಅಂದಾಜಿಸಲಾಗಿದೆ.

ಸಿಟ್ಟಾದ ಕಾಡುಕೋಣ
ಕಾಡುಕೋಣ ಜನರ ಬೊಬ್ಬೆಯಿಂದ ಗಾಬರಿಕೊಂಡಿತ್ತು. ತತ್‌ಕ್ಷಣ ಕಾರ್ಯಾಚರಣೆ ನಡೆಸದಿದ್ದರೆ ಮತ್ತಷ್ಟು ಅಪಾಯವಾಗುವ ಸಾಧ್ಯತೆ ಇತ್ತು ಎಂದು ಆರ್‌ಎಫ್ಒ ದಿನೇಶ್‌ ಉದಯವಾಣಿಗೆ ಪ್ರತಿಕ್ರಿಯಿಸಿದರು.

ಉದಯವಾಣಿ ಎಚ್ಚರಿಸಿತ್ತು
ಕಾರ್ಕಳ ತಾಲೂಕಿನಲ್ಲಿ ಕಾಡುಕೋಣ ಹಾವಳಿ ಹೆಚ್ಚಿರುವ ಬಗ್ಗೆ ಇತ್ತೀಚೆಗಷ್ಟೇ ಉದಯವಾಣಿ ವರದಿ ಪ್ರಕಟಿಸಿತ್ತು. ಜನವಸತಿ ಪ್ರದೇಶದಲ್ಲಿ ಅಪಾಯ ತಂದೊಡ್ಡುವ ರೀತಿ ಅವುಗಳ ಓಡಾಟವಿರುವ ಬಗ್ಗೆ ಗಮನ ಸೆಳೆಯಲಾಗಿತ್ತು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.