Watch: ವರದಕ್ಷಿಣೆಗೆ ಬೇಡಿಕೆ ಇಟ್ಟ ವರನನ್ನು ಮರಕ್ಕೆ ಕಟ್ಟಿ ಹಾಕಿ ಒತ್ತೆಯಾಳನ್ನಾಗಿಸಿದ್ರು!
ಸಂಧಾನಕ್ಕಾಗಿ ಮಾತುಕತೆ ನಡೆಸಿದ್ದರೂ ಕೂಡಾ ಅದು ವಿಫಲವಾಗಿತ್ತು.
Team Udayavani, Jun 16, 2023, 11:22 AM IST
ಲಕ್ನೋ: ವಿವಾಹ ಮಂಟಪದಲ್ಲಿ ವರ, ವಧುವಿನ ಕೊರಳಿಗೆ ಮಾಲೆಯನ್ನು ಹಾಕುವ ಮೊದಲು ವರದಕ್ಷಿಣಿಗೆ ಬೇಡಿಕೆ ಇಟ್ಟಿದ್ದ, ಇದರಿಂದ ವಧುವಿನ ಪೋಷಕರು ಆಘಾತಕ್ಕೊಳಗಾಗಿದ್ದರು. ಬಳಿಕ ವರನನ್ನು ಮರಕ್ಕೆ ಕಟ್ಟಿಹಾಕಿ ಒತ್ತೆಯಾಳನ್ನಾಗಿ ಇರಿಸಿಕೊಂಡ ಘಟನೆ ಉತ್ತರಪ್ರದೇಶದ ಪ್ರತಾಪ್ ಗಢದಲ್ಲಿ ನಡೆದಿದೆ.
ಇದನ್ನೂ ಓದಿ:UCC: ಧರ್ಮಗುರುಗಳು ಮಠದಲ್ಲಿದ್ದು ಪೂಜೆ ನಡೆಸಬೇಕು, ರಾಜಕೀಯವಲ್ಲ; ಚಂದ್ರಶೇಖರ್ ರಾವ್ ಗುಡುಗು
ವರನನ್ನು ಮರಕ್ಕೆ ಕಟ್ಟಿ ಹಾಕಿ, ಒತ್ತೆಯಾಳನ್ನಾಗಿ ಇರಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿವಾಹ ಮಂಟಪದಲ್ಲಿ ವಧು-ವರ ಹಾರ ಬದಲಾಯಿಸಿಕೊಳ್ಳುವ ಸಮಯದಲ್ಲೇ, ವರ ಅಮರ್ ಜಿತ್ ವರ್ಮಾ ವರದಕ್ಷಿಣೆಗಾಗಿ ಬೇಡಿಕೆ ಇಟ್ಟಿದ್ದ.
ಈ ಸಂದರ್ಭದಲ್ಲಿ ಅಮರ್ ಜಿತ್ ಕುಟುಂಬ ಸದಸ್ಯರು, ಗೆಳೆಯರು ವಧುವಿನ ಸಂಬಂಧಿಕರ ಜೊತೆ ಅನುಚಿತವಾಗಿ ನಡೆದುಕೊಂಡಿದ್ದು, ಇದರಿಂದಾಗಿ ಎರಡು ಕುಟುಂಬಗಳ ನಡುವೆ ಹೊಯ್ ಕೈ ನಡೆದಿರುವುದಾಗಿ ವರದಿ ತಿಳಿಸಿದೆ.
ತೀವ್ರ ಆಕ್ರೋಶಗೊಂಡಿದ್ದ ವಧುವಿನ ಸಂಬಂಧಿಕರು ವರನನ್ನು ಹಲವು ಗಂಟೆಗಳ ಕಾಲ ಮರಕ್ಕೆ ಕಟ್ಟಿ ಹಾಕಿದ್ದರು. ಎರಡು ಕುಟುಂಬಗಳ ಹಿರಿಯರು ಸಂಧಾನಕ್ಕಾಗಿ ಮಾತುಕತೆ ನಡೆಸಿದ್ದರೂ ಕೂಡಾ ಅದು ವಿಫಲವಾಗಿತ್ತು.
प्रतापगढ की तस्वीरें देखिए
दूल्हे ने किया शादी से इंकार ,दूल्हे को बंधक बनाकर दी गई तालिबानी सज़ा#pratapgarh pic.twitter.com/OtqTdzNj5A
— Rahul Sisodia (@Sisodia19Rahul) June 15, 2023
ವಿಷಯ ತಿಳಿದ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದರು. ವರನನ್ನು ಬಂಧಮುಕ್ತಗೊಳಿಸಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು. ಪೊಲೀಸ್ ಠಾಣೆಯಲ್ಲೂ ಸಂಧಾನ ವಿಫಲಗೊಂಡಿರುವುದಾಗಿ ಪೊಲೀಸ್ ಠಾಣಾಧಿಕಾರಿ ಮಂಥಾತಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
MUST WATCH
ಹೊಸ ಸೇರ್ಪಡೆ
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್