ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆ : ಅಧಿಕಾರಿಗಳಿಂದ ಪರಿಶೀಲನೆ
Team Udayavani, Feb 14, 2021, 5:00 AM IST
ಬೆಳ್ತಂಗಡಿ: ಬೆಳ್ತಂಗಡಿ ಭಾಗದಿಂದ ಉಪ್ಪಿನಂಗಡಿ, ಪುತ್ತೂರು ಸಂಪರ್ಕಿಸುವ ಗುರುವಾಯನಕೆರೆ- ಉಪ್ಪಿನಂಗಡಿ ಮುಖ್ಯ ರಸ್ತೆಯ ಹಲೇಜಿ ಸಮೀಪ ರಸ್ತೆ ಅಂಚಿನ ತಡೆಗೋಡೆ ಕುಸಿತ ಸ್ಥಳಕ್ಕೆ ಶನಿವಾರ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮುಖ್ಯ ರಸ್ತೆಯ ಹಲೇಜಿ ಸಮೀಪ ಸುಮಾರು 30 ಮೀ.ನಷ್ಟು ತಡೆಗೋಡೆ ಕುಸಿತ ಉಂಟಾಗಿ ಅಪಾಯ ಎದುರಾಗಿರುವುದನ್ನು ಉದಯವಾಣಿ ಸುದಿನದಲ್ಲಿ ಫೆ.13ರಂದು ವರದಿ ಪ್ರಕಟಿಸಲಾಗಿತ್ತು. ಸ್ಪಂದಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಕುಸಿತ ಪ್ರದೇಶದಲ್ಲಿ 5 ಮೀ. ಎತ್ತರ, 30 ಮೀಟರ್ ಉದ್ದ ರಿಟೇನಿಂಗ್ ವಾಲ್ ನಿರ್ಮಾಣದ ಆವಶ್ಯಕತೆ ಇದೆ. ಅಂದಾಜು 30 ಲಕ್ಷ ರೂ. ವೆಚ್ಚವಿರುವುದರಿಂದ ಲೋಕೋ ಪಯೋಗಿ ಇಲಾಖೆಯಿಂದ ತುರ್ತಾಗಿ 10 ಮೀಟರ್ ಉದ್ದ ರಿಟೇನಿಂಗ್ ವಾಲ್ ನಿರ್ಮಾಣಕ್ಕೆ ವರದಿ ನೀಡಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಬೆಳ್ತಂಗಡಿ ವಿಭಾಗ ಎಇಇ ಶಿವಪ್ರಸಾದ್ ತಿಳಿಸಿದ್ದಾರೆ. ಜೆಇ ತೌಸಿಫ್, ಸುಶೃತ್ ಜೈನ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ
Aranthodu ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ