ಹಣಕಾಸು ಸಂಕಷ್ಟ ನಿವಾರಣೆಗೆ ಸರಕಾರದಿಂದ ಯೋಜನೆ

ಅಧಿಕಾರಿಗಳ ಸಭೆಯಲ್ಲಿ ಯಡಿಯೂರಪ್ಪ ನಿರ್ಧಾರ ; 15 ಸಾವಿರ ಕೋಟಿ ರೂ. ಸಂಗ್ರಹ ಗುರಿ

Team Udayavani, Apr 14, 2020, 5:15 AM IST

ಹಣಕಾಸು ಸಂಕಷ್ಟ ನಿವಾರಣೆಗೆ ಸರಕಾರದಿಂದ ಯೋಜನೆ

ಬೆಂಗಳೂರು: ಕೋವಿಡ್ 19 ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರಕಾರ ಬಿಡಿಎ ಸೇರಿ ರಾಜ್ಯದ ನಗರಾಭಿವೃದ್ದಿ ಪ್ರಾಧಿಕಾರಗಳ ವ್ಯಾಪ್ತಿಯಲ್ಲಿ ಮೂಲೆ ನಿವೇಶನಗಳನ್ನು ಹರಾಜು ಮಾಡಲು ನಿರ್ಧಾರ ಮಾಡಿದೆ.

ಇದರಿಂದ ಸುಮಾರು 15,000 ಕೋಟಿ ರೂ ಆದಾಯ ಬರುವ ನಿರೀಕ್ಷೆ ಇದೆ. ಮಂಗಳವಾರ ಪ್ರಮುಖ ಸಚಿವರು ಹಾಗೂ ಅಧಿಕಾರಿಗಳ ಜತೆ ಸಭೆ ನಡೆಸಿದ ಅನಂತರ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರು ಈ ತೀರ್ಮಾನ ಪ್ರಕಟಿಸಿದರು.

ರಾಜ್ಯದ ಆರ್ಥಿಕ ಸ್ಥಿತಿ ಸುಧಾರಣೆಗೆ ಈ ಕ್ರಮ ಅಗತ್ಯ. ಬಿಡಿಎ ವ್ಯಾಪ್ತಿಯ 12 ಸಾವಿರ ಮೂಲೆ ನಿವೇಶನ (ಕಾರ್ನರ್‌ ಸೈಟ್‌) ಹರಾಜು ಹಾಕಲಾಗುವುದು. ಆದರೆ ಸರಿಯಾದ ಬೆಲೆ ಸಿಕ್ಕರೆ ಮಾತ್ರ ನಿವೇಶನಗಳನ್ನು ಹರಾಜು ಹಾಕಲಾಗುವುದು ಎಂದು ಹೇಳಿದರು.

ಈಗಾಗಲೇ ಆರಂಭಗೊಂಡಿರುವ ಉಚಿತ ಹಾಲು ವಿತರಣೆಯನ್ನು ಇನ್ನೂ ಒಂದು ವಾರ ವಿಸ್ತರಿಸಲು ನಿರ್ಧರಿಸಲಾಗಿದೆ. ಅನಧಿಕೃತ ಕಟ್ಟಡಗಳ ಸಂಬಂಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ವಿಲೇವಾರಿಗೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಎಂಎಸ್‌ಐಎಲ್‌ ಮೂಲಕ ಮದ್ಯ ಮಾರಾಟ ಮಾಡುವ ಸಂಬಂಧ ಚಿಂತನೆ ಇದೆ. ಎ.14ರ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕಬ್ಬು ಬೆಳೆಗಾರರಿಗೆ ಸಕ್ಕರೆ ಕಾರ್ಖಾನೆಗಳು ನೀಡಬೇಕಿರುವ ಬಾಕಿ 2,834 ಕೋಟಿ ರೂ ಕೂಡಲೇ ಪಾವತಿಸಲು ಸೂಚಿಸಲಾಗಿದೆ ಎಂದರು.

ಲಾಕ್‌ಡೌನ್‌ ಸಡಿಲ?
ಸ್ಮಾರ್ಟ್‌ ಲಾಕ್‌ಡೌನ್‌ ಬಗ್ಗೆಯೂ ಸಿಎಂ ಬಿಎಸ್‌ವೈ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು. ಈ ವೇಳೆ ಸೋಂಕು ಪ್ರಕರಣ ಇಲ್ಲದ ಹಾಗೂ ಹೆಚ್ಚು ಪ್ರಕರಣಗಳು ವರದಿಯಾಗದ ಕಡೆ ಸಡಿಲಗೊಳಿಸಬಹುದು ಎಂಬ ಅಭಿಪ್ರಾಯ ವ್ಯಕ್ತವಾಯಿತು. ಜತೆಗೆ ಕೆಲವು ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ನೀಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಖಾತರಿಪಡಿಸಿಕೊಳ್ಳಬೇಕು ಎಂಬ ಸಲಹೆಯೂ ಬಂದಿತು. ಈ ಹಿನ್ನೆಲೆಯಲ್ಲಿ ಅಂತಿಮವಾಗಿ ರಾಜ್ಯದಲ್ಲಿ ಲಾಕ್‌ ಡೌನ್‌ ಸಡಿಲಗೊಳಿಸಬೇಕೆ ಬೇಡವೇ ? ಸಡಿಲ ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ.

ಕೋವಿಡ್ 19 ತಪಾಸಣೆ ಕೇಂದ್ರ ಹೆಚ್ಚಳಕ್ಕೆ ಸೂಚನೆ
ರಾಜ್ಯದಲ್ಲಿ ಕೋವಿಡ್ 19 ಸೋಂಕಿತರ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಯಲ್ಲಿ ರಾಜ್ಯ ಸರಕಾರಿ ಹಾಗೂ ಖಾಸಗಿ ಮೆಡಿಕಲ್‌ ಕಾಲೇಜುಗಳಲ್ಲಿ ಕೋವಿಡ್ 19ವೈರಸ್‌ ತಪಾಸಣ ಪ್ರಮಾಣವನ್ನು ಹೆಚ್ಚಳ ಮಾಡುವಂತೆ ರಾಜ್ಯ ಸರಕಾರ ಸುತ್ತೋಲೆ ಹೊರಡಿಸಿದೆ. ರಾಜ್ಯದ ಸರಕಾರಿ ಸ್ವಾಮ್ಯದ ಎಲ್ಲ ವೈದ್ಯಕೀಯ ಕಾಲೇಜುಗಳು ಹಾಗೂ ಖಾಸಗಿ ಸ್ವಾಯತ್ತ ಸಂಸ್ಥೆಗಳು ತಮ್ಮ ಕಾಲೇಜುಗಳ ವ್ಯಾಪ್ತಿಯಲ್ಲಿ ಅಗತ್ಯ ಪ್ರಯೋಗಾಲಯ ಹಾಗೂ ಸಿಬಂದಿ ನೇಮಿಸಿಕೊಂಡು ಹೆಚ್ಚಿನ ತಪಾಸಣೆ ಮಾಡಬೇಕು ಎಂದು ಸುತ್ತೋಲೆ ಹೊರಡಿಸಿದೆ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.