ಹಣಕಾಸು ಇಲಾಖೆಗೆ ತುರ್ತು ಚಿಕಿತ್ಸೆ ಅಗತ್ಯ; ಎಚ್‌. ವಿಶ್ವನಾಥ್‌

ಸಾವಿರಾರು ಕೋಟಿ ರೂ. ಸಾಲ ಇದ್ದು, ಆದಾಯ ಖೋತಾ ಆಗುತ್ತಿದೆ

Team Udayavani, Mar 16, 2022, 6:30 AM IST

ಹಣಕಾಸು ಇಲಾಖೆಗೆ ತುರ್ತು ಚಿಕಿತ್ಸೆ ಅಗತ್ಯ; ಎಚ್‌. ವಿಶ್ವನಾಥ್‌

ಬೆಂಗಳೂರು: ಹಣಕಾಸು ಇಲಾಖೆ ಮೇಲೆ ಮಂಗಳವಾರ ಮುಗಿಬಿದ್ದ ಮೇಲ್ಮನೆ ಸದಸ್ಯರು, ಈ ಇಲಾಖೆಗೆ ತುರ್ತು ಚಿಕಿತ್ಸೆ ಆವಶ್ಯಕತೆಯಿದೆ ಎಂದು ಅಭಿಪ್ರಾಯಪಟ್ಟರು.

ಬಜೆಟ್‌ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಬಿಜೆಪಿಯ ಎಚ್‌. ವಿಶ್ವನಾಥ್‌, ಹಣಕಾಸು ಇಲಾಖೆಯಲ್ಲಿ ಹಲವು ವರ್ಷಗಳಿಂದ ಕೆಲವು ಅಧಿಕಾರಿಗಳು ಠಿಕಾಣಿ ಹೂಡಿದ್ದಾರೆ. ಹೀಗೆ ಯಾವೊಬ್ಬ ವ್ಯಕ್ತಿ ಒಂದೇ ಜಾಗದಲ್ಲಿ ಉಳಿದುಕೊಂಡಾಗ, ಅದಕ್ಕೆ ಆ ವ್ಯಕ್ತಿಯೇ ಮಾಲಕನಾಗಿಬಿಡುವ ಅಪಾಯ ಇರುತ್ತದೆ. ಸಾವಿರಾರು ಕೋಟಿ ರೂ. ಸಾಲ ಇದ್ದು, ಆದಾಯ ಖೋತಾ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಇಡೀ ಇಲಾಖೆಯ ಆಮೂಲಾಗ್ರ ಬದಲಾವಣೆ ಅಗತ್ಯವಿದೆ ಎಂದು ಹೇಳಿದರು.

ಹಿಂದಿನ ವ್ಯವಸ್ಥೆಯೇ ಇರಲಿ
ಈ ಹಿಂದೆಲ್ಲ ಹಣಕಾಸು ಇಲಾಖೆಯನ್ನು ಬೇರೊಬ್ಬ ಸಚಿವರಿಗೆ ನೀಡಲಾಗುತ್ತಿತ್ತು. ಆ ಸಚಿವರೇ ಬಜೆಟ್‌ ಮಂಡನೆ ಕೂಡ ಮಾಡುತ್ತಿದ್ದರು. ಕಳೆದೆರಡು ದಶಕಗಳಲ್ಲಿ ಈ ಪದ್ಧತಿ ಬದಲಾಗಿದ್ದು, ಮುಖ್ಯಮಂತ್ರಿಗಳ ಬಳಿಯೇ ಈ ಖಾತೆ ಇರುತ್ತದೆ. ಹಿಂದಿನ ವ್ಯವಸ್ಥೆಯಂತೆಯೇ ಸಚಿವರಿಗೆ ನೀಡಬೇಕು. ಹಾಗಂತ, ಸಿಎಂ ಆದವರಿಗೆ ಇದನ್ನು ನಿಭಾಯಿಸುವ ಸಾಮರ್ಥ್ಯ ಇಲ್ಲ ಎಂದಲ್ಲ. ಈಗಾಗಲೇ ಆಗಿ ಹೋದವರೂ ಸೇರಿ ಎಲ್ಲ ಮುಖ್ಯಮಂತ್ರಿಗಳೂ ಸಮರ್ಥ ರಾಗಿದ್ದಾರೆ. ಆದರೆ, ಅದನ್ನು ನಿಭಾಯಿಸಲು ಅವರಲ್ಲಿ ಸಮಯ ಎಲ್ಲಿದೆ ಎಂದು ವಿಶ್ವನಾಥ್‌ ಕೇಳಿದರು.

ಖಾತೆ ಹೊಂದಿರದ ಪ್ರಧಾನಿ ಮೋದಿ ಮಾದರಿ
ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರು ಮಾದರಿ ಎಂದ ಅವರು, ಗುಜರಾತ್‌ ಮುಖ್ಯಮಂತ್ರಿ ಆಗಿದ್ದಾಗಲೂ ಮೋದಿ ಅವರು ಯಾವುದೇ ಖಾತೆ ಹೊಂದಿರಲಿಲ್ಲ. ಅದೇ ರೀತಿ, ಪ್ರಧಾನಿಯಾದ ಮೇಲೂ ಯಾವ ಖಾತೆಯೂ ಅವರ ಬಳಿ ಇಲ್ಲ ಎಂದರು.

ಆಡಳಿತದಲ್ಲಿ ವರ್ಗಾವಣೆ ದಂಧೆ: ಆರೋಪ
ಆಡಳಿತದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಹೇಳಿದ ಎಚ್‌. ವಿಶ್ವನಾಥ್‌, ಈ ಹಿನ್ನೆಲೆಯಲ್ಲಿ ಆಡಳಿತಕ್ಕೆ ಸಂಬಂಧಿಸಿದ ಚರ್ಚೆಗಾಗಿಯೇ ಕನಿಷ್ಠ ಒಂದು ವಾರ ವಿಶೇಷ ಅಧಿವೇಶನ ಕರೆಯಬೇಕೆಂದು ಆಗ್ರಹಿಸಿದರು. ಆಡಳಿತವೆಂದರೆ ಅಧಿಕಾರಿಗಳಿಂದ, ಅಧಿಕಾರಿಗಳಿಗಾಗಿ ಮತ್ತು ಅಧಿಕಾರಿಗಳಿಗೋಸ್ಕರ ಎಂಬಂತಾಗಿದೆ. ಶೇ. 40 ಅಧಿಕಾರಿಗಳು ಖಾಲಿ ಇದ್ದಾರೆ. ಇನ್ನು ಕೆಲವರು 2-3 ಹುದ್ದೆಗಳನ್ನು ಅನುಭವಿಸುತ್ತಿದ್ದಾರೆ. ಸಾಮಾನ್ಯವಾಗಿ ಆಡಳಿತ ಬಲದ ಮೇಲೆ ಅಭಿವೃದ್ಧಿಯ ಪಥ ಸಾಗುತ್ತದೆ. ಬಲವೇ ಇಲ್ಲವೆಂದಾದರೆ ಅಭಿವೃದ್ಧಿ ಹೇಗೆ? ಆದ್ದರಿಂದ ಆಡಳಿತದ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ ಕರೆಯಬೇಕು. ಅಲ್ಲಿ ಬರುವ ಅಭಿಪ್ರಾಯಗಳನ್ನು ಆಧರಿಸಿ, ಆಡಳಿತವನ್ನು ಬಿಗಿಗೊಳಿಸಬೇಕೆಂದು ಮುಖ್ಯಮಂತ್ರಿಗೆ ಸಲಹೆ ಮಾಡಿದರು.

ಹಣಕಾಸು ಇಲಾಖೆಯೇ ಸಿಎಂ?
ಕಾಂಗ್ರೆಸ್‌ನ ಮಂಜುನಾಥ್‌ ಭಂಡಾರಿ ಮಾತನಾಡಿ, ಹಣಕಾಸು ಇಲಾಖೆಯ ಧೋರಣೆ ನೋಡಿದರೆ, ಈ ಸರಕಾರವನ್ನು ನಡೆಸುತ್ತಿದೆಯೇ ಎಂಬ ಅನುಮಾನ ಬರುತ್ತಿದೆ. ಒಂದು ವೇಳೆ ಹೌದಾದರೆ, ಮುಖ್ಯಮಂತ್ರಿಗಳು ಯಾಕೆ ? ಶಾಸಕರು, ಪರಿಷತ್ತಿನ ಸದಸ್ಯರು ಯಾಕೆ? ಇದು ಜನಪ್ರತಿನಿಧಿಗಳಿಗೆ ಆದ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದರು. ಗ್ರಾ.ಪಂ. ಸದಸ್ಯರ ಗೌರವಧನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸ್ವತಃ ಮುಖ್ಯಮಂತ್ರಿಗಳು ಕಳುಹಿಸಿದ ಪ್ರಸ್ತಾವನೆಯನ್ನೇ ಹಣಕಾಸು ಇಲಾಖೆ ತಿರಸ್ಕರಿಸುತ್ತದೆ. ಮುಖ್ಯಮಂತ್ರಿಗಳ ಸೂಚನೆಗೇ ಬೆಲೆ ಇಲ್ಲ. ಅವರನ್ನು ಕೇಳಿಯೇ ಎಲ್ಲವನ್ನೂ ಮಾಡುವುದಾದರೆ ನಾವೇಕೆ? ಹಲವು ವರ್ಷಗಳಿಂದ ಕೆಲವು ಅಧಿಕಾರಿಗಳು ಹಣಕಾಸು ಇಲಾಖೆಯಲ್ಲಿಯೇ ಬೀಡುಬಿಟ್ಟಿದ್ದಾರೆ.

ಮುಖ್ಯಮಂತ್ರಿಗಳು ಹಣಕಾಸು ಇಲಾಖೆಯನ್ನು ಅಧಿಕಾರಿಗಳ ಕೈಗಿಟ್ಟು ಕುಳಿತಿದ್ದಾರೆ. ಆದ್ದರಿಂದ ಉತ್ತಮವಾಗಿ ನಿರ್ವಹಣೆ ಮಾಡುವ ಸಾಮರ್ಥ್ಯ ಇರುವ ಮಂತ್ರಿಗಳಿಗೆ ವಹಿಸಬೇಕೆಂದು ಅವರು ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.