ಸಿಬಿಐ ನೂತನ ನಿರ್ದೇಶಕರಾಗಿ ಸುಬೋಧ್ ಕುಮಾರ್ ಜೈಸ್ವಾಲ್ ಆಯ್ಕೆ
Team Udayavani, May 25, 2021, 11:20 PM IST
ನವದೆಹಲಿ: ಮಹಾರಾಷ್ಟ್ರದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್ ಅವರು ಸಿಬಿಐನ ಹೊಸ ನಿರ್ದೇಶಕರಾಗಲಿದ್ದಾರೆ. ಸದ್ಯ ಅವರು, ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ ಮುಖ್ಯಸ್ಥರಾಗಿದ್ದಾರೆ.
ಅವರು ಅಧಿಕಾರದ ವಹಿಸಿದ ದಿನದಿಂದ ಎರಡು ವರ್ಷಗಳ ಕಾಲ ಹುದ್ದೆಯಲ್ಲಿ ಇರಲಿದ್ದಾರೆ. ಹೊಸ ನೇಮಕದ ಬಗ್ಗೆ ಕೇಂದ್ರ ಸಂಪುಟದ ನೇಮಕ ಸಮಿತಿ ಮಂಗಳವಾರ ರಾತ್ರಿ ಆದೇಶ ಹೊರಡಿಸಿದೆ.
ಅವರು 1985ನೇ ಬ್ಯಾಚ್ನ ಐಪಿಎಸ್ ಅಧಿಕಾರಿ. ಫೆಬ್ರವರಿ ಮೊದಲ ವಾರದಲ್ಲಿ ರಿಷಿ ಕುಮಾರ್ ಶುಕ್ಲಾ ಅವರು ಕೇಂದ್ರ ತನಿಖಾ ಸಂಸ್ಥೆಯ ನಿರ್ದೇಶಕ ಹುದ್ದೆಯಿಂದ ನಿವೃತ್ತಿಯಾಗಿದ್ದರು. ಅಂದಿನಿಂದ ಹುದ್ದೆ ತೆರವಾಗಿಯೇ ಇತ್ತು.
ಇದನ್ನೂ ಓದಿ :ಕೋವಿಡ್ ಪ್ರಕರಣ ಹೆಚ್ಚಳ : ಹಳ್ಳಿಗಳಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಿಸಲು ಸಿಎಂ ಸೂಚನೆ
ನೂತನ ನಿರ್ದೇಶಕರ ಆಯ್ಕೆಗೆ ಸೋಮವಾರ ಪ್ರಧಾನಿ ಮೋದಿ, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌಧರಿ ಮೂವರು ಐಪಿಎಸ್ ಅಧಿಕಾರಿಗಳ ಹೆಸರು ಅಂತಿಮಗೊಳಿಸಲಾಗಿತ್ತು. ಕೇಂದ್ರ ಸರ್ಕಾರ ಬಿಎಸ್ಎಫ್ ಮುಖ್ಯಸ್ಥ ರಾಕೇಶ್ ಅಸ್ತಾನ ಜು.31ಕ್ಕೆ, ಎನ್ಐಎ ಮುಖ್ಯಸ್ಥ ವೈ.ಸಿ.ಮೋದಿ ಮಾಸಾಂತ್ಯಕ್ಕೆ ನಿವೃತ್ತಿಯಾಗುವವರಿದ್ದರು. ಆದರೆ ಸಭೆಯಲ್ಲಿದ್ದ ಸಿಜೆಐ ನ್ಯಾ.ಎನ್.ವಿ.ರಮಣ, ನಿವೃತ್ತಿಯ ಅಂಚಿನಲ್ಲಿರುವ ಅಧಿಕಾರಿಗಳನ್ನು ಪ್ರಮುಖ ಹುದ್ದೆಗೆ ನೇಮಕ ಮಾಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ನೀಡಿದ್ದ ತೀರ್ಪು ಉಲ್ಲೇಖೀಸಿದ್ದರಿಂದ ಅವರ ಹೆಸರು ಕೈಬಿಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ