ಶೀಘ್ರ ಸಹಕಾರ ನೀತಿ ಬಿಡುಗಡೆ : ಅಮಿತ್ ಶಾ ಘೋಷಣೆ
Team Udayavani, Sep 26, 2021, 7:45 AM IST
ಹೊಸದಿಲ್ಲಿ: ದೇಶದ ಆರ್ಥಿಕತೆಯನ್ನು ಬಲಪಡಿಸುವ ಮತ್ತು 5 ಶತಕೋಟಿ ಡಾಲರ್ ಆರ್ಥಿಕತೆಯನ್ನಾಗಿ ಮಾಡುವ ಸಲುವಾಗಿ ಸದ್ಯದಲ್ಲೇ ಹೊಸ ಸಹಕಾರ ನೀತಿಯನ್ನು ಜಾರಿಗೆ ತರಲಾಗುವುದು ಎಂದು ಸಹಕಾರ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.
ದಿಲ್ಲಿಯಲ್ಲಿ ನಡೆದ ಮೊದಲ ರಾಷ್ಟ್ರೀಯ ಸಹಕಾರ ಸಮ್ಮೇಳನದಲ್ಲಿ ಮಾತನಾಡಿದ ಅಮಿತ್ ಶಾ, ಸಹಕಾರ ಆಂದೋಲನ ಗಟ್ಟಿಗೊಳಿಸುವ ನಿಟ್ಟಿನಲ್ಲಿ ರಾಜ್ಯಗಳ ಜತೆಗೆ ಕೆಲಸ ಮಾಡುವುದಾಗಿ ಹೇಳಿದ್ದಾರೆ. ಈ ಸಮ್ಮೇಳನದಲ್ಲಿ ವಿವಿಧ ರಾಜ್ಯಗಳ ಸಹಕಾರ ಸಚಿವರು, 2,100 ಪ್ರತಿನಿಧಿಗಳು ಮತ್ತು 6 ಕೋಟಿ ಮಂದಿ ಆನ್ಲೈನ್ನಲ್ಲಿ ಭಾಗಿಯಾಗಿದ್ದರು.
ಸದ್ಯ ದೇಶದಲ್ಲಿ 65 ಸಾವಿರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿವೆ. ಇದನ್ನು ಮುಂದಿನ 5 ವರ್ಷಗಳಲ್ಲಿ ಇದನ್ನು 3 ಲಕ್ಷಕ್ಕೆ ಏರಿಸುವ ಗುರಿಯಿದೆ ಎಂದು ಅಮಿತ್ ಶಾ ಹೇಳಿದರು. ಸರಕಾರವು ರಾಷ್ಟ್ರೀಯ ಸಹಕಾರ ವಿಶ್ವವಿದ್ಯಾನಿಲಯದ ಜತೆಯಲ್ಲೇ ಸಹಕಾರ ಸಾಮಾನ್ಯ ಸೇವಾ ಕೇಂದ್ರಗಳು ಮತ್ತು ರಾಷ್ಟ್ರೀಯ ಡೇಟಾಬೇಸ್ ಸ್ಥಾಪಿಸಲಿದೆ ಎಂದರು.
ಸಂದೇಹ ಬೇಡ
ಕೇಂದ್ರ ಸರಕಾರವು ಸಹಕಾರ ಇಲಾಖೆಯನ್ನು ಸ್ಥಾಪಿಸಿದಾಗ ಹಲವಾರು ಮಂದಿ ಈ ಬಗ್ಗೆ ಸಂದೇಹ ವ್ಯಕ್ತಪಡಿಸಿದ್ದರು. ಇದು ರಾಜ್ಯಗಳ ವ್ಯಾಪ್ತಿಗೆ ಬರುತ್ತದೆ, ಕೇಂದ್ರ ಸರಕಾರಕ್ಕೇನು ಕೆಲಸ ಎಂಬುದು ಅವರ ಪ್ರಶ್ನೆ. ನಾವು ರಾಜ್ಯಗಳ ಅಧಿಕಾರ ಕಿತ್ತುಕೊಳ್ಳುವುದಿಲ್ಲ, ಬದಲಾಗಿ ರಾಜ್ಯಗಳ ಜತೆ ಸಹಕಾರ ಆಂದೋಲನದಲ್ಲಿ ಜತೆಯಾಗಿ ಕೆಲಸ ಮಾಡುತ್ತೇವೆ ಎಂದು ಶಾ ಹೇಳಿದರು.
ವಾಜಪೇಯಿ ಅವರು 2002ರಲ್ಲಿ ಪ್ರಧಾನಿಯಾಗಿದ್ದಾಗ ಸಹಕಾರ ನೀತಿಯನ್ನು ಜಾರಿಗೆ ತರಲಾಗಿತ್ತು. ಈಗ ಮೋದಿ ಅವರು ಪ್ರಧಾನಿಯಾಗಿರುವ ವೇಳೆ ಮತ್ತೆ ಹೊಸ ನೀತಿ ಜಾರಿಗೆ ತರಲಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ