ಸರಕಾರಿ ನೌಕರರ ವರ್ಗಾವಣೆ ನೀತಿ: ಭ್ರಷ್ಟಾಚಾರಕ್ಕೆ ರಹದಾರಿ


Team Udayavani, Jul 10, 2021, 6:50 AM IST

ಸರಕಾರಿ ನೌಕರರ ವರ್ಗಾವಣೆ ನೀತಿ: ಭ್ರಷ್ಟಾಚಾರಕ್ಕೆ ರಹದಾರಿ

ಸರಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದ 2013ರ ಮಾರ್ಗಸೂಚಿಗಳ ಪ್ರಕಾರ ಸರಕಾರಿ ನೌಕರರ ವರ್ಗಾವಣೆಗಳಲ್ಲಿ ರಾಜಕೀಯ ಒತ್ತಡ ನಿಷಿದ್ಧ. ಆದರೆ 2021-22ನೇ ಸಾಲಿಗೆ ಸರಕಾರಿ ನೌಕರರ ವರ್ಗಾವಣೆ ಅಧಿಕಾರವನ್ನು ಸರಕಾರ ನೇರವಾಗಿ ಸಚಿವರ ಕೈಗೆ ಕೊಟ್ಟಿರುವುದು ವಿಪರ್ಯಾಸ.

ಸರಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆ ಆಡಳಿತ ವ್ಯವಸ್ಥೆಯ ಬಹುಮುಖ್ಯ ಹಂತ. ಆಡಳಿತ ಯಂತ್ರದ ಪಾರದರ್ಶಕ ಕಾರ್ಯನಿರ್ವಹಣೆಗೆ ವರ್ಗಾವಣೆ ಪ್ರಕ್ರಿಯೆಯೂ ಅಷ್ಟೇ ಪಾರದರ್ಶಕ ಮತ್ತು ಹಸ್ತಕ್ಷೇಪಗಳಿಂದ ಮುಕ್ತವಾಗಿರಬೇಕು. ಅದರಲ್ಲೂ ಮುಖ್ಯವಾಗಿ ಅಧಿಕಾರಿ/ನೌಕರರ ವರ್ಗಾವಣೆಯಲ್ಲಿ ರಾಜಕೀಯ ಹಸ್ತಕ್ಷೇಪ ಇರಕೂಡದು. ಆದರೆ ಇದು ಎಲ್ಲ ಸರಕಾರಗಳಲ್ಲೂ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ನಡೆದುಕೊಂಡು ಬಂದಿದೆ.

2021-22ನೇ ಸಾಲಿಗೆ ಬಿ ಮತ್ತು ಸಿ ಗ್ರೂಪ್‌ ನೌಕರರು ಮತ್ತು ಅಧಿಕಾರಿ ಗಳಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ.6ನ್ನು ಮೀರದಂತೆ ಸಾರ್ವತ್ರಿಕ ವರ್ಗಾ ವಣೆ ಮಾಡಲು ಆಯಾ ಇಲಾಖೆಯ ಸಚಿವರಿಗೆ ಅಧಿಕಾರ ನೀಡಿ ಸರಕಾರ ಮಾರ್ಗ ಸೂಚಿಗಳನ್ನು ಹೊರಡಿಸಿರುವುದು ಸಾಕಷ್ಟು ಜಿಜ್ಞಾಸೆಗಳನ್ನು ಹುಟ್ಟು ಹಾಕಿದೆ. ಜುಲೈ 22ರೊಳಗೆ ವರ್ಗಾವಣೆ ಪೂರ್ಣಗೊಳಿಸಬೇಕು ಎಂದು ಸೀಮಿತ ಕಾಲಾವಧಿ ನೀಡಿರುವುದು ವರ್ಗಾವಣೆ ಪ್ರಕ್ರಿಯೆ ತ್ವರಿತವಾಗಲು ಒತ್ತಡಗಳು, ಲಾಬಿಗಳು ನಡೆಯುವುದನ್ನು ಅಲ್ಲಗಳೆಯುವಂತಿಲ್ಲ. ಪಾರ ದರ್ಶ ಕತೆ ನೀರಿಕ್ಷಿಸುವುದು ಕಷ್ಟ, ಭ್ರಷ್ಟಾಚಾರ, ಸ್ವಜನಪಕ್ಷಪಾತ ನಡೆದರೆ ಅಚ್ಚರಿ ಪಡುವಂತಿಲ್ಲ. “ಸರಕಾರಿ ನೌಕರನು ವರ್ಗಾವಣೆಯನ್ನು ಹಕ್ಕೆಂದು ಪ್ರತಿಪಾದಿಸುವಂತಿಲ್ಲ. ವರ್ಗಾವಣೆಗಳ ಬಗ್ಗೆ ರಾಜಕೀಯ ಒತ್ತಡವನ್ನು ತರು ವುದು ನಿಷೇಧಿಸಲಾಗಿದೆ. ಯಾವುದೇ ಸರಕಾರಿ ನೌಕರನು ತನ್ನನ್ನು ಯಾವುದೇ ನಿರ್ದಿಷ್ಟ ಹುದ್ದೆಗೆ ವರ್ಗಾಯಿಸಲು ಒತ್ತಡ ತಂದಲ್ಲಿ ಅಂತಹ ನೌಕರನನ್ನು ಕೋರಿದ ಸ್ಥಳಕ್ಕೆ ವರ್ಗಾವಣೆಗೊಳ್ಳದಂತೆ ನೋಡಿಕೊಳ್ಳತಕ್ಕದ್ದು ಎಂದು ಸರಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ 2013ರಲ್ಲಿ ಹೊರಡಿಸಲಾದ ಹೊಸ ಮಾರ್ಗಸೂಚಿಗಳಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ.

ಸರಕಾರಿ ನೌಕರರ ವರ್ಗಾವಣೆ ಕುರಿತಂತೆ ಹಾರನಹಳ್ಳಿ ರಾಮಸ್ವಾಮಿ ಅಧ್ಯಕ್ಷತೆಯ ಆಡಳಿತ ಸುಧಾರಣ ಆಯೋಗ 2001ರಲ್ಲಿ ನೀಡಿದ್ದ ವರದಿ ಯಲ್ಲಿ ಮಾಡಲಾಗಿದ್ದ ಶಿಫಾರಸುಗಳಿಗೆ ಅನ್ವಯವಾಗಿ ವರ್ಗಾವಣೆಗೆ ವಿಸ್ತೃತ ಮಾರ್ಗಸೂಚಿಗಳನ್ನು ಹೊರಡಿಸಲಾಗಿತ್ತು. ಅದರಂತೆ ಪ್ರತೀ ವರ್ಷ ಮಾಡ ಬೇಕಾದ ವರ್ಗಾವಣೆಗಳಿಗೆ ಸೂಚನೆಗಳನ್ನು ನೀಡುತ್ತ ಬರಲಾಗಿದೆ. ಆದರೆ ಸರಕಾರಿ ನೌಕರರನ್ನು ಒಂದೇ ಸ್ಥಳದಲ್ಲಿ ಸಾಧ್ಯವಾದಷ್ಟು ಮಟ್ಟಿಗೆ ಒಂದು ನಿರ್ದಿಷ್ಟ ಅವಧಿಗೆ ಮುಂದುವರಿಸಿರುವುದರಿಂದ ಅವರು ಇಲಾಖಾ ಚಟುವಟಿಕೆಗಳ ಬಗ್ಗೆ ವಾಸ್ತವಿಕ ಮತ್ತು ಸಮಂಜಸ ಜ್ಞಾನ ಪಡೆದು ಇಲಾ ಖೆಯು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿ ಉದ್ದೇಶಿತ ಫ‌ಲಿ ತಾಂಶಗಳನ್ನು ಪೂರೈಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸರಕಾರಿ ನೌಕರರ ವರ್ಗಾವಣೆಗಳನ್ನು ನಿಯಂತ್ರಿಸುವುದು ಆವಶ್ಯಕವೆಂದು ಕಂಡು ಬಂದ ಹಿನ್ನೆಲೆಯಲ್ಲಿ ಹಾಗೂ ಆಡಳಿತ ಸುಧಾರಣ ಆಯೋಗದ ಶಿಫಾರಸಿನಂತೆ ಆಡಳಿತದಲ್ಲಿ ಹೆಚ್ಚಿನ ಹೊಣೆಗಾರಿಕೆ ಮತ್ತು ಪಾರದರ್ಶಕತೆ ತರುವುದು ಅಗತ್ಯವಾಗಿದೆ ಎಂದು ಮನಗಂಡ ಹಿನ್ನೆಲೆಯಲ್ಲಿ 2013ರಲ್ಲಿ ಹೊಸ ಮಾರ್ಗಸೂಚಿಗಳನ್ನು ಹೊರಡಿಸಲಾಯಿತು.

ಸರಕಾರಿ ನೌಕರರ ವರ್ಗಾವಣೆ ಅಧಿಕಾರವನ್ನು ಸಚಿವರಿಗೆ ನೀಡಿರುವ ಹಿಂದೆ ಸರಕಾರದ ಉದ್ದೇಶವೇನಿದೆ ಎನ್ನುವುದು ಸ್ಪಷ್ಟವಾಗಿಲ್ಲ. ಕೊರೊನಾ ಕಾರಣಕ್ಕೆ ಕಳೆದ ವರ್ಷವೂ ನಿಯಮಿತವಾಗಿ ವರ್ಗಾವಣೆ ನಡೆದಿಲ್ಲ. ಈಗ ವರ್ಗಾವಣೆಗೆ ಅವಕಾಶ ಕೊಟ್ಟು ಅದರ ಅಧಿಕಾರವನ್ನು ಸಚಿವರಿಗೆ ಕೊಟ್ಟಿರು ವುದರಿಂದ ವರ್ಗಾವಣೆ ಪ್ರಕ್ರಿಯೆಯನ್ನು ನಿಯಂತ್ರಿಸುವುದು ಅಷ್ಟೊಂದು ಸುಲಭವಲ್ಲ. ಮುಂದೆ ಆಗುವ ಎಲ್ಲ ಎಡರುತೊಡರುಗಳಿಗೆ ಸರಕಾರವೇ ಹೊಣೆ ಹೊರಬೇಕಾಗುತ್ತದೆ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು.

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.