ಸೆಲೂನ್ಗಳಿಗೆ ಮಂಗಳವಾರ ಬದಲು ರವಿವಾರ ರಜೆ
Team Udayavani, May 22, 2020, 10:41 PM IST
ಉಡುಪಿ: ಸರಕಾರ ರವಿವಾರ ಕಟ್ಟುನಿಟ್ಟಿನ ಲಾಕ್ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸೆಲೂನ್ಗಳನ್ನು ಬಂದ್ ಮಾಡಬೇಕಾಗಿರುವುದರಿಂದ ಮುಂದೆ ಬರುವ ಮಂಗಳವಾರ ಸೆಲೂನ್ಗಳನ್ನು ತೆರೆದು ಕಾರ್ಯ ನಿರ್ವಹಿಸಬಹುದು ಎಂದು ಉಡುಪಿ ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಭಾಸ್ಕರ ಭಂಡಾರಿ ಗುಡ್ಡೆಯಂಗಡಿ ತಿಳಿಸಿದ್ದಾರೆ.
ಎರಡು ತಿಂಗಳ ಕಾಲ ಲಾಕ್ಡೌನ್ನಿಂದಾಗಿ ಸೆಲೂನ್ಗಳು ಬಂದ್ ಆಗಿ ಪುನಃ ಆರಂಭವಾದ ಎರಡು ದಿನಗಳಲ್ಲಿ ಸರಕಾರ ರವಿವಾರ ಕಟ್ಟುನಿಟ್ಟಿನ ಲಾಕ್ಡೌನ್ ಘೋಷಿಸಿರುವುದರಿಂದ ಕ್ಷೌರಿಕ ಬಂಧುಗಳಿಗೆ ಆರ್ಥಿಕ ತೊಂದರೆಯಾಗ ಬಹುದು ಎನ್ನುವ ದೃಷ್ಟಿಯಿಂದ ಜಿಲ್ಲೆಯ ಎಲ್ಲ ತಾಲೂಕಿನ ಸಮಾಜದ ಅಧ್ಯಕ್ಷರೊಂದಿಗೆ ಸಭೆ ನಡೆಸಿ ತೀರ್ಮಾನವನ್ನು ಕೈಗೊಂಡಿರುತ್ತೇವೆ. ಮುಂದಿನ ದಿನಗಳಲ್ಲಿ ಸೆಲೂನ್ಗಳನ್ನು ಮಂಗಳವಾರ ತೆರೆದು ರವಿವಾರ ಕಡ್ಡಾಯ ರಜೆ ಮಾಡಬೇಕೆಂಬ ಚಿಂತನೆ ಇದೆ ಎಂದು ಅವರು ತಿಳಿಸಿದ್ದಾರೆ.
ಪ್ರಧಾನ ಕಾರ್ಯದರ್ಶಿ ಸದಾಶಿವ ಬಂಗೇರ ಕುರ್ಕಾಲು, ಕೋಶಾಧಿಕಾರಿ ಶೇಖರ ಸಾಲಿಯಾನ್ ಆದಿ ಉಡುಪಿ, ರಾಜ್ಯ ಪ್ರತಿನಿಧಿ ವಿಶ್ವನಾಥ ಭಂಡಾರಿ ನಿಂಜೂರು, ಗೌರವಾಧ್ಯಕ್ಷ ಬನ್ನಂಜೆ ಗೋವಿಂದ ಭಂಡಾರಿ,ಸವಿತಾ ಸಹಕಾರಿಯ ಅಧ್ಯಕ್ಷ ನವೀನ್ಚಂದ್ರ ಭಂಡಾರಿ ಹಾಗೂ ಜಿಲ್ಲೆಯ ಏಳು ತಾಲೂಕಿನ ಸವಿತಾ ಸಮಾಜದ ಅಧ್ಯಕ್ಷರುಗಳು ಚರ್ಚಿಸಿ ತೀರ್ಮಾನ ತೆಗೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ