ಗ್ರಾ.ಪಂ.ಗಿದ್ದ ಏಕವಿನ್ಯಾಸ ಅನುಮೋದನೆ ಅಧಿಕಾರ ಮೊಟಕು; ಆದೇಶ ಹಿಂಪಡೆಯಲು ಮುಂದಾದ ಸರಕಾರ


Team Udayavani, Mar 26, 2022, 5:45 AM IST

ಗ್ರಾ.ಪಂ.ಗಿದ್ದ ಏಕವಿನ್ಯಾಸ ಅನುಮೋದನೆ ಅಧಿಕಾರ ಮೊಟಕು; ಆದೇಶ ಹಿಂಪಡೆಯಲು ಮುಂದಾದ ಸರಕಾರ

ಕಡಬ: ಸ್ಥಳೀಯ ಯೋಜನಾ ಪ್ರದೇಶದ ಹೊರಗಡೆ ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆಗಾಗಿ ವಿನ್ಯಾಸ ಅನುಮೋದನೆ ನೀಡಲು ಗ್ರಾ.ಪಂ. ಮತ್ತು ತಾ.ಪಂ.ಗಳಿಗಿದ್ದ ಅಧಿಕಾರವನ್ನು ಮೊಟಕುಗೊಳಿಸಿ, ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಿಂದ ಅನುಮತಿ ಪಡೆಯುವಂತೆ ನೀಡಿದ್ದ ಆದೇಶವನ್ನು ಕರಾವಳಿಯ ಸಚಿವರು ಮತ್ತು ಶಾಸಕರ ಒತ್ತಾಯಕ್ಕೆ ಮಣಿದು ರದ್ದುಪಡಿಸಲು ಸರಕಾರ ಮುಂದಾಗಿದೆ.

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಇ-ಸ್ವತ್ತು ಅನುಷ್ಠಾನಕ್ಕೆ ಸಂಬಂಧಿಸಿ ನಡೆದ ಸಚಿವ ಸಂಪುಟ ಉಪ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ತಳೆಯಲಾಗಿದೆ. ಸ್ಥಳೀಯ ಯೋಜನಾ ಪ್ರದೇಶದ ಹೊರಗಿನ ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆಗಾಗಿ ವಿನ್ಯಾಸ ಅನುಮೋದನೆಯನ್ನು ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಿಂದ ಪಡೆಯಬೇಕು ಎಂದು ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಲು ಕಾನೂನು, ನಗರಾಭಿವೃದ್ಧಿ, ಕಾರ್ಮಿಕ ಇಲಾಖೆ, ಪೌರಾಡಳಿತ ಖಾತೆಗಳ ಸಚಿವರು ಹಾಗೂ ಸರಕಾರದ ಕಾರ್ಯದರ್ಶಿ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳನ್ನು ಒಳಗೊಂಡ ಸಚಿವ ಸಂಪುಟದ ಉಪ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಹಿಂದೆ ಗ್ರಾ.ಪಂ. ಮತ್ತು ತಾ.ಪಂ.ಗಳಿಗಿದ್ದ ಏಕವಿನ್ಯಾಸ ಅನುಮೋದನಾ ಅಧಿಕಾರವನ್ನು ಮುಂದುವರಿಸುವಂತೆ ಸೂಚಿಸಲಾಗಿದೆ. ಇದರಿಂದ ಗ್ರಾಮೀಣ ಭಾಗದ ಜನರಿಗೆ ದೂರದ ನಗರಕ್ಕೆ ಅಲೆದಾಡುವ ಕಷ್ಟ ದೂರವಾದಂತಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಹಾಗೂ ಉತ್ತರಕನ್ನಡ ಜಿಲ್ಲೆಗೆ ಅನ್ವಯವಾಗುವಂತೆ 2015ರ ಮಾ. 19ರ ಸರಕಾರದ ಆದೇಶದಂತೆ ಸ್ಥಳೀಯ ಯೋಜನಾ ಪ್ರದೇಶದ ಹೊರಗಡೆ 0-0.25 ಎಕರೆ ವರೆಗೆ ಗ್ರಾ.ಪಂ., 1 ಎಕರೆ ವರೆಗೆ ತಾ.ಪಂ., 1 ಎಕರೆಗಿಂತ ಅ ಧಿಕ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆಗಾಗಿ ಏಕವಿನ್ಯಾಸ ಖಾತೆ ಅನುಮೋದನೆ ನೀಡುವ ಅಧಿಕಾರವನ್ನು ಈ ಹಿಂದೆ ನೀಡಲಾಗಿತ್ತು. ಅದರಿಂದಾಗಿ ಆ ಭಾಗದ ಜನರಿಗೆ 9/11 ಖಾತೆ ಸುಲಭವಾಗಿ ಪಡೆಯಬಹುದಿತ್ತು.

ಇದನ್ನೂ ಓದಿ:ಯಾವ ಸ್ವಾಮೀಜಿಗಳ ಬಗ್ಗೆಯೂ ನಾನು ಅಗೌರವದಿಂದ ಮಾತನಾಡಿಲ್ಲ : ಸಿದ್ದು

ರಾಜ್ಯ ಸರಕಾರವು 2021ರ ಅ. 7ರಂದು ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನೆಗೆ ತಿದ್ದುಪಡಿಗೊಳಿಸಿ ಆದೇಶಿಸಿತ್ತು. ಅದರ ಪ್ರಕಾರ, ಸ್ಥಳೀಯ ಯೋಜನಾ ಪ್ರದೇಶವನ್ನು ಹೊರತುಪಡಿಸಿದ ಯಾವುದೇ ಭೂಮಿಯ ಮೇಲೆ ಅಭಿವೃದ್ಧಿಯನ್ನು ಕೈಗೊಳ್ಳಲು ಉದ್ದೇಶಿಸಿರುವ ವ್ಯಕ್ತಿಯು ಅನುಮತಿಗಾಗಿ ಸ್ಥಳೀಯ ಪ್ರಾಧಿಕಾರಕ್ಕೆ ಲಿಖಿತ ಅರ್ಜಿಯನ್ನು ಸಲ್ಲಿಸಬೇಕು. ಸ್ಥಳೀಯ ಪ್ರಾಧಿಕಾರವು ಅನುಮತಿ ನೀಡುವ ಮೊದಲು ಪಟ್ಟಣ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶಕರ ಅಥವಾ ಅವರಿಂದ ಅಧಿಕೃತಗೊಂಡು ನಗರ ಯೋಜನೆ ಸಹಾಯಕ ನಿರ್ದೇಶಕರ ದರ್ಜೆಗೆ ಕಡಿಮೆಯಿಲ್ಲದ ಯಾವುದೇ ಅಧೀನ ಅಧಿಕಾರಿಯ ಪೂರ್ವಾನುಮೋದನೆ ಪಡೆಯುವುದು ಅಗತ್ಯ ಎಂಬುದಾಗಿ ಹೇಳಿತ್ತು. ಈ ಹಿನ್ನೆಲೆಯಲ್ಲಿ 2022ರ ಫೆ. 28ರಿಂದ ಗ್ರಾ.ಪಂ. ಹಾಗೂ ತಾ.ಪಂ.ಗಳಿಗೆ ಏಕವಿನ್ಯಾಸ ಅನುಮೋದನೆ ನೀಡುವ ಅಧಿಕಾರವನ್ನು ಕಡಿತಗೊಳಿಸಿ ಗೊಂದಲ ಸೃಷ್ಟಿಯಾಗಿತ್ತು.

ಇದರಿಂದ ಕರಾವಳಿಯ ಗ್ರಾಮೀಣ ಭಾಗದ ಜನ ಸಹಜವಾಗಿಯೇ ಸರಕಾರದ ವಿರುದ್ಧ ಕೆರಳಿದ್ದರು. ಅದು ಕರಾವಳಿ ಭಾಗದ ಸಚಿವರು ಮತ್ತು ಶಾಸಕರಿಗೂ ನುಂಗಲಾರದ ತುತ್ತಾಗಿತ್ತು. ಸಚಿವರಾದ ಎಸ್‌. ಅಂಗಾರ, ಸುನಿಲ್‌ ಕುಮಾರ್‌ ಸೇರಿದಂತೆ ಜಿಲ್ಲೆಯ ಆಡಳಿತ ಪಕ್ಷದ ಶಾಸಕರು ಮತ್ತು ಸಚಿವರು ಸರಕಾರದ ಮುಂದೆ ಅಸಮಾಧಾನ ವ್ಯಕ್ತಪಡಿಸಿ ಆದೇಶವನ್ನು ರದ್ದುಪಡಿಸುವಂತೆ ಒತ್ತಡ ಹಾಕಿದ್ದರು.

ವರದಿ ಪ್ರಕಟಿಸಿದ್ದ ಉದಯವಾಣಿ
ಸ್ಥಳೀಯ ಯೋಜನಾ ಪ್ರದೇಶದ ಹೊರಗೆ ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆಗಾಗಿ ವಿನ್ಯಾಸ ಅನುಮೋದನೆ ನೀಡುವ ಗ್ರಾ.ಪಂ. ಮತ್ತು ತಾ.ಪಂ.ಗಳ ಅಧಿಕಾರವನ್ನು ಮೊಟಕುಗೊಳಿಸಿ, ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಿಂದಲೇ ಅನುಮತಿ ಪಡೆಯುವಂತೆ ಸರಕಾರ ಆದೇಶ ನೀಡಿದ ಬಗ್ಗೆ ಮಾ. 17ರಂದು ಉದಯವಾಣಿ ಮುಖಪುಟದಲ್ಲಿ ವಿಶೇಷ ವರದಿ ಪ್ರಕಟಿಸಿ ಗಮನ ಸೆಳೆದಿತ್ತು.

 

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.