ಸಂಪುಟ ರಚನೆ ಮಾಡದ ಸರ್ಕಾರವನ್ನು ವಜಾಗೊಳಿಸಬೇಕು: ಉಗ್ರಪ್ಪ ಆಗ್ರಹ
Team Udayavani, Aug 13, 2019, 2:46 PM IST
ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ರಚನೆಯಾಗಿ 17 ದಿನ ಆದರೂ ಸಂಪುಟ ರಚನೆಯಾಗಿಲ್ಲ. 8 ದಿನದಲ್ಲಿ ಸಂಪುಟ ರಚನೆಯಾಗದಿದ್ದರೆ ರಾಜ್ಯಪಾಲರು ಸಂವಿಧಾನದ 163ನೇ ವಿಧಿ ಪ್ರಕಾರ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಕಾಂಗ್ರೆಸ್ ನಾಯಕ ವಿ.ಎಸ್. ಉಗ್ರಪ್ಪ ಹೇಳಿದ್ದಾರೆ.
ಪ್ರವಾಹ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಲತಾಯಿ ಧೊರಣೆ ಅನುಸರಿಸುತ್ತಿದೆ. ಪ್ರಧಾನಿ ಕಾಡಿನಲ್ಲಿ ಪ್ರಾಣಿ ನೋಡಲು ಹೋಗುತ್ತಾರೆ. ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಸಮಯವಿಲ್ಲ ಎಂದು ಕೇಂದ್ರ ಸರಕಾರ ಮತ್ತು ನರೇಂದ್ರ ಮೋದಿಯವರನ್ನು ಟೀಕಿಸಿದರು.
ಯಡಿಯೂರಪ್ಪ ತಕ್ಷಣ ಸರ್ವ ಪಕ್ಷ ಸಭೆ ಕರೆದು ಪ್ರವಾಹ ಪರಿಸ್ಥಿತಿ ಕುರಿತು ಚರ್ಚಿಸಿ ಕೇಂದ್ರದಿಂದ ಹೆಚ್ಚಿನ ಅನುದಾನ ನೀಡುವಂತೆ ಒತ್ತಾಯ ಮಾಡಬೇಕು ಎಂದು ವಿ.ಎಸ್. ಉಗ್ರಪ್ಪ ಆಗ್ರಹ ಮಾಡಿದರು.