ಗ್ರಾ.ಪಂ ಮತಯಾಚನೆಗೆ ಇರುವ ನಿರ್ಬಂಧ ತಿಳಿಸಲು ಸರಕಾರ, ಜಿಲ್ಲಾಡಳಿತಕ್ಕೆ ಗೊಂದಲ: ಶಾಸಕ ಮೆಂಡನ್
Team Udayavani, Dec 23, 2020, 11:47 AM IST
ಕಾಪು: ಗ್ರಾ.ಪಂ ಚುನಾವಣೆ ಸಂದರ್ಭ ಮತಯಾಚನೆಗೆ ಇರುವ ನಿರ್ಬಂಧ ತಿಳಿಸುವಲ್ಲಿ ಸರಕಾರ, ಜಿಲ್ಲಾಡಳಿತವೇ ಗೊಂದಲದಲ್ಲಿದೆ. ಜನಪ್ರತಿನಿಧಿಗಳು ಮತಯಾಚನೆಗೆ ತೆರಳ ಬಾರದೆಂದೇನೂ ಇಲ್ಲ. ರಾಜ್ಯಾದ್ಯಂತ ಚುನಾವಣೆಗೆ ಇದೇ ರೀತಿಯ ಸಿದ್ದತೆಗಳು ನಡೆಯುತ್ತಿದ್ದು, ಈ ಬಗ್ಗೆ ಜಿಲ್ಲಾಡಳಿತ, ಸರಕಾರವೇ ಪೂರ್ಣ ಗೊಂದಲದಲ್ಲಿದೆ ಎಂದು ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಹೇಳಿದರು.
ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಜನಪ್ರತಿನಿಧಿಗಳು, ರಾಜಕೀಯ ಪಕ್ಷಗಳ ಮುಖಂಡರು ಮತಯಾಚನೆ ನಡೆಸುತ್ತಿರುವ ಬಗ್ಗೆ ಜಿಲ್ಲಾಧಿಕಾರಿಗಳ ಆಕ್ಷೇಪದ ಕುರಿತಾಗಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಗ್ರಾಮ ಪಂಚಾಯತ್ ಚುನಾವಣೆಗೆ ಪಕ್ಷದ ಚಿಹ್ನೆ ಇಲ್ಲವಾದರೂ ನಾವು ಮಾಡಿರುವ ಕೆಲಸದ ಆಧಾರದಲ್ಲಿ ನಮ್ಮವರ ಪರವಾಗಿ ಮತಯಾಚನೆ ನಡೆಸುತ್ತೇವೆ. ಇದು ಪಕ್ಷಾತೀತವಾಗಿ ನಡೆಯುವ ಚುನಾವಣೆಯಾದರೂ ಕೊನೆಗೆ ಗೆದ್ದ ನಂತರ ಪಕ್ಷದ ಬೆಂಬಲಕ್ಕೇ ಬಂದು ಅಧಿಕಾರ ನಡೆಸುವುದು ವಾಡಿಕೆಯಾಗಿದೆ. ಗ್ರಾಮದ ಜನರು, ಪಕ್ಷದ ಕಾರ್ಯಕರ್ತರು ನಮ್ಮನ್ನು ಗೆಲ್ಲಿಸಿದ್ದಾರೆ. ಕಾರ್ಯಕರ್ತರು ನಮ್ಮ ಪರವಾಗಿ ಕೆಲಸ ಮಾಡಿದ್ದರು, ನಾವು ಅವರಿಗೆ ಬೆಂಬಲ ನೀಡಿದರೆ ತಪ್ಪೇನಿಲ್ಲ ಎಂದು ಸ್ಪಷ್ಟನೆ ನೀಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರನ್ನು ಗೆಲ್ಲಿಸಬೇಕು ಎನ್ನುವುದನ್ನು ಜನರೇ ತೀರ್ಮಾನಿಸುತ್ತಾರೆ. ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣೆಯ ಸಂದರ್ಭದಲ್ಲಿ ನಾವು ಇಷ್ಟರವರೆಗೆ ನಡೆಸಿರುವ ಅಭಿವೃದ್ಧಿ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡಲು ಜನರ ಬಳಿ ತೆರಳುತ್ತಿದ್ದೇವೆ ಎಂದರು.
ಇದನ್ನೂ ಓದಿ: ಕೋವಿಡ್ ರೂಪಾಂತರ; ಎಚ್ಚರಿಕೆಯಿಂದ ಇರುವಂತೆ ಸಚಿವ ರಮೇಶ್ ಜಾರಕಿಹೊಳಿ ಸೂಚನೆ
ಕಾಪು ವಿಧಾನ ಸಭಾ ಕ್ಷೇತ್ರದ 10 ಗ್ರಾಮ ಪಂಚಾಯತ್ ಗಳಿಗೆ ಪ್ರಥಮ ಹಂತದಲ್ಲಿ ಚುನಾವಣೆ ನಡೆದಿದ್ದು, ಎರಡನೇ ಹಂತದಲ್ಲಿ 16 ಗ್ರಾಮ ಪಂಚಾಯತ್ ಗಳಿಗೆ ಚುನಾವಣೆ ನಡೆಯಲಿದೆ. 26 ಗ್ರಾಮ ಪಂಚಾಯತ್ ಗಳ ಪೈಕಿ ಕಾಪು ಕ್ಷೇತ್ರದ 23-24 ಗ್ರಾಮ ಪಂಚಾಯತ್ ಗಳಲ್ಲಿ ಬಿಜೆಪಿ ಬೆಂಬಲಿತ ಆಡಳಿತದ ನಿರೀಕ್ಷೆಯಲ್ಲಿದ್ದೇವೆ ಎಂದರು.
ಕೋವಿಡ್ ಎರಡನೇ ಹಂತದ ಅಲೆಯ ಬಗ್ಗೆ ಜನರೇ ಸ್ವತಃ ಜಾಗೃತರಾಗಬೇಕಿದೆ. ಮಹಾರಾಷ್ಟ್ರದಲ್ಲಿ ಜನರು ನಮಗಿಂತ ಹೆಚ್ಚು ಜಾಗೃತರಾಗಿದ್ದಾರೆ. ಮುಂದುವರಿದ ರಾಷ್ಟ್ರಗಳಲ್ಲೂ ಈ ಬಗ್ಗೆ ಭಾರೀ ಜಾಗೃತೆ ವಹಿಸಲಾಗಿದೆ. ನಮಗಿಂತ ಮುಂದುವರೆದ ಇಂಗ್ಲೆಂಡ್ ಈಗಾಗಲೇ ಕಟ್ಟು ನಿಟ್ಟಿನ ಕ್ರಮದ ಮೂಲಕ ಕೊರೊನಾ ಅಲೆಯಿಂದ ಜನರನ್ನು ರಕ್ಷಿಸಲು ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿದೆ. ಈ ಕಾರಣದಿಂದ ನಾವು ಸ್ವತಃ ಜಾಗೃತರಾಗಬೇಕಿದೆ ಎಂದರು.
ಇದನ್ನೂ ಓದಿ: ಪೊಂಗಲ್ ಸಂಭ್ರಮ: ಕೋವಿಡ್ ಮಾರ್ಗಸೂಚಿಯಂತೆ ಜಲ್ಲಿಕಟ್ಟು ಆಚರಣೆಗೆ ಅನುಮತಿ: ತಮಿಳುನಾಡು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ