ಕೋಮುದಳ್ಳುರಿಗೆ ಪ್ರಚೋದನೆ: ಎಚ್.ಡಿ.ಕುಮಾರಸ್ವಾಮಿ ಆರೋಪ
Team Udayavani, Nov 21, 2022, 10:30 PM IST
ಕೋಲಾರ: ಕರಾವಳಿ ಪ್ರದೇಶವು ಮೊದಲೇ ಕೋಮುಗಲಭೆಗೆ ಪ್ರಸಿದ್ಧವಾಗಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿಯವರೇ ಆ ವಾತಾವರಣ ನಿರ್ಮಾಣ ಮಾಡಿರುವುದು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.
ಪಂಚರತ್ನ ರಥಯಾತ್ರೆಯಲ್ಲಿರುವ ಅವರು, ಕೋಲಾರ ತಾಲೂಕಿನ ಕೋರಗಂಡಹಳ್ಳಿ ಗ್ರಾಮದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕುಕ್ಕರ್ ಬಾಂಬ್ ಸಿಡಿತದಿಂದ ಯುವಕ ಶೇ.60 ಸುಟ್ಟಗಾಯಗಳಿಂದ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಕೆಎಸ್ಆರ್ಟಿಸಿ ಬಸ್ನಲ್ಲಿ ಕ್ಯಾರಿ ಮಾಡಿ ಆಟೋದಲ್ಲಿ ಹೋಗಿ ಜನನಿಬಿಡ ಪ್ರದೇಶದಲ್ಲಿ ಸಿಡಿಸುವ ಹುನ್ನಾರ ಇರಬಹುದು ಎಂದರು.
ಈ ರೀತಿಯ ಚಟುವಟಿಕೆಗಳಿಂದ ಆ ಭಾಗದ ವಾಣಿಜ್ಯ ವ್ಯವಹಾರ, ಅಭಿವೃದ್ಧಿಗೆ ತೊಂದರೆ ಆಗುತ್ತಿದೆ. ಇಂತಹ ಘಟನೆಗಳು ರಾಜ್ಯದಲ್ಲಿ ಆಗಬಾರದು. ಶಾಂತಿಯುತವಾದ ರಾಜ್ಯದಲ್ಲಿ ಪದೇಪದೆ ಜವಾಬ್ದಾರಿಯುತ ಸ್ಥಾನದಲ್ಲಿರುವವರೇ ಕೋಮುದಳ್ಳುರಿಗೆ ಪ್ರಚೋದನೆ ನೀಡುವುದು, ಸಾರ್ವಜನಿಕ ಪ್ರತಿಕ್ರಿಯೆ ನೀಡಿ ಗಲಭೆ ಸೃಷ್ಟಿ ಮಾಡುತ್ತಿರುವುದು ಖಂಡನೀಯವಾಗಿದೆ ಎಂದು ಹೇಳಿದರು.
ಈ ರೀತಿಯ ಪ್ರಕರಣವನ್ನು ಖಂಡಿಸುತ್ತೇನೆ. ಇದರ ಹಿಂದೆ ಯಾರೇ ಇದ್ದರೂ ಸಮಾಜಘಾತುಕ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಆಗಲೇ ಬೇಕು. ಕೃತ್ಯಕ್ಕೆ ಗಾಯಾಳು ಯುವಕ ಒಬ್ಬನೆ ಇರುವುದಿಲ್ಲ. ಅವರ ಹಿಂದೆ ಯಾರಿದ್ದಾರೆ ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕು. ಅಲ್ಲಿನ ಧಾರ್ಮಿಕ ಗುರುಗಳು ಇಂತಹ ಘಟನೆಗಳಿಗೆ ಪ್ರಚೋದನೆ ನೀಡಬಾರದು. ಗೃಹ ಸಚಿವರ ವೈಫಲ್ಯ ಎನ್ನುವುದಕ್ಕಿಂತ ಗುಪ್ತಚರ ಇಲಾಖೆ ಕೆಲಸವೂ ಮುಖ್ಯ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!