ಕೋವಿಡ್, ಪ್ರವಾಹ, ಆರ್ಥಿಕ ಸಂಕಷ್ಟದ ನಡುವೆ “ಅಧಿವೇಶನ”ದ ಅಗ್ನಿಪರೀಕ್ಷೆ


Team Udayavani, Sep 20, 2020, 6:05 AM IST

ಅಧಿವೇಶನ ಅಗ್ನಿಪರೀಕ್ಷೆ

ಬೆಂಗಳೂರು: ಕೋವಿಡ್ , ಪ್ರವಾಹ ಮತ್ತು ಆರ್ಥಿಕ ಸಂಕಷ್ಟದ ನಡುವೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಸರಕಾರವು ವಿಧಾನಮಂಡಲ ಅಧಿವೇಶನದ ಸವಾಲು ಎದುರಿಸಬೇಕಿದೆ.

ಭೂ ಸುಧಾರಣೆ, ಎಪಿಎಂಸಿ, ಕಾರ್ಮಿಕ ಕಾಯ್ದೆ ಸೇರಿ 19 ಅಧ್ಯಾದೇಶ ಒಳಗೊಂಡಂತೆ 31 ವಿಧೇಯಕಗಳಿಗೆ ಅಧಿವೇಶನದಲ್ಲಿ ಒಪ್ಪಿಗೆ ಪಡೆಯುವ ಅನಿವಾರ್ಯತೆ ಸರಕಾರದ್ದು. ಯಡಿಯೂರಪ್ಪ ಅವರ ದಿಲ್ಲಿ ಯಾತ್ರೆಯ ಬಗೆಗಿನ ಗುಸುಗುಸು, ಸಂಪುಟ ವಿಸ್ತರಣೆ-ಪುನಾರಚನೆ ಗೊಂದಲ, ಆಕಾಂಕ್ಷಿಗಳ ಅಸಮಾಧಾನವು ಅಧಿವೇಶನದ ಮೇಲೆ ಯಾವ ರೀತಿಯ ಪರಿಣಾಮ ಬೀರ ಬಹುದು ಎಂಬುದು ಸದ್ಯದ ಕುತೂಹಲ.

ಪ್ರವಾಹ ಸಂತ್ರಸ್ತರಿಗೆ ಪರಿಹಾರ ತಲುಪ ದಿರುವುದು, ಕೇಂದ್ರ ಸರಕಾರದ ನೆರವು ನಿರೀಕ್ಷಿತ ಪ್ರಮಾಣದಲ್ಲಿ ಸಿಗದಿರುವುದು, ಜಿಎಸ್‌ಟಿ ಪರಿಹಾರ ಬಾರದ ಕಾರಣ ರಾಜ್ಯ ಸರಕಾರವು ಸಾಲದ ಮೊರೆ ಹೊಕ್ಕಿರುವುದು, ಡ್ರಗ್ಸ್‌ ಮಾಫಿಯಾ, ಕೆ.ಜಿ. ಹಳ್ಳಿ-ಡಿ.ಜೆ. ಹಳ್ಳಿ ಪ್ರಕರಣಗಳು ಆಡಳಿತ ಮತ್ತು ವಿಪಕ್ಷಗಳ ಜಂಗೀಕುಸ್ತಿಗೆ ಸದನ ವೇದಿಕೆಯಾಗಬಹುದು.

1,200 ಪ್ರಶ್ನೆ ಗಳ ಬ್ಯಾಂಕ್‌!
ವಿಪಕ್ಷ ಕಾಂಗ್ರೆಸ್‌ 1,200 ಪ್ರಶ್ನೆಗಳ “ಅಸ್ತ್ರ’ದೊಂದಿಗೆ ಸರಕಾರದ ಮೇಲೆ ಮುಗಿ ಬೀಳಲು ಸಜ್ಜಾಗಿದೆ. ಬಿಜೆಪಿಯೂ ತಿರುಗೇಟು ನೀಡಿ ಡ್ರಗ್ಸ್‌ ದಂಧೆ ಮತ್ತು ಕೆ.ಜೆ. ಹಳ್ಳಿ-ಡಿ.ಜೆ. ಹಳ್ಳಿ ಪ್ರಕರಣಗಳಲ್ಲಿ ವಿಪಕ್ಷವನ್ನು ಕಟ್ಟಿಹಾಕಲು ಕಾರ್ಯತಂತ್ರ ರೂಪಿಸಿದೆ. ಇತ್ತೀಚಿಗೆ ಯಡಿಯೂರಪ್ಪ -ಎಚ್‌.ಡಿ. ಕುಮಾರಸ್ವಾಮಿ ಭೇಟಿಯ ಅನಂತರದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಜೆಡಿಎಸ್‌ ಪಕ್ಷವು ವಿಷಯಾಧಾರಿತವಾಗಿ ಮತ್ತು ಸಂದರ್ಭಕ್ಕೆ ತಕ್ಕಂತೆ “ಜಾಣ್ಮೆ’ಯ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಕೆಲವು ಶಾಸಕರಿಗೆ ಕೋವಿಡ್
221 ಶಾಸಕರ ಪೈಕಿ ಡಿಸಿಎಂ ಡಾ| ಅಶ್ವತ್ಥನಾರಾಯಣ, ಸಚಿವರಾದ ಬಸವರಾಜ ಬೊಮ್ಮಾಯಿ, ಗೋಪಾಲಯ್ಯ. ಬೈರತಿ ಬಸವರಾಜ್‌ ಸಹಿತ ಐವತ್ತಕ್ಕೂ ಹೆಚ್ಚು ಶಾಸಕರಿಗೆ ಕೊರೊನಾ ಸೋಂಕು ದೃಢಪಟ್ಟು ಹಲವರು ಕ್ವಾರಂಟೈನ್‌ನಲ್ಲಿದ್ದಾರೆ. ಕೊರೊನಾ ಸೋಂಕುಪೀಡಿತರಲ್ಲಿ ಆಡಳಿತ ಮತ್ತು ವಿಪಕ್ಷ ಸದಸ್ಯರೂ ಇದ್ದಾರೆ. ಕೊರೊನಾ ಆತಂಕ ಮತ್ತು ಶಾಸಕರ ಗೈರು ಹಾಜರಿಯಲ್ಲಿ ನಡೆಯುವ ಅಧಿವೇಶನ ಎಷ್ಟರ ಮಟ್ಟಿಗೆ ಪರಿಣಾಮಕಾರಿಯಾಗಿ ಜನರ ಸಮಸ್ಯೆಗಳ ಚರ್ಚೆಗೆ ಸಾಕ್ಷಿಯಾಗಲಿದೆ, ಅಧ್ಯಾದೇಶ ಮತ್ತು ವಿಧೇಯಕಗಳಿಗೆ ಒಪ್ಪಿಗೆ ಪಡೆಯುವ ಸರಕಾರದ ಕಸರತ್ತು ಎಷ್ಟರ ಮಟ್ಟಿಗೆ ಯಶಸ್ವಿಯಾಗಲಿದೆ ಎಂದು ಕಾದು ನೋಡಬೇಕಾಗಿದೆ.

ಎಂಟು ದಿನ ಕಲಾಪ
ಸೆ. 21ರಿಂದ 30ರ ವರೆಗೆ ಅಧಿವೇಶನ ನಡೆಯಲಿದೆ. ಸೋಮವಾರ ಕಲಾಪ ಸಲಹಾ ಸಮಿತಿ ಸಭೆ ನಡೆಯಲಿದ್ದು, ಪ್ರಶ್ನೋತ್ತರ ಅವಧಿ ಬೇಕೇ ಬೇಡವೇ ಎಂದು ನಿರ್ಧರಿಸಲಿದೆ. ವಿಧಾನಸಭೆ ಮತ್ತು ವಿಧಾನಪರಿಷತ್‌ ಸಭಾಂಗಣದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಎರಡು ಆಸನಗಳ ಮಧ್ಯೆ ಗಾಜಿನ ತಡೆ ವ್ಯವಸ್ಥೆ ಮಾಡಲಾಗಿದೆ. ಫೇಸ್‌ ಶೀಲ್ಡ್‌ ಮತ್ತು ಮಾಸ್ಕ್, ಸ್ಯಾನಿಟೈಸರ್‌ ಒದಗಿಸಲಾಗುತ್ತಿದೆ. ಸದನಕ್ಕೆ ಬರುವವರಿಗೆ ಕೊರೊನಾ ಪರೀಕ್ಷೆ ಕಡ್ಡಾಯ ವಾಗಿದ್ದು, 72 ತಾಸು ಮುಂಚಿತವಾಗಿ ಪರೀಕ್ಷೆ ಮಾಡಿಸಿ ವರದಿಯೊಂದಿಗೆ‌ ಪ್ರವೇಶಿಸಬೇಕಿದೆ.

 ಎಸ್‌. ಲಕ್ಷ್ಮೀನಾರಾಯಣ

ಟಾಪ್ ನ್ಯೂಸ್

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.