ತ್ವಚೆಯ ಸೌಂದರ್ಯಕ್ಕೂ ಉತ್ತಮ…ಒಂದೆಲಗ ಸೊಪ್ಪಿನಲ್ಲಿದೆ ಹಲವು ಔಷಧೀಯ ಗುಣಗಳು..


ಕಾವ್ಯಶ್ರೀ, Feb 7, 2023, 6:45 PM IST

ತ್ವಚೆಯ ಸೌಂದರ್ಯಕ್ಕೂ ಉತ್ತಮ…ಒಂದೆಲಗ ಸೊಪ್ಪಿನಲ್ಲಿದೆ ಹಲವು ಔಷಧೀಯ ಗುಣಗಳು..

ಒಂದೆಲಗ ಎಂಬುದು ಒಂದು ಎಲೆಯುಳ್ಳ ಸಸ್ಯ. ಇದನ್ನು ಬಾಹ್ಮಿ ಎಂದೂ ಕರೆಯಲಾಗುತ್ತದೆ. ತೋಟದಲ್ಲಿ, ಹಿತ್ತಲಿನಲ್ಲಿ… ಹೀಗೆ ನೀರಿನಂಶ ಹೆಚ್ಚಿರುವ ಸ್ಥಳದಲ್ಲಿ ಇದನ್ನು ಬೆಳೆಯಲಾಗುತ್ತದೆ. ಇದನ್ನು ಆಹಾರವಾಗಿ ಬಳಸಲಾಗುತ್ತಿದ್ದು, ಆರೋಗ್ಯ ತುಂಬಾ ಪ್ರಯೋಜನಕಾರಿಯಾಗಿದೆ. ನಮ್ಮ ಸುತ್ತಮುತ್ತಲಿನಲ್ಲೇ ಇರುವ ಈ ಗಿಡ ಹಲವಾರು ಆರೋಗ್ಯಪೂರ್ಣ ಗುಣಗಳನ್ನು ಹೊಂದಿದೆ. ಆರೋಗ್ಯಕ್ಕೆ ಮಾತ್ರವಲ್ಲದೇ ಚರ್ಮ, ಕೂದಲಿಗೂ ಇದು ಒಳ್ಳೆಯದು. ಇದರ ಬಗ್ಗೆ ಹೆಚ್ಚಿನ ಮಹತ್ವ ತಿಳಿದುಕೊಳ್ಳೋಣ..

1) ಸಕ್ಕರೆ ಕಾಯಿಲೆ ನಿಯಂತ್ರಣ: ಒಂದೆಲಗ ಸೊಪ್ಪನ್ನು ಒಣಗಿಸಿ ಪುಡಿ ಮಾಡಿ ಮಧುಮೇಹ ಇರುವವರು ಸೇವಿಸಿದರೆ ಸಕ್ಕರೆ ಕಾಯಿಲೆ ನಿಯಂತ್ರಿಸಬಹುದು.

2) ಕೆಮ್ಮು, ಉಸಿರಾಟದ ತೊಂದರೆ ಇರುವವರು ಇದರ ರಸವನ್ನು ಜೇನುತುಪ್ಪದೊಂದಿಗೆ ಬೆರೆಸಿ ಸೇವಿಸಿzರೆ ಒಳ್ಳೆಯದು.

3) ಕಣ್ಣಿನ ಆರೋಗ್ಯ: ಒಂದೆಲಗದಲ್ಲಿರುವ ಆಂಟಿ ಆಕ್ಸಿಡೆಂಟ್ ಗಳು ಕಣ್ಣಿನ ನರಗಳಿಗೆ ತುಂಬಾ ಒಳ್ಳೆಯದು. ದಿನವಿಡಿ ಮೊಬೈಲ್ ಅಥವಾ ಕಂಪ್ಯೂಟರ್ ಸ್ಕ್ರೀನ್ ನೋಡಿ ಕಣ್ಣು ಉರಿಯುತ್ತಿದ್ದರೆ ಒಂದೆಲಗ ಸಸ್ಯದ ಜ್ಯೂಸ್ ಕುಡಿದರೆ ಕಣ್ಣಿನ ಆರೋಗ್ಯ ಚೆನ್ನಾಗಿರುತ್ತದೆ. ಇದರಲ್ಲಿರುವ ಶೀತದ ಗುಣ ದೇಹದ ಉಷ್ಣತೆಯನ್ನು ಕಡಿಮೆ ಮಾಡಿ ಸಮತೋಲನದಲ್ಲಿಡಲು ಸಹಕರಿಯಾಗಿದೆ.

4) ಮಲಬದ್ಧತೆ ಸಮಸ್ಯೆಗೆ: ಮಲಬದ್ದತೆ ಸಮಸ್ಯೆಯಿಂದಬಳಲುತ್ತಿರುವವರು ಒಂದೆಲಗ ಸೊಪ್ಪಿನ ಚಟ್ನಿ, ಪಲ್ಯ ಸೇವಿಸುವುದು ಒಳ್ಳೆಯದು.

5) ಜ್ಞಾಪಕ ಶಕ್ತಿ ಹೆಚ್ಚಿಸಲು: ಒಂದೆಲಗದಲ್ಲಿರುವ ವಿಶೇಷ ಪೋಷಕಾಂಶಗಳನ್ನು ಮೆದುಳಿಗೆ ನೀಡುವುದರಿಂದ ಸ್ಮರಣ ಶಕ್ತಿ ಹೆಚ್ಚುತ್ತದೆ. ಇದನ್ನು ದಿನನಿತ್ಯ ಸೇವಿಸಿದರೆ ಬುದ್ದಿ ಚುರುಕಾಗುತ್ತದೆ. ಚಿಕ್ಕ ಮಕ್ಕಳಿಗೆ ಖಾಲಿ ಹೊಟ್ಟೆಗೆ ಪ್ರತಿದಿನ ಇದರ ಎರಡು ಎಲೆಗಳನ್ನು ತಿನ್ನಲು ಕೊಡುವುದರಿಂದ ಜ್ಞಾಪಕ ಶಕ್ತಿ ವೃದ್ಧಿಯಾಗುತ್ತದೆ. ಒಂದೆಲಗ ರಸಕ್ಕೆ ಸ್ವಲ್ಪ ಹಾಲು ಮತ್ತು ಬೆಲ್ಲ ಸೇರಿಸಿ ಬೆಳಿಗ್ಗೆ ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು. ಇದರಿಂದ ಮೆದುಳಿಗೆ ಪೋಷಕಾಂಶಗಳು ದೊರೆತು ಏಕಾಗ್ರತೆ ಮತ್ತು ಬುದ್ದಿವಂತಿಕೆ ಹೆಚ್ಚಾಗುತ್ತದೆ.

6) ಚರ್ಮದ ಕಾಂತಿ: ಒಂದೆಲಗ ಸೊಪ್ಪಿನ ರಸ ಸೇವಿಸುವುದರಿಂದ ದೇಹದಲ್ಲಿ ರಕ್ತಪರಿಚಲನೆ ಉತ್ತಮವಾಗುತ್ತದೆ. ರಕ್ತಪರಿಚಲನೆಯಿಂದ ಚರ್ಮದ ಕಾಂತಿ ಹೆಚ್ಚುತ್ತದೆ. ಚರ್ಮದ ಹೊರಪದರ ಶುದ್ದಗೊಳಿಸಿ ಕಾಂತಿ ಹೊರಹೊಮ್ಮುವಂತೆ ಮಾಡುತ್ತದೆ. ಒಂದೆಲಗ ಸೊಪ್ಪಿನ ಫೆಸ್ ಪ್ಯಾಕ್ ತಯಾರಿಸಿ ಹಚ್ಚಿಕೊಳ್ಳುವುದರಿಂದ ಮೊಡವೆ, ತುರಿಕೆ ಕಡಿಮೆಯಾಗುತ್ತದೆ.

7) ಕೂದಲಿನ ಆರೋಗ್ಯ: ತಲೆಕೂದಲು ಉದುರುವುದು ತಡೆಯುತ್ತದೆ ಹಾಗೂ ಕೂದಲು ಉತ್ತಮವಾಗಿ ಬೆಳೆಯಲು ಸಹಕಾರಿ. ಒಂದೆಲಗದಲ್ಲಿರುವ ಪೋಷಕಾಂಶಗಳು ಕೂದಲು ಉದುರದೆ ಉದ್ದವಾಗಿ ಬೆಳೆಯಲು ಸಹಾಯ ಮಾಡುತ್ತದೆ. ಒಂದೆಲಗದಿಂದ ತಯಾರಿಸಿದ ಎಣ್ಣೆಯನ್ನು ಕೂದಲಿಗೆ ಹಚ್ಚುವುದರಿಂದ ಕೊದಲು ಹೊಳಪಾಗುವುದರೊಮದಿಗೆ ಸಮೃದ್ಧವಾಗಿ ಬೆಳೆಯುತ್ತದೆ. ಸೀಳು ಕೂದಲು, ತಲೆಹೊಟ್ಟು ಸಮಸ್ಯೆ ನಿವಾರಿಸುವುದರೊಂದಿಗೆ ಒಂದೆಲಗವನ್ನು ತಲೆಗೆ ಹಚ್ಚುವುದರಿಂದ ದೇಹದಲ್ಲಿನ ಉಷ್ಣತೆ ಕಡಿಮೆ ಮಾಡುತ್ತದೆ.

8) ಬ್ಯಾಕ್ಟಿರಿಯಾ ನಿವಾರಣೆ:ಬ್ಯಾಕ್ಟೀರಿಯಾ ಮತ್ತು ವೈರಲ್ ಸೋಂಕನ್ನು ನಿವಾರಿಸುತ್ತದೆ. ಈ ಸಸ್ಯವನ್ನು ಸಾಮಾನ್ಯ ಶೀತ, ಮೂತ್ರನಾಳದ ಸೋಂಕು, ಕ್ಷಯರೋಗ, ಕುಷ್ಟರೋಗ, ಹಂದಿಜ್ವರ, ಭೇದಿ, ಕಾಲರಾ ಇತ್ಯಾದಿ ಚಿಕಿತ್ಸೆಗೆ ಬಳಸಿಕೊಳ್ಳಬಹುದು.

9) ಬಳಲಿಕೆ ನಿವಾರಣೆಗೆ: ಒಂದೆಲಗ ಸೊಪ್ಪು ಬಳಲಿಕೆ ನಿವಾರಣೆ ಮಾಡಲು ತುಂಬಾ ಸಹಕಾರಿಯಾಗಿದೆ. ಇದನ್ನು ಸೇವಿಸಿದರೆ ನಿಮ್ಮಲ್ಲಿನ ಬಳಲಿಕೆ ದೂರವಾಗಿ ಶಕ್ತಿ ಬರುತ್ತದೆ.

10) ಗಾಯ, ಸುಟ್ಟ ಗಾಯಕ್ಕೆ: ಈ ಸಸ್ಯದಲ್ಲಿ ಬ್ಯಾಕ್ಟೀರಿಯಾ ವಿರೋಧಿ, ವೈರಲ್ ವಿರೋಧಿ ಮತ್ತು ಉರಿಯೂತ ಶಮನಕಾರಿ ಗುಣಗಳು ಇವೆ. ಇದನ್ನು ಗಾಯ, ಸುಟ್ಟ ಗಾಯ, ಸೋರಿಯಾಸಿಸ್ ಚಿಕಿತ್ಸೆಗೆ ಬಳಸಬಹುದು. ಇದು ಗಾಯ, ಸುಟ್ಟಗಾಯ ಶಮನ ಮಾಡುತ್ತದೆ. ಇದು ಬಾಧಿತ ಜಾಗಕ್ಕೆ ರಕ್ತಸಂಚಾರ ಹೆಚ್ಚಿಸಿ, ಆ್ಯಂಟಿಆಕ್ಸಿಡೆಂಟ್ ಮಟ್ಟ ವೃದ್ಧಿಸುತ್ತದೆ. ನಿಮ್ಮ ಮನೆ ಹಿತ್ತಲಿನಲ್ಲಿ ಆಥವಾ ನೀರು ಜಾಸ್ತಿ ಇರುವ ಪ್ರದೇಶದಲ್ಲಿ ಬಾಹ್ಮಿ ಸಸ್ಯ ನೆಟ್ಟು, ಅದನ್ನು ಉಪಯೋಗಿಸುತ್ತಾ ಆರೋಗ್ಯವಾಗಿರಿ.

– ಕಾವ್ಯಶ್ರೀ

ಟಾಪ್ ನ್ಯೂಸ್

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು

Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.