ಜಗಳ ಮಾಡಿ ಮನೆ ಬಿಟ್ಟು ದಾಂಡೇಲಿಗೆ ಬಂದ ಧಾರವಾಡದ ಅಜ್ಜಿ

ಮರಳಿ ಮನೆಗೆ ಸೇರಿಸುವಲ್ಲಿ ಯಶಸ್ವಿಯಾದ ಪೊಲೀಸರು

Team Udayavani, Sep 30, 2021, 8:26 PM IST

ಜಗಳ ಮಾಡಿ ಮನೆ ಬಿಟ್ಟು ದಾಂಡೇಲಿಗೆ ಬಂದ ಧಾರವಾಡದ ಅಜ್ಜಿ

ದಾಂಡೇಲಿ : ಜಗಳ ಮಾಡಿ ಮನೆ ಬಿಟ್ಟು ಬಂದ ಧಾರವಾಡದ ಅಜ್ಜಿಯನ್ನು ಮರಳಿ ಮನೆಗೆ ಸೇರಿಸಿದ ಘಟನೆ ಗುರುವಾರ ನಗರದಲ್ಲಿ ನಡೆದಿದೆ.

ಮೂಲತ: ಕದ್ರಾ ನಿವಾಸಿಯಾಗಿದ್ದ, ಹಾಲಿ ಧಾರವಾಡದ ವನಶ್ರೀನಗರ ನಿವಾಸಿಯಾಗಿರುವ ಶಾಂತ ಹೋಳಿ ಬಸವರಾಜ ಅರಗುಂಜಿ (ವ:76) ಎಂಬ ಅಜ್ಜಿ ಅಳಿಯನ ಮನೆಯಲ್ಲಿ ವಾಸವಿದ್ದು, ಅಲ್ಲಿ ಜಗಳ ಮಾಡಿ ಹೇಳದೆ ಕೇಳದೆ ಮನೆ ಬಿಟ್ಟು ದಾಂಡೇಲಿಗೆ ಬಂದಿದ್ದರು. ನಗರಕ್ಕೆ ಬಂದಿದ್ದ ಅಜ್ಜಿ ಹಸಿವಿನಿಂದ ಬಸವಳಿದಿರುವುದನ್ನು ಗಮನಿಸಿದ ನಗರದ ಯುವಕರುಗಳಾದ ಆಂಜನೇಯ, ಕುಮಾರ್, ಸಾಗರ್ ಮತ್ತು ಉಮೇಶ ಸಾವಳಗಿಮಠ ಅವರುಗಳು ಅಜ್ಜಿಗೆ ಉಪಹಾರವನ್ನು ನೀಡಿ ಹಸಿವನ್ನು ನೀಗಿಸಿದರು. ಆನಂತರ ಅಜ್ಜಿಯನ್ನು ವಿಚಾರಿಸಿ ತುರ್ತು ಸೇವಾ ಘಟಕವಾದ 112 ಗೆ ಕರೆ ಮಾಡಿ ಮಾಹಿತಿಯನ್ನು ನೀಡಿದರು.

ತಕ್ಷಣವೆ ಸ್ಥಳಕ್ಕಾಗಮಿಸಿದ 112 ತುರ್ತು ವಾಹನ ಅಜ್ಜಿಯನ್ನು ನಗರ ಠಾಣೆಗೆ ಕರೆದುಕೊಂಡು ಹೋಗಿದೆ. ನಗರ ಠಾಣೆಯಲ್ಲಿ ಪಿಎಸೈ ಯಲ್ಲಪ್ಪ.ಎಸ್ ಅವರ ನೇತೃತ್ವದ ಪೊಲೀಸ್ ತಂಡ ಅಜ್ಜಿಯನ್ನು ವಿಚಾರಿಸಿ, ಅಜ್ಜಿಯ ಅಳಿಯನನ್ನು ನಗರ ಠಾಣೆಗೆ ಕರೆಸಿ, ಇಬ್ಬರಿಗೂ ಬುದ್ದಿ ಮಾತು ಹೇಳಿ ಅಜ್ಜಿಯನ್ನು ಮರಳಿ ಮನೆಗೆ ಕಳುಹಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣ ಸುಖಾಂತ್ಯ ಕಂಡಿದೆ. ಇತ್ತ ಹಸಿವಿನಿಂದ ಬಸವಳಿದಿದ್ದ ಅಜ್ಜಿಗೆ ಉಪಹಾರದ ವ್ಯವಸ್ಥೆಯನ್ನು ಮಾಡಿ ಅಜ್ಜಿಯ ಬಗ್ಗೆ ಕಾಳಜಿ ತೋರಿದ ಯುವಕರ ತಂಡದ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.

ಇದನ್ನೂ ಓದಿ :ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿದೇಶಿ ಚಿತ್ರತಂಡಗಳ ಆಹ್ವಾನಕ್ಕೆ ಸಿಎಂ ಸಲಹೆ  

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.