ಕರಾವಳಿಯ ವಿವಿಧೆಡೆ ಗುಡುಗು, ಗಾಳಿ ಸಹಿತ ಉತ್ತಮ ಮಳೆ


Team Udayavani, Apr 27, 2020, 5:45 AM IST

ಕರಾವಳಿಯ ವಿವಿಧೆಡೆ ಗುಡುಗು, ಗಾಳಿ ಸಹಿತ ಉತ್ತಮ ಮಳೆ

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ವಿವಿಧೆಡೆಗಳಲ್ಲಿ ರವಿವಾರ ಸಂಜೆ ವೇಳಗೆ ಗುಡುಗು, ಗಾಳಿ ಸಹಿತ ಮಳೆಯಾಗಿದೆ.

ಅರಬಿ ಸಮುದ್ರದಲ್ಲಿ ನಿಮ್ನ ಒತ್ತಡದ ಪರಿಣಾಮ ಮೂರು ದಿನಗಳಿಂದ ಕೆಲವು ಕಡೆ ಉತ್ತಮ ಮಳೆಯಾಗುತ್ತಿದೆ. ಮಂಗಳೂರು, ಬೆಳ್ತಂಗಡಿ, ಗುರುವಾಯನಕೆರೆ, ಮುಂಡಾಜೆ, ಮಡಂತ್ಯಾರು, ಕಳೆಂಜ, ಬಂಟ್ವಾಳ, ಬಿ.ಸಿ.ರೋಡ್‌, ಉಪ್ಪಿನಂಗಡಿ, ವಿಟ್ಲ, ಪುತ್ತೂರು, ಕಡಬ, ಸುಳ್ಯ, ಸುರತ್ಕಲ್‌, ಕೋಟೆಕಾರ್‌ ಸೇರಿದಂತೆ ಸುತ್ತಮುತ್ತಲಿನ ಪ್ರದೇಶ ಗಳ‌ಲ್ಲಿ ಉತ್ತಮ ಮಳೆಯಾಗಿದೆ.ಉಡುಪಿ ಜಿಲ್ಲೆಯ ಮಣಿಪಾಲ, ಪಡುಬಿದ್ರಿ, ಕಟಪಾಡಿ, ಕಾಪು, ಶಿರ್ವ, ಕಾರ್ಕಳ ಮುಂತಾದ ಕಡೆಗಳಲ್ಲಿ ಸಂಜೆ ವೇಳೆಗೆ ಮಳೆ ಸುರಿದಿದೆ.

ಬೆಳ್ತಂಗಡಿ ತಾಲೂಕಿನ ಬೆಳ್ತಂಗಡಿ, ಉಜಿರೆ, ಧರ್ಮಸ್ಥಳ, ಕೊಕ್ಕಡ, ಅರಸಿನಮಕ್ಕಿ, ಕಳೆಂಜ, ಕಾಯತ್ತìಡ್ಕ, ದಾಸೋಡಿ, ಕೇದಿಂಬೊಟ್ಟು, ಮಿಯ್ನಾರು, ಪುದುವೆಟ್ಟು, ಪಿಲಿಗೂಡು, ಗುರುವಾಯನಕೆರೆ, ಮಡಂತ್ಯಾರು ಸುತ್ತಮುತ್ತ ಮಿಂಚು-ಗುಡುಗು, ಗಾಳಿ ಸಹಿತ ಮಳೆಯಾಗಿದೆ. ಕಳೆಂಜ, ಕೊಕ್ಕಡ ಸುತ್ತಮುತ್ತ ಒಂದು ತಾಸಿಗೂ ಅಧಿಕ ಉತ್ತಮ ಮಳೆಯಾಗಿದೆ.

ಬಂಟ್ವಾಳ ತಾಲೂಕಿನ ಬಹುತೇಕ ಕಡೆ ರವಿವಾರಸಂಜೆ ಗಾಳಿ ಸಿಡಿಲು ಸಹಿತ ಧಾರಾಕಾರ ಮಳೆಯಾಗಿದೆ. ಸಂಜೆ 5.45ರ ವೇಳೆಗೆ ಮಳೆ ಆರಂಭಗೊಂಡಿದ್ದು, ಒಂದು ತಾಸಿಗೂ ಅಧಿಕ ಹೊತ್ತು ಸುರಿದಿದೆ.

ಎರಡು ದಿನ ಮಳೆ ಸಾಧ್ಯತೆ
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಪಣಂಬೂರಿನಲ್ಲಿ 35 ಡಿ.ಸೆ. ಗರಿಷ್ಠ ಮತ್ತು 27 ಡಿ.ಸೆ. ಕನಿಷ್ಠ ಉಷ್ಣಾಂಶ ದಾಖಲಾಗಿತ್ತು. ಕರಾವಳಿ ಭಾಗದಲ್ಲಿ ಮುಂದಿನ ಎರಡು ದಿನಗಳಲ್ಲಿ ಸಂಜೆ ವೇಳೆಗೆ ಗಾಳಿಯೊಂದಿಗೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ದ.ಕ. ಜಿಲ್ಲೆಯಲ್ಲಿ 64.5 ಮಿ.ಮೀ. ನಿಂದ 115.5 ಮಿ.ಮೀ. ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಅದೇ ರೀತಿ 10ರಿಂದ 20 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ.

ಸಿಡಿಲು ಬಡಿದು ಹಾನಿ
ಕಡಬ ತಾಲೂಕಿನ ಕುಟ್ರಾಪ್ಪಾಡಿ ಗ್ರಾಮದ ಮೀನಾಡಿ ನಿವಾಸಿ ಬಾಳಪ್ಪ ಗೌಡ ಅವರ ಮನೆಗೆ ಸಿಡಿಲು ಬಡಿದು ಒಂದು ಪಾರ್ಶ್ವ ಹಾನಿಗೀಡಾಗಿದೆ. ಮನೆಯಲ್ಲಿದ್ದವರು ಅದೃಷ್ಟವಶಾತ್‌ ಅಪಾಯದಿಂದ ಪಾರಾಗಿದ್ದಾರೆ. ಇಚಿಲಂಪಾಡಿಯ ಪಾದೆ ನಿವಾಸಿ ಸಾಂತಪ್ಪ ಗೌಡ ಅವರ ಮನೆಗೂ ಮಳೆಯಿಂದ ಹಾನಿಯಾಗಿದೆ. ಆಲಂಕಾರು ಗೋಳಿತ್ತಡಿ ಸಮೀಪ ಗಾಳಿಗೆ ಬೃಹತ್‌ ಗಾತ್ರದ ಮರವೊಂದು ರಸ್ತೆಗುರುಳಿದ ಪರಿಣಾಮ ಕೆಲಕಾಲ ರಸ್ತೆ ತಡೆ ಉಂಟಾಗಿತ್ತು. ಬಳಿಕ ಕಡಬ ಪೊಲೀಸರು ಸ್ಥಳೀಯರ ಸಹಕಾರದಿಂದ ಮರವನ್ನು ತೆರವುಗೊಳಿಸಿದ್ದಾರೆ. ಮರ ಬಿದ್ದುದರಿಂದ ವಿದ್ಯುತ್‌ ತಂತಿಗೆ ಹಾನಿಯಾಗಿದೆ.

ಸಿಡಿಲು ಬಡಿದು ಹಾನಿ
ನೆರಿಯ ಗ್ರಾ.ಪಂ. ವ್ಯಾಪ್ತಿಯ ಅಕ್ಕೊಲೆಯಲ್ಲಿ ಸಿಡಿಲಿನ ಆಘಾತಕ್ಕೆ ಶಬೀರ್‌ ಗಾಯಗೊಂಡಿದ್ದಾರೆ. ಚಾರ್ಮಾಡಿ ಘಾಟಿಯ ಎರುಕಲ್ಲು ಗುಡ್ಡಕ್ಕೂ ಸಿಡಿಲು ಬಡಿದಿದೆ. ನೆರಿಯ ಗ್ರಾಮದ ಪುಲ್ಲಾಜೆಯಲ್ಲಿ ಸೀತಮ್ಮ ಅವರ ಮನೆಗೆ ಬೃಹತ್‌ ಗಾತ್ರದ ಮರ ಹಾಗೂ ತೆಂಗಿನ ಮರ ಬಿದ್ದು ಹಾನಿಯಾಗಿದೆ. ಮನೆಯೊಳಗೆ ಶೇಖರಿಸಿಟ್ಟಿದ್ದ 2 ಕ್ವಿಂಟಾಲ್‌ ಅಡಿಕೆ, ದಿನಸಿ ಸಾಮಗ್ರಿ ನಷ್ಟವಾಗಿದೆ.

ಕೊಡಗು: ವಿವಿಧೆಡೆ ಮಳೆ
ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದ್ದು, ರವಿವಾರ ನಾಪೋಕ್ಲು, ಬೇತು ಗ್ರಾಮ ವ್ಯಾಪ್ತಿಯಲ್ಲಿ ಗುಡುಗು, ಗಾಳಿ ಸಹಿತ ಉತ್ತಮ ಮಳೆಯಾಗಿದೆ.ಜಿಲ್ಲಾ ಕೇಂದ್ರ ಸ್ಥಾನ ಮಡಿಕೇರಿಯಲ್ಲಿ ಮೋಡ ಕವಿದ ವಾತಾವರಣವಿದ್ದು, ಗುಡುಗು ಸಹಿತ ತುಂತುರು ಮಳೆಯಾಗಿದೆ.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.