ಕೋವಿಡ್ ಕಷ್ಟ ಕಾಲದಲ್ಲಿ ಬಂಗಾರವೇ ಜೀವನಾಧಾರ! ಚಿನ್ನ ಅಡ ಇಡುವವರ ಸಂಖ್ಯೆಯಲ್ಲಿ ಭಾರೀ ಹೆಚ್ಚಳ

ವಾಪಸ್‌ ಪಡೆಯದ ಜನ, ಹೆಚ್ಚುತ್ತಿದೆ ಹರಾಜು ಕ್ರಿಯೆ

Team Udayavani, May 18, 2021, 9:15 PM IST

ಕೋವಿಡ್ ಕಷ್ಟ ಕಾಲದಲ್ಲಿ ಬಂಗಾರವೇ ಜೀವನಾಧಾರ! ಚಿನ್ನ ಅಡ ಇಡುವವರ ಸಂಖ್ಯೆಯಲ್ಲಿ ಭಾರೀ ಹೆಚ್ಚಳ

ನವ ದೆಹಲಿ: ಕೊರೊನಾ ಮೊದಲನೇ ಅಲೆ ಉಂಟು ಮಾಡಿದ ಆರ್ಥಿಕ ಸಂಕಷ್ಟದಿಂದ ಇನ್ನೂ ಲಕ್ಷಾಂತರ ಮಂದಿ ಹೊರಬಂದಿಲ್ಲ. ಇದರ ನಡುವೆಯೇ ಎರಡನೇ ಅಲೆಯೂ ಬಂದಿದ್ದು ಭಾರತದ ಮಧ್ಯಮ ವರ್ಗವನ್ನೇ ಅಲುಗಾಡಿಸಿ ಬಿಟ್ಟಿದೆ. ಇದು ಎಷ್ಟರ ಮಟ್ಟಿಗೆ ಎಂದರೆ, ಕಷ್ಟಕಾಲಕ್ಕೆ ಎಂದು ಅಡ ಇಟ್ಟಿದ್ದ ಬಂಗಾರವನ್ನೇ ಬಿಡಿಸಿಕೊಳ್ಳಲಾಗದಷ್ಟು ಸಂಕಷ್ಟಕ್ಕೆ ಇಳಿದಿದ್ದಾರೆ.

ಹೌದು, ರೇಟಿಂಗ್‌ ಏಜೆನ್ಸಿ ಕ್ರಿಸಿಲ್‌ ನಡೆಸಿದ ಸಮೀಕ್ಷೆಯಲ್ಲಿ ಈ ಅಂಶ ಬಹಿರಂಗವಾಗಿದ್ದು, ಕಳೆದ ವರ್ಷ ಅಪಾರ ಪ್ರಮಾಣದಲ್ಲಿ ಬಂಗಾರ ಅಡ ಇಡಲಾಗಿದೆ. ಆದರೆ, ಇದನ್ನು ಬಿಡಿಸಿಕೊಳ್ಳಲಾಗದ ಮಂದಿ, ಅದರ ತಂಟೆಗೇ ಹೋಗುತ್ತಿಲ್ಲ. ಇದರಿಂದಾಗಿ ಬಂಗಾರ ಅಡ ಇಡಿಸಿಕೊಂಡು ಹಣ ಕೊಟ್ಟ ಬ್ಯಾಂಕರ್‌ ಕಂಪನಿಗಳು ಇದನ್ನು ಹರಾಜು ಹಾಕುವ ಪ್ರಕ್ರಿಯೆಗೆ ಮುಂದಾಗಿವೆ.

ಕ್ರಿಸಿಲ್‌ ಸಂಸ್ಥೆ ಪ್ರಕಾರ, 2020ರ ಏಪ್ರಿಲ್‌ 12ರ ನಂತರ ಬ್ಯಾಂಕುಗಳಲ್ಲಿ ಬಂಗಾರ ಅಡಮಾನ ಇಡುವ ಪ್ರಕ್ರಿಯೆ ಹೆಚ್ಚಾಗಿದೆ. ಅಲ್ಲದೆ, 2021ರ ಫೆಬ್ರವರಿವರೆಗೆ ನಡೆಸಿದ ಅಧ್ಯಯನದ ಪ್ರಕಾರ, ಬಂಗಾರ ಇಡುವವರ ಸಂಖ್ಯೆ ಶೇ.70ರಷ್ಟು ಹೆಚ್ಚಾಗಿದೆ. ಅಂದರೆ, ಸುಮಾರು 56 ಸಾವಿರ ಕೋಟಿ ರೂ.ಗಳಷ್ಟು ಸಾಲವಾಗಿ ಪಡೆಯಲಾಗಿದೆ.

ಬಂಗಾರದ ರೇಟ್‌ ಕಡಿಮೆ
ಕಳೆದ ವರ್ಷ ಸಾಂಕ್ರಾಮಿಕ ರೋಗದ ತೀವ್ರತೆ ಹೆಚ್ಚಾಗುತ್ತಿದ್ದಂತೆ ರಿಸರ್ವ್‌ ಬ್ಯಾಂಕ್‌ ಆಫ್ ಇಂಡಿಯಾ ಒಂದು ನಿಯಮ ರೂಪಿಸಿತ್ತು. ಈ ಪ್ರಕಾರವಾಗಿ 2021ರ ಮಾರ್ಚ್‌ 31ರ ವರೆಗೆ ಅಡಮಾನವಿಟ್ಟ ಬಂಗಾರದ ಮೌಲ್ಯದ ಶೇ.90ರಷ್ಟು ಹಣವನ್ನು ಸಾಲವಾಗಿ ನೀಡಬಹುದಾಗಿತ್ತು. ಇದಕ್ಕೂ ಮುನ್ನ ಶೇ.75ರಷ್ಟು ಮೌಲ್ಯವನ್ನು ಮಾತ್ರ ಸಾಲವಾಗಿ ನೀಡಲಾಗುತ್ತಿತ್ತು.

ವಿಚಿತ್ರ ವೆಂದರೆ, ಆಗ ಬಂಗಾರದ ಬೆಲೆ ಪ್ರತಿ 10 ಗ್ರಾಂ.ಗೆ 57 ಸಾವಿರ ರೂ.ಗಳಷ್ಟಿತ್ತು. ಆದರೆ, ಈಗ ಬಂಗಾರದ ಮೇಲೆ ಪ್ರತಿ 10 ಗ್ರಾಂ.ಗೆ 45 ಸಾವಿರದ ಸನಿಹಕ್ಕೆ ಬಂದಿದೆ. ಹೀಗಾಗಿ ಬಂಗಾರದ ಬೆಲೆಯೂ ಕಡಿಮೆಯಾಗಿದ್ದು, ಜನ ಅಡವಿಟ್ಟ ಬಂಗಾರವನ್ನು ಬಿಡಿಸಿಕೊಳ್ಳಲು ಮುಂದಾಗುತ್ತಿಲ್ಲ ಎಂದು ಹೇಳಲಾಗುತ್ತಿದೆ.

ಬ್ಯಾಂಕುಗಳಿಂದ ಒತ್ತಡ
ಈಗಾಗಲೇ ಬ್ಯಾಂಕುಗಳು ಬಂಗಾರದ ಅಡಮಾನ ಮೌಲ್ಯವನ್ನು ಮತ್ತೆ ಶೇ.75ಕ್ಕೆ ಇಳಿಸಿವೆ. ಜತೆಗೆ ಹಳೇ ಸಾಲದ ಬಡ್ಡಿ ಕಟ್ಟುವಂತೆಯೂ ಹೇಳುತ್ತಿವೆ. ಆದರೂ, ಜನ ವೈದ್ಯಕೀಯ ವೆಚ್ಚ ಸೇರಿದಂತೆ ಇತರೆ ವೆಚ್ಚದಿಂದಾಗಿ ಬಿಡಿಸಿಕೊಳ್ಳಲು ಹೋಗುತ್ತಿಲ್ಲ. ಹೀಗಾಗಿ, ಬ್ಯಾಂಕುಗಳು ಚಿನ್ನವನ್ನು ಹರಾಜು ಹಾಕಲು ಮುಂದಾಗುತ್ತಿವೆ.

ಶೇ.75 ಸಾಲವಾಗಿ ನೀಡುವ ಬಂಗಾರದ ಮೇಲಿನ ಮೌಲ್ಯದ ಹಣ

ಶೇ.90 ಕೊರೊನಾ ಕಾಲದಲ್ಲಿ ಆರ್‌ಬಿಐ ನಿಗದಿ ಮಾಡಿದ್ದ ಸಾಲವಾಗಿ ನೀಡುವ ಮೌಲ್ಯ

56,000 ಕೋಟಿ ಬಂಗಾರ ಅಡ ಇಟ್ಟು ಸಾಲವಾಗಿ ಪಡೆದ ಒಟ್ಟಾರೆ ಹಣ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.