ತ್ವಚೆಯ ಸೌಂದರ್ಯಕ್ಕೂ ಉತ್ತಮ…ಒಂದೆಲಗ ಸೊಪ್ಪಿನಲ್ಲಿದೆ ಹಲವು ಔಷಧೀಯ ಗುಣಗಳು..


ಕಾವ್ಯಶ್ರೀ, Feb 7, 2023, 6:45 PM IST

ತ್ವಚೆಯ ಸೌಂದರ್ಯಕ್ಕೂ ಉತ್ತಮ…ಒಂದೆಲಗ ಸೊಪ್ಪಿನಲ್ಲಿದೆ ಹಲವು ಔಷಧೀಯ ಗುಣಗಳು..

ಒಂದೆಲಗ ಎಂಬುದು ಒಂದು ಎಲೆಯುಳ್ಳ ಸಸ್ಯ. ಇದನ್ನು ಬಾಹ್ಮಿ ಎಂದೂ ಕರೆಯಲಾಗುತ್ತದೆ. ತೋಟದಲ್ಲಿ, ಹಿತ್ತಲಿನಲ್ಲಿ… ಹೀಗೆ ನೀರಿನಂಶ ಹೆಚ್ಚಿರುವ ಸ್ಥಳದಲ್ಲಿ ಇದನ್ನು ಬೆಳೆಯಲಾಗುತ್ತದೆ. ಇದನ್ನು ಆಹಾರವಾಗಿ ಬಳಸಲಾಗುತ್ತಿದ್ದು, ಆರೋಗ್ಯ ತುಂಬಾ ಪ್ರಯೋಜನಕಾರಿಯಾಗಿದೆ. ನಮ್ಮ ಸುತ್ತಮುತ್ತಲಿನಲ್ಲೇ ಇರುವ ಈ ಗಿಡ ಹಲವಾರು ಆರೋಗ್ಯಪೂರ್ಣ ಗುಣಗಳನ್ನು ಹೊಂದಿದೆ. ಆರೋಗ್ಯಕ್ಕೆ ಮಾತ್ರವಲ್ಲದೇ ಚರ್ಮ, ಕೂದಲಿಗೂ ಇದು ಒಳ್ಳೆಯದು. ಇದರ ಬಗ್ಗೆ ಹೆಚ್ಚಿನ ಮಹತ್ವ ತಿಳಿದುಕೊಳ್ಳೋಣ..

1) ಸಕ್ಕರೆ ಕಾಯಿಲೆ ನಿಯಂತ್ರಣ: ಒಂದೆಲಗ ಸೊಪ್ಪನ್ನು ಒಣಗಿಸಿ ಪುಡಿ ಮಾಡಿ ಮಧುಮೇಹ ಇರುವವರು ಸೇವಿಸಿದರೆ ಸಕ್ಕರೆ ಕಾಯಿಲೆ ನಿಯಂತ್ರಿಸಬಹುದು.

2) ಕೆಮ್ಮು, ಉಸಿರಾಟದ ತೊಂದರೆ ಇರುವವರು ಇದರ ರಸವನ್ನು ಜೇನುತುಪ್ಪದೊಂದಿಗೆ ಬೆರೆಸಿ ಸೇವಿಸಿzರೆ ಒಳ್ಳೆಯದು.

3) ಕಣ್ಣಿನ ಆರೋಗ್ಯ: ಒಂದೆಲಗದಲ್ಲಿರುವ ಆಂಟಿ ಆಕ್ಸಿಡೆಂಟ್ ಗಳು ಕಣ್ಣಿನ ನರಗಳಿಗೆ ತುಂಬಾ ಒಳ್ಳೆಯದು. ದಿನವಿಡಿ ಮೊಬೈಲ್ ಅಥವಾ ಕಂಪ್ಯೂಟರ್ ಸ್ಕ್ರೀನ್ ನೋಡಿ ಕಣ್ಣು ಉರಿಯುತ್ತಿದ್ದರೆ ಒಂದೆಲಗ ಸಸ್ಯದ ಜ್ಯೂಸ್ ಕುಡಿದರೆ ಕಣ್ಣಿನ ಆರೋಗ್ಯ ಚೆನ್ನಾಗಿರುತ್ತದೆ. ಇದರಲ್ಲಿರುವ ಶೀತದ ಗುಣ ದೇಹದ ಉಷ್ಣತೆಯನ್ನು ಕಡಿಮೆ ಮಾಡಿ ಸಮತೋಲನದಲ್ಲಿಡಲು ಸಹಕರಿಯಾಗಿದೆ.

4) ಮಲಬದ್ಧತೆ ಸಮಸ್ಯೆಗೆ: ಮಲಬದ್ದತೆ ಸಮಸ್ಯೆಯಿಂದಬಳಲುತ್ತಿರುವವರು ಒಂದೆಲಗ ಸೊಪ್ಪಿನ ಚಟ್ನಿ, ಪಲ್ಯ ಸೇವಿಸುವುದು ಒಳ್ಳೆಯದು.

5) ಜ್ಞಾಪಕ ಶಕ್ತಿ ಹೆಚ್ಚಿಸಲು: ಒಂದೆಲಗದಲ್ಲಿರುವ ವಿಶೇಷ ಪೋಷಕಾಂಶಗಳನ್ನು ಮೆದುಳಿಗೆ ನೀಡುವುದರಿಂದ ಸ್ಮರಣ ಶಕ್ತಿ ಹೆಚ್ಚುತ್ತದೆ. ಇದನ್ನು ದಿನನಿತ್ಯ ಸೇವಿಸಿದರೆ ಬುದ್ದಿ ಚುರುಕಾಗುತ್ತದೆ. ಚಿಕ್ಕ ಮಕ್ಕಳಿಗೆ ಖಾಲಿ ಹೊಟ್ಟೆಗೆ ಪ್ರತಿದಿನ ಇದರ ಎರಡು ಎಲೆಗಳನ್ನು ತಿನ್ನಲು ಕೊಡುವುದರಿಂದ ಜ್ಞಾಪಕ ಶಕ್ತಿ ವೃದ್ಧಿಯಾಗುತ್ತದೆ. ಒಂದೆಲಗ ರಸಕ್ಕೆ ಸ್ವಲ್ಪ ಹಾಲು ಮತ್ತು ಬೆಲ್ಲ ಸೇರಿಸಿ ಬೆಳಿಗ್ಗೆ ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು. ಇದರಿಂದ ಮೆದುಳಿಗೆ ಪೋಷಕಾಂಶಗಳು ದೊರೆತು ಏಕಾಗ್ರತೆ ಮತ್ತು ಬುದ್ದಿವಂತಿಕೆ ಹೆಚ್ಚಾಗುತ್ತದೆ.

6) ಚರ್ಮದ ಕಾಂತಿ: ಒಂದೆಲಗ ಸೊಪ್ಪಿನ ರಸ ಸೇವಿಸುವುದರಿಂದ ದೇಹದಲ್ಲಿ ರಕ್ತಪರಿಚಲನೆ ಉತ್ತಮವಾಗುತ್ತದೆ. ರಕ್ತಪರಿಚಲನೆಯಿಂದ ಚರ್ಮದ ಕಾಂತಿ ಹೆಚ್ಚುತ್ತದೆ. ಚರ್ಮದ ಹೊರಪದರ ಶುದ್ದಗೊಳಿಸಿ ಕಾಂತಿ ಹೊರಹೊಮ್ಮುವಂತೆ ಮಾಡುತ್ತದೆ. ಒಂದೆಲಗ ಸೊಪ್ಪಿನ ಫೆಸ್ ಪ್ಯಾಕ್ ತಯಾರಿಸಿ ಹಚ್ಚಿಕೊಳ್ಳುವುದರಿಂದ ಮೊಡವೆ, ತುರಿಕೆ ಕಡಿಮೆಯಾಗುತ್ತದೆ.

7) ಕೂದಲಿನ ಆರೋಗ್ಯ: ತಲೆಕೂದಲು ಉದುರುವುದು ತಡೆಯುತ್ತದೆ ಹಾಗೂ ಕೂದಲು ಉತ್ತಮವಾಗಿ ಬೆಳೆಯಲು ಸಹಕಾರಿ. ಒಂದೆಲಗದಲ್ಲಿರುವ ಪೋಷಕಾಂಶಗಳು ಕೂದಲು ಉದುರದೆ ಉದ್ದವಾಗಿ ಬೆಳೆಯಲು ಸಹಾಯ ಮಾಡುತ್ತದೆ. ಒಂದೆಲಗದಿಂದ ತಯಾರಿಸಿದ ಎಣ್ಣೆಯನ್ನು ಕೂದಲಿಗೆ ಹಚ್ಚುವುದರಿಂದ ಕೊದಲು ಹೊಳಪಾಗುವುದರೊಮದಿಗೆ ಸಮೃದ್ಧವಾಗಿ ಬೆಳೆಯುತ್ತದೆ. ಸೀಳು ಕೂದಲು, ತಲೆಹೊಟ್ಟು ಸಮಸ್ಯೆ ನಿವಾರಿಸುವುದರೊಂದಿಗೆ ಒಂದೆಲಗವನ್ನು ತಲೆಗೆ ಹಚ್ಚುವುದರಿಂದ ದೇಹದಲ್ಲಿನ ಉಷ್ಣತೆ ಕಡಿಮೆ ಮಾಡುತ್ತದೆ.

8) ಬ್ಯಾಕ್ಟಿರಿಯಾ ನಿವಾರಣೆ:ಬ್ಯಾಕ್ಟೀರಿಯಾ ಮತ್ತು ವೈರಲ್ ಸೋಂಕನ್ನು ನಿವಾರಿಸುತ್ತದೆ. ಈ ಸಸ್ಯವನ್ನು ಸಾಮಾನ್ಯ ಶೀತ, ಮೂತ್ರನಾಳದ ಸೋಂಕು, ಕ್ಷಯರೋಗ, ಕುಷ್ಟರೋಗ, ಹಂದಿಜ್ವರ, ಭೇದಿ, ಕಾಲರಾ ಇತ್ಯಾದಿ ಚಿಕಿತ್ಸೆಗೆ ಬಳಸಿಕೊಳ್ಳಬಹುದು.

9) ಬಳಲಿಕೆ ನಿವಾರಣೆಗೆ: ಒಂದೆಲಗ ಸೊಪ್ಪು ಬಳಲಿಕೆ ನಿವಾರಣೆ ಮಾಡಲು ತುಂಬಾ ಸಹಕಾರಿಯಾಗಿದೆ. ಇದನ್ನು ಸೇವಿಸಿದರೆ ನಿಮ್ಮಲ್ಲಿನ ಬಳಲಿಕೆ ದೂರವಾಗಿ ಶಕ್ತಿ ಬರುತ್ತದೆ.

10) ಗಾಯ, ಸುಟ್ಟ ಗಾಯಕ್ಕೆ: ಈ ಸಸ್ಯದಲ್ಲಿ ಬ್ಯಾಕ್ಟೀರಿಯಾ ವಿರೋಧಿ, ವೈರಲ್ ವಿರೋಧಿ ಮತ್ತು ಉರಿಯೂತ ಶಮನಕಾರಿ ಗುಣಗಳು ಇವೆ. ಇದನ್ನು ಗಾಯ, ಸುಟ್ಟ ಗಾಯ, ಸೋರಿಯಾಸಿಸ್ ಚಿಕಿತ್ಸೆಗೆ ಬಳಸಬಹುದು. ಇದು ಗಾಯ, ಸುಟ್ಟಗಾಯ ಶಮನ ಮಾಡುತ್ತದೆ. ಇದು ಬಾಧಿತ ಜಾಗಕ್ಕೆ ರಕ್ತಸಂಚಾರ ಹೆಚ್ಚಿಸಿ, ಆ್ಯಂಟಿಆಕ್ಸಿಡೆಂಟ್ ಮಟ್ಟ ವೃದ್ಧಿಸುತ್ತದೆ. ನಿಮ್ಮ ಮನೆ ಹಿತ್ತಲಿನಲ್ಲಿ ಆಥವಾ ನೀರು ಜಾಸ್ತಿ ಇರುವ ಪ್ರದೇಶದಲ್ಲಿ ಬಾಹ್ಮಿ ಸಸ್ಯ ನೆಟ್ಟು, ಅದನ್ನು ಉಪಯೋಗಿಸುತ್ತಾ ಆರೋಗ್ಯವಾಗಿರಿ.

– ಕಾವ್ಯಶ್ರೀ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

1–qwewqe

Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.