ವಿವಾದಿತ ಬಹುಕೋಟಿ ಉಕ್ಕಿನ ಸೇತುವೆ ಯೋಜನೆ ಕೊನೆಗೂ ಕೈಬಿಟ್ಟ ಸರ್ಕಾರ!
Team Udayavani, Jun 18, 2019, 6:47 PM IST
ಬೆಂಗಳೂರು: ತೀವ್ರ ವಿವಾದಕ್ಕೆ ಎಡೆಮಾಡಿಕೊಟ್ಟಿದ್ದ ಉಕ್ಕಿನ ಸೇತುವೆ ಯೋಜನೆಗೆ ಕೊನೆಗೂ ರಾಜ್ಯ ಸರ್ಕಾರ ಎಳ್ಳುನೀರು ಬಿಟ್ಟಿದೆ. ಉಕ್ಕಿನ ಸೇತುವೆ ಯೋಜನೆಯನ್ನು ಕೈಬಿಟ್ಟಿರುವುದಾಗಿ ಕರ್ನಾಟಕ ಸರ್ಕಾರ ಅಧಿಕೃತವಾಗಿ ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಿದೆ.
ಬೆಂಗಳೂರಿನ ಬಸವೇಶ್ವರ ವೃತ್ತ-ಹೆಬ್ಬಾಳ ನಡುವಿನ ಉಕ್ಕಿನ ಸೇತುವೆ ಯೋಜನೆಯಿಂದ ಹಿಂದೆ ಸರಿದಿರುವುದಾಗಿ ಸ್ಪಷ್ಟಪಡಿಸಿ ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಿದೆ.
ಉಕ್ಕಿನ ಸೇತುವೆ ನಿರ್ಮಾಣಕ್ಕೆ ವಿಜ್ಞಾನಿಗಳು, ಪರಿಸರವಾದಿಗಳು ಸೇರಿದಂತೆ ಹಲವರ ವಿರೋಧಕ್ಕೆ ಕಾರಣವಾಗಿತ್ತು. ಕಾಂಗ್ರೆಸ್ ಆಡಳಿತಾವಧಿಯಲ್ಲಿ ಸಿದ್ದವಾಗಿದ್ದ ಈ ಯೋಜನೆಗೆ ಸಮ್ಮಿಶ್ರ ಸರ್ಕಾರ ಸದ್ದಿಲ್ಲದೆ ಚಾಲನೆ ಕೊಟ್ಟಿತ್ತು. ಏತನ್ಮಧ್ಯೆ ಬಹುಕೋಟಿ ವೆಚ್ಚದ ಉಕ್ಕಿನ ಸೇತುವೆ ಯೋಜನೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಹಾಗೂ ನ್ಯಾಯಾಲಯದ ಕಟಕಟೆಗೆ ಹೋಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!