ಗೃಹಜ್ಯೋತಿ: ಅರ್ಧ ಕೋಟಿ ನೋಂದಣಿ


Team Udayavani, Jun 26, 2023, 7:26 AM IST

GRUHAJYOTHI

ಬೆಂಗಳೂರು: ಸರಕಾರದ ಗೃಹಜ್ಯೋತಿ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದವರ ಸಂಖ್ಯೆ ಅರ್ಧ ಕೋಟಿಯ ಗಟಿ ದಾಟಿದ್ದು, ಇದರೊಂದಿಗೆ ಒಟ್ಟಾರೆ ಫ‌ಲಾನುಭವಿಗಳ ಪೈಕಿ ಕಾಲು ಭಾಗದಷ್ಟು ಜನ ಯೋಜನೆಗಾಗಿ ಹೆಸರು ನೋಂದಾಯಿಸಿಕೊಂಡಂತಾಗಿದೆ.

ಯೋಜನೆ ಅಡಿ ಅರ್ಜಿ ಸ್ವೀಕರಿಸುವ ಪ್ರಕ್ರಿಯೆಗೆ ಜೂ. 18ರಂದು ಚಾಲನೆ ನೀಡಲಾಗಿತ್ತು. ಇದರಡಿ ಈವರೆಗೆ 51,17,692 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಎಂಟು ದಿನಗಳಲ್ಲಿ ನಿತ್ಯ ಸರಾಸರಿ 6.40 ಲಕ್ಷ ಜನ ಹೆಸರು ಮತ್ತು ಆಧಾರ್‌ ಸಂಖ್ಯೆ ಹಾಗೂ ಗ್ರಾಹಕರ ಆರ್‌.ಆರ್‌ ಸಂಖ್ಯೆ ಜೋಡಣೆ ಮಾಡಿಸಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಈ ಪ್ರಮಾಣ ದ್ವಿಗುಣಗೊಳ್ಳುವ ಸಾಧ್ಯತೆ ಇದೆ. ಒಟ್ಟು ಫ‌ಲಾನುಭವಿಗಳ ಸಂಖ್ಯೆ 2.14 ಕೋಟಿ ಇದೆ ಎಂದು ಅಂದಾಜಿಸಲಾಗಿದೆ.

ಮೊದಲ ದಿನವಾದ ರವಿವಾರ 95 ಸಾವಿರ ಮಂದಿ ಸೇವಾ ಸಿಂಧು ಪೋರ್ಟಲ್‌ನಲ್ಲಿ ಹೆಸರು ನೋಂದಾ ಯಿಸಿಕೊಂಡು, ಆಧಾರ್‌ ಜೋಡಣೆ ಮಾಡಿದ್ದರು. ಎರಡನೇ ದಿನ 1.06 ಲಕ್ಷ ಗ್ರಾಹಕರು ನೋಂದಣಿ ಮಾಡಿ ಕೊಂಡಿದ್ದರು. ಮೂರ್‍ನಾಲ್ಕು ದಿನಗಳಿಂದ ನೋಂದಣಿ ಪ್ರಕ್ರಿಯೆ ವೇಗ ಪಡೆದುಕೊಂಡಿದೆ. ಪರಿಣಾಮ ವಾರಾಂತ್ಯದ ದಿನಗಳಾದ ಶುಕ್ರವಾರ ಮತ್ತು ಶನಿವಾರ ಕ್ರಮವಾಗಿ 10.93 ಲಕ್ಷ ಹಾಗೂ 11.17 ಲಕ್ಷ (ರಾತ್ರಿ 8ರ ವರೆಗೆ) ಅರ್ಜಿಗಳು ಸಲ್ಲಿಕೆಯಾಗಿದ್ದವು. ರವಿವಾರ ಹೆಚ್ಚು-ಕಡಿಮೆ ಮತ್ತೆ 10 ಲಕ್ಷ ಜನ ನೋಂದಾಯಿಸಿಕೊಂಡಿದ್ದಾರೆ.

ಇ-ಆಡಳಿತ ಇಲಾಖೆ ಪ್ರತ್ಯೇಕ ನೋಂದಣಿ ಅನ್ನು ರಾಜ್ಯದ ಎರಡು ಸಾವಿರ ವಿದ್ಯುತ್‌ ಕಚೇರಿಗಳಲ್ಲೂ ಅವಕಾಶ ನೀಡಿದೆ. ಸೇವಾ ಸಿಂಧು ಪೋರ್ಟಲ್‌ http://sevasindhugs.karnataka.gov.in  ಮೂಲಕವೂ ನೋಂದಣಿ ಮಾಡಿಕೊಳ್ಳಬಹುದು ಎಂದು ಇಲಾಖೆ ಪ್ರಕಟನೆ ತಿಳಿಸಿದೆ.

ಹೆಚ್ಚುವರಿ ವಸೂಲಿ: ಸಹಾಯವಾಣಿಗೆ ದೂರು
ಯೋಜನೆ ಅಡಿ ಹೆಸರು ನೋಂದಣಿಗಾಗಿ ಗ್ರಾಹಕರಿಂದ ಅನಧಿಕೃತವಾಗಿ ಹೆಚ್ಚುವರಿ ಹಣ ಪಡೆಯುತ್ತಿರುವುದು ಕಂಡುಬಂದರೆ, ಕೂಡಲೇ ಸಹಾಯವಾಣಿ 1912ಗೆ ಕರೆ ಮಾಡಬೇಕು ಎಂದು ಇಂಧನ ಇಲಾಖೆ ತಿಳಿಸಿದೆ.

ಗ್ರಾಮ ಪಂಚಾಯತ್‌ ಗ್ರಾಮ ಒನ್‌, ಬೆಂಗಳೂರು ಒನ್‌, ಕರ್ನಾಟಕ ಒನ್‌ ಕೇಂದ್ರಗಳಲ್ಲಿ ನೋಂದಣಿಗೆ ನಿಗದಿತ ಸೇವಾ ಶುಲ್ಕ ಮಾತ್ರ ಪಾವತಿಸಬೇಕು. ಹೆಚ್ಚುವರಿ ಹಣ ಪಡೆಯುತ್ತಿರುವುದು ಕಂಡುಬಂದರೆ ದಿನದ 24 ಗಂಟೆ ಕಾರ್ಯನಿರ್ವಹಿಸುವ ಸಹಾಯವಾಣಿ (1912)ಗೆ ಕರೆ ಮಾಡಬೇಕು ಎಂದು ಇಲಾಖೆ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

fashion-world

Fashion World: ಮಹಿಳೆಯರ ನೆಚ್ಚಿನ ಉಡುಗೆ ಸೀರೆ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

fashion-world

Fashion World: ಮಹಿಳೆಯರ ನೆಚ್ಚಿನ ಉಡುಗೆ ಸೀರೆ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

4-uv-fusion

Movie Review: ಜೀವನ ಒಂದು ಹೋರಾಟ, ಆ ಹೋರಾಟ ನಿರಂತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.