ವಿಜಯಪುರ : ಜಗತ್ತಿನ ಅದ್ಭುತ ಗೋಲಗುಮ್ಮಟ ಕಂಡು ನಿಬ್ಬೆರಗಾದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್


Team Udayavani, Nov 8, 2021, 8:20 PM IST

ವಿಜಯಪುರ : ಜಗತ್ತಿನ ಅದ್ಭುತ ಗೋಲಗುಮ್ಮಟ ಕಂಡು ನಿಬ್ಬೆರಗಾದ ರಾಜ್ಯಪಾಲ

ವಿಜಯಪುರ : ಜಗತ್ತಿನಲ್ಲೇ ನಿಬ್ಬೆರಗು ಮೂಡಿಸುವ ಅದ್ಭುತವೇ ವಿಜಯಪುರ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳಲ್ಲಿ ಅಡಗಿದೆ. ಅದರಲ್ಲೂ ಅದ್ಭುತ ವಾಸ್ತು ವಿನ್ಯಾಸದಲ್ಲಿ ನಿರ್ಮಾಗೊಂಡಿರುವ ಗೋಲಗುಮ್ಮಟ ಸ್ಮಾರಕ ವಿಶ್ವವಿಖ್ಯಾತ ಎನ್ನುವುದಕ್ಕೆ ಅರ್ಥಪೂರ್ಣವಾಗಿದೆ. ಇಂಥ ಸ್ಮಾರಕಗಳ ಸಂರಕ್ಷಣೆ ಹಾಗೂ ಜಗತ್ತಿಗೆ ಹೆಚ್ಚಿಗೆ ಪ್ರಚಾರ ನೀಡಿ, ವಿಶ್ವದ ಪ್ರವಾಸಿಗರನ್ನು ಆಕರ್ಷಿಸುವುದು ಅಗತ್ಯವಿದೆ.

ಅಪರೂಪದ ವಾಸ್ತು ವಿನ್ಯಾಸದ ಮೂಲಕ ಜಾಗತಿಕ ಅದ್ಭುತ ಪಾರಂಪರಿಕ ಸ್ಮಾರಕ ಎನಿಸಿರುವ ಗೋಲಗುಮ್ಮಟ ವೀಕ್ಷಿಸಿದ ಬಳಿಕ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಅಚ್ಚರಿ ವ್ಯಕ್ತಪಡಿಸಿದ ಪರಿ ಇದು. ಕನಾಟಕ ರಾಜ್ಯಪಾಲರಾದ ಬಳಿಕ ಸೋಮವಾರ ಸಂಜೆ ವಿಜಯಪುರ ನಗರಕ್ಕೆ ಮೊದಲ ಭೇಟಿ ಮಾಡಿದ ಥಾವರಚಂದ್ ಗೆಹ್ಲೋಟ್ ಅವರು, ಗೋಧೂಳಿ ಸಂದರ್ಭದಲ್ಲಿ ನಗರದಲ್ಲಿರುವ ವಿಶ್ವವಿಖ್ಯಾತ ಐತಿಹಾಸಿಕ ಸ್ಮಾರಕಗಳಾದ ಗೋಲಗುಮ್ಮಟ, ಬಾರಾಕಮಾನ್ ಸ್ಮಾರಕಗಳನ್ನು ವೀಕ್ಷಿಸಿದರು.

ವಹೋಸಹಜತೆಯ ಕಾರಣದಿಂದ ಗೋಲಗುಮ್ಮಟ ಸ್ಮಾರಕ ಏರಲಾಗದಿದ್ದರೂ ಕೆಳಗಿನಿಂದಲೇ ಸ್ಮಾರಕದಲ್ಲಿರುವ ಶಾಹಿ ಅರಸರ ಸಮಾದಿಗಳನ್ನು ವೀಕ್ಷಿಸಿದ ರಾಜ್ಯಪಾಲ ಗೆಹ್ಲೋಟ್ ಅವರು, ಹಿರಿಯ ಪ್ರವಾಸಿ ಮಾರ್ಗದರ್ಶಿಯಾಗಿರುವ ರಾಜಶೇಖರ ಕಲ್ಯಾಣಮಠ ಅವರಿಂದ ಇತಿಹಾಸ ಹಾಗೂ ಸ್ಮಾರಕಗಳ ಬಗ್ಗೆ ಮಾಹಿತಿ ಪಡೆದರು. ಗೋಲಗುಮ್ಮಟ ಸ್ಮಾರಕದ ನಡುಗಂಬಳೇ ಇಲ್ಲದೇ ನಿರ್ಮಿಸಿದ ವಿಶಿಷ್ಟ ವಾಸ್ತು ವಿನ್ಯಾಸ, ಪಿಸುಗುಟ್ಟುವ ಗ್ಯಾಲರಿ, ಸಪ್ತಧ್ವನಿಸುವ ತಂತ್ರಜ್ಞಾನ ಹೀಗೆ ವಿಜಯಪುರ ಆದಿಲ್ ಶಾಹಿ ಅಸರ ಇತಿಹಾಸ ಹಾಗೂ ವಾಸ್ತು ವಿನ್ಯಾಸದಲ್ಲಿ ಒಂದಕ್ಕಿಂತ ಒಂದು ವಿಭಿನ್ನ ಸ್ಮಾರಕ ನಿರ್ಮಾಣದ ಕುರಿತು ಮಾಹಿತಿ ಕೇಳಿ ಬೆರಗು ವ್ಯಕ್ತಪಡಿಸಿದರು. ಅದರಲ್ಲೂ ಗೋಲಗುಮ್ಮಟ ವಾಸ್ತು ವಿನ್ಯಾಸ ಮುಂದಿನ ಪೀಳಿಗೆಗೆ ಪ್ರೇರಣೆಯಾಗಲಿ ಎಂದು ಆಶಿಸಿದರು.

ಬಳಿಕ ಶತಮಾನ ಕಂಡಿರುವ ಗುಮ್ಮಟ ಆವರಣ ಪ್ರವೇಶ ದ್ವಾರದಲ್ಲಿರುವ ನಕ್ಕರಖಾನಾ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿದ ರಾಜ್ಯಪಾಲರು, ಪಾರಂಪರಿಕ ವಸ್ತುಗಳ ಸಂಗ್ರಹದಲ್ಲಿರುವ ವಿಶಿಷ್ಟ ಕೆತ್ತನೆಯ ಬುದ್ಧ ಹಾಗೂ ಜಿನ ಮೂರ್ತಿಗಳನ್ನು ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು. ಬಳಿಕ ಬಾರಾಕಮಾನ್ ಸ್ಮಾರಕಕ್ಕೆ ಭೇಟಿ ನೀಡಿದ ಗೆಹ್ಲೋಟ್ ಅವರು, ಅರ್ಧಕ್ಕೆ ನಿಂತರೂ ನಿಮಾತೃವಿನ ಮಹತ್ವಕಾಂಕ್ಷೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಮಧ್ಯೆ ತಮಗೆ ವಿಜಯಪುರ ಜಿಲ್ಲೆಯ ಇತಿಹಾಸ ಹಾಗೂ ಸ್ಮಾರಕಗಳ ವಾಸ್ತು ವಿನ್ಯಾಸದ ವೈಶಿಷ್ಟ್ಯತೆ, ವಿಭಿನ್ನತೆಯ ಮಹತ್ವದ ಕುರಿತು ಮಾಹಿತಿ ನೀಡಿದ ಪ್ರವಾಸಿ ಮಾರ್ಗದರ್ಶಿ ರಾಜಶೇಖರ ಅವರ ಮಾತಿನ ಶೈಲಿ ಮೆಚ್ಚಿ ಬೆನ್ನುತಟ್ಟಿ ಸಂತಸ ವ್ಯಕ್ತಪಡಿಸಿದ ರಾಜ್ಯಪಾಲರು, ವಿಜಯಪುರ ಜಿಲ್ಲೆಯಲ್ಲಿರುವ ಐತಿಹಾಸಿಕ ಸ್ಮಾರಕಗಳು ನಿಜಕ್ಕೂ ಅದ್ಭುತ ಮಾತ್ರವಲ್ಲ, ಪ್ರವಾಸಿಗರ ಸ್ಮರ್ಗ. ನೀವು ನಿಮ್ಮ ನೆಲದ ಇತಿಹಾಸ ಹಾಗೂ ಸ್ಮಾರಕಗಳ ಸಿರಿವಂತಿಕೆಯನ್ನು ಅತ್ಯಂತ ಅದ್ಭುತ ಹಾಗೂ ಮನಮುಟ್ಟುವಂತೆ ವಿವರಿಸಿದ್ದೀರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನೂ ಓದಿ : ಪತ್ರಕರ್ತರ ರಾಜ್ಯ ಸಮ್ಮೇಳನದ ಲಾಂಚನ ಬಿಡುಗಡೆ ಮಾಡಿದ ಸಿಎಂ

ಝೀರೋ ಟ್ರಾಫಿಕ್ : ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರ ವಿಜಯಪುರ ನಗರದ ಸ್ಮಾರಕಗಳ ವೀಕ್ಷಣೆ ಹಿಲ್ಲೆಯಲ್ಲಿ ಅವರು ಸಂಚರಿಸುವ ಮಾರ್ಗದಲ್ಲಿ ಝೋರೋ ಟ್ರಾಫಿಕ್ ವ್ಯವಸ್ಥೇ ಮಾಡಲಾಗಿತ್ತು. ಅದರಲ್ಲೂ ಬಾರಾಕಮಾನ್ ಸ್ಮಾರಕ ರಸ್ತೆಯಿಂದ ಗೋಲಗುಮ್ಮಟ ಸ್ಮಾರಕದ ವರೆಗೆ ಸ್ಟೇಶನ್ ರಸ್ತೆಯನ್ನು ಸಂಪೂರ್ಣವಾಗಿ ನಿರ್ಜನ ರಸ್ತೆಯಾಗಿ ಪರಿವರ್ತಿಸಲಾಗಿತ್ತು. ರಸ್ತೆ ಮಾತ್ರವಲ್ಲ ರಾಜ್ಯಪಾಲರು ವೀಕ್ಷಿಸುವ ಸ್ಮಾರಕಗಳ ಪ್ರದೇಶದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಏಕಾಏಕಿ ಸ್ಟೇಶನ್ ರಸ್ತೆಯಲ್ಲಿ ಝೀರೋ ಟ್ರೀಫಿಕ್ ಮಾಡಿದರೂ ನಗರದ ಜನರು ರಾಜ್ಯಪಾಲರು ಸಂಚರಿಸುವ ರಸ್ತೆಗಳ ಇಕ್ಕೆಲಗಳಲ್ಲಿ ನೆರದು ಕುತೂಹಲದಿಂದ ವೀಕ್ಷಿಸುತ್ತಿದ್ದರು. ರಾಜಬೀದಿಯಲ್ಲಿ ರಾಜನಿಗೆ ನೀಡುವ ರಾಜವೈಭವದ ಸ್ವಾಗತ ಮೆರಣಿಗೆ ರೀತಿಯಲ್ಲಿ ರಾಜ್ಯಪಾಲರಿಗೆ ವಿಶೇಷ ಗೌರ ನೀಡಿದ್ದನ್ನು ಕಂಡು ಜನರು ಹಿಂದೆಂದೂ ಇಂಥ ವೈಭವದ ರಾಜ ಮರ್ಯಾದೆ ಯಾರಿಗೂ ದೊರೆತಿರಲಿಲ್ಲ. ಹೀಗಾಗಿ ಥಾವರಚಂದ್ ಗೆಹ್ಲೋಟ್ ಅವರ ವಿಜಯಪುರ ಭೇಟಿಗೆ ಮಾಡಿದ್ದ ವ್ಯವಸ್ಥೆ ನಿಜಕ್ಕೂ ಸ್ಮರಣೆಯಲ್ಲಿ ಉಳಿಯುವಂತೆ ಮಾಡಿದೆ ಎಂದು ಜನರು ಅಭಿಪ್ರಾಯಿಸಿದರು.

ರಂಗೋಲಿ ಸ್ವಾಗತ : ರಾಜ್ಯಪಾಲರು ವೀಕ್ಷಣೆ ಮಾಡಲು ಸಂಚರಿಸುವ ಸ್ಟೇಶನ್ ರಸ್ತೆಯಲ್ಲಿನ ಎರಡೂ ಬದಿಯಲ್ಲಿ ಗೂಡಂಗಡಿಗಳು, ಬೀದಿ ಬದಿ ವ್ಯಾಪಾರಿಗಳನ್ನು ಪೊಲೀಸರ ಸಹಾಯದಿಂದ ತೆರವು ಗೊಳಿಸಲಾಗಿತ್ತು. ಅಲ್ಲದೇ ಗೋಲಗುಮ್ಮಟ ಹಾಗೂ ಬಾರಾಕಮಾನ್ ಸ್ಮಾರಕಗಳ ಆವರಣದ ಪ್ರವೇಶ ದ್ವಾರದಲ್ಲಿ ವಿಶಿಷ್ಟ ರೀತಿಯಲ್ಲಿ ರಂಗೋಲಿ ಬಿಡಿಸಿ, ಸ್ವಾಗತ ಕೋರಲಾಗಿತ್ತು.

ತೇಪೆಕಂಡ ಹದಗೆಟ್ಟ ರಸ್ತೆಗಳು : ನಗರದಲ್ಲಿನ ಪ್ರಮುಖ ರಸ್ತೆಗಳಲ್ಲ ಹದಗೆಟ್ಟಿದ್ದು, ಜನತೆ ಆಡಳಿತ ವ್ಯವಸ್ಥೆಗೆ ಹಿಡಿ ಶಾಪ ಹಾಕುತ್ತಿದ್ದರು. ಆದರೆ ರಾಜ್ಯಪಾಲರ ಭೇಟಿ ಹಿನ್ನೆಲೆಯಲ್ಲಿ ನಗರ ಸ್ಟೇಶನ್ ರಸ್ತೆಯಿಂದ ರಾಜ್ಯಪಾಲರು ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲಿರುವ ತೊರವಿ ಬಳಿಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವರೆಗಿನ ಸುಮಾರು 20 ಕಿ.ಮೀ. ಗುಂಡಿಬಿದ್ದಿದ್ದ ರಸ್ತೆಗಳನ್ನು ರಾತ್ರೋರಾತ್ರಿ ಡಾಂಬರು ತೇಪೆ ಕಾಣುವಂತಾಗಿದೆ. ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಭೇಟಿ ಖಚಿತವಾಗುತ್ತಲೇ ರಾತ್ರೋರಾತ್ರಿ ಈ ರಸ್ತೆಯ ದುರಸ್ತಿ ಕಾರ್ಯಕ್ಕೆ ಮುಂದಾದ ಅಧಿಕಾರಿಗಳು, ರಸ್ತೆ ಸಂಚಾರಿ ಸೂಚನಾ ಫಲಕಗಳನ್ನು ಅಳವಡಿಸಲು ಮುಂದಾಗಿದ್ದರು.

ಹದಗೆಟ್ಟಿದ್ದ ರಸ್ತೆಗಳ ದುರಸ್ತಿಗೆ ವರ್ಷಗಟ್ಟಲೆ ಹಲವು ರೀತಿಯಲ್ಲಿ ಪ್ರತಿಭಟನೆ, ಮನವಿಗಳಂಥ ಮಾರ್ಗದ ಮೂಲಕ ಬೇಡಿಕೆ ಮಂಡಿಸಿದರೂ ಜನತೆಯ ಭಾವನೆಗೆ ಸ್ಪಂದನೆ ಸಿಕ್ಕಿರಲಿಲ್ಲ. ಆದರೆ ರಾಜ್ಯಪಾಲರ ಭೇಟಿ ಖಚಿತವಾಗುತ್ತಲೇ ತ್ವರಿತವಾಗಿ ಪ್ರಮುಖ ರಸ್ತೆ ದುರಸ್ತಿ ಕಂಡಿದೆ. ಹೀಗಾಗಿ ರಾಜ್ಯಪಾಲರು ಸೇರಿದಂತೆ ಗಣ್ಯರು ನಗರದ ಎಲ್ಲ ಸ್ಮಾರಕಗಳ ವೀಕ್ಷಣೆಗೆ ಮುಂದಾದಲ್ಲಿ ನಗರ ಎಲ್ಲ ರಸ್ತೆಗಳಿಗೆ ದುರಸ್ತಿ ಭಾಗ್ಯ ಸಿಗಲಿದೆ ಎನ್ನುವ ಮಾತುಗಳು ಸಾಮಾನ್ಯವಾಗಿ ಕೇಳಿಬಂತು.

– ಜಿ.ಎಸ್.ಕಮತರ 

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.