ಇಂದಿನಿಂದ ಸರಕಾರಿ ಬಸ್ ಸಂಚಾರ : ದಕ್ಷಿಣ ಕನ್ನಡ, ಮೈಸೂರು ಬಿಟ್ಟು ಉಳಿದೆಡೆ ಆರಂಭ
Team Udayavani, Jun 21, 2021, 7:40 AM IST
ಬೆಂಗಳೂರು : ಸೋಮವಾರದಿಂದ ದಕ್ಷಿಣ ಕನ್ನಡ ಮತ್ತು ಮೈಸೂರು ಜಿಲ್ಲೆ ಹೊರತುಪಡಿಸಿ ರಾಜ್ಯಾದ್ಯಂತ ಸರಕಾರಿ ಬಸ್ಗಳ ಸಂಚಾರ ಆರಂಭವಾಗಲಿದೆ.
ಅನ್ಲಾಕ್ ಆದೇಶದ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿಯ ಎಲ್ಲ ಪ್ರಕಾರಗಳ ಬಸ್ಗಳು ರಾತ್ರಿ ಕರ್ಫ್ಯೂ ಅವಧಿ ಸಹಿತ ದಿನಪೂರ್ತಿ ಸಂಚರಿಸಲಿವೆ. ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ನಿಗಮವು ಅನುಸೂಚಿಗಳ ವ್ಯವಸ್ಥೆ ಕಲ್ಪಿಸಲಿದೆ.
ಮೈಸೂರಿಗೆ ಬಸ್ ವ್ಯವಸ್ಥೆ ಇರುವುದಿಲ್ಲ. ಮೈಸೂರು ದಾಟಿ ಹೋಗಬೇಕಾದ ಬಸ್ಗಳು ಹೊರವಲಯದ ಮೂಲಕವೇ ಹಾದುಹೋಗಬೇಕು. ಜಿಲ್ಲೆಯಲ್ಲಿ ಯಾರಿಗೂ ಬಸ್ಸೇರಲು, ಇಳಿಯಲು ಅವಕಾಶವಿಲ್ಲ. ಸ್ಥಳೀಯ ಸಾರಿಗೆ ಇರುವುದಿಲ್ಲ.
ಪ್ರಯಾಣಿಕರು ಮತ್ತು ಸಿಬಂದಿಯ ಹಿತದೃಷ್ಟಿಯಿಂದ ಎರಡೂ ಲಸಿಕೆ ಪಡೆದ ಸಿಬಂದಿಯನ್ನು ಆದ್ಯತೆಯ ಮೇರೆಗೆ ಕರ್ತವ್ಯಕ್ಕೆ ನಿಯೋಜಿಸಲಾಗುವುದು ಎಂದು ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.
ದ.ಕ.ದಲ್ಲಿ ಬಸ್ ಇಲ್ಲ
ರವಿವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ 2ನೇ ಹಂತದ ಸಡಿಲಿಕೆಯ ಆದೇಶ ಹೊರಡಿಸಿದ್ದು, ಜಿಲ್ಲೆಯ ಮೂಲಕ ಮತ್ತು ಒಳಗೆ ಬಸ್ ಸಂಚಾರಕ್ಕೆ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಮಂಗಳೂರು ಸರಹದ್ದಿನ ಹೊರಗೆ ಬಸ್ಗಳು ನಿಲುಗಡೆ ಆಗಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ