ಧ್ಯಾನಚಂದ್ ಪ್ರಶಸ್ತಿ ಪುರಸ್ಕೃತ ಫುಟ್ಬಾಲ್ ಆಟಗಾರ ‘ಹಕೀಬ್ ಸಾಬ್’ ನಿಧನ


Team Udayavani, Aug 22, 2021, 6:26 PM IST

ಧ್ಯಾನಚಂದ್ ಪ್ರಶಸ್ತಿ ಪುರಸ್ಕೃತ ಫುಟ್ಬಾಲ್ ಆಟಗಾರ ‘ಹಕೀಬ್ ಸಾಬ್’ ನಿಧನ

ಕಲಬುರಗಿ : ಭಾರತೀಯ ಫುಟ್ಬಾಲ್ ತಂಡದ ಮಾಜಿ ಆಟಗಾರ, ತರಬೇತುದಾರ, ಧ್ಯಾನಚಂದ್ ಪ್ರಶಸ್ತಿ ಪುರಸ್ಕೃತ ಸೈಯದ್ ಸಾಹೀದ್ ಹಕೀಮ್ (82) ಇನ್ನಿಲ್ಲ. ನಗರದ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

50ರ ದಶಕದಲ್ಲಿ ಫುಟ್ಬಾಲ್ ತಂಡದ ಖ್ಯಾತ ತರಬೇತುದಾರಾಗಿದ್ದ ಸೈಯದ್ ಅಬ್ದುಲ್ ರಹೀಮ್ ಅವರ ಪುತ್ರ ಸಾಹೀದ್ ಹಕೀಮ್. 1960ರ ರೋಮ್ ಒಲಿಂಪಿಕ್ಸ್ ನಲ್ಲಿ ಭಾರತದ ಕೋಚ್ ತಂದೆ ಸೈಯದ್ ಅಬ್ದುಲ್ ರಹೀಮ್ ಅವರು ಆಗಿದ್ದರೆ, ಸಾಹೀದ್ ಹಕೀಮ್ ತಂಡದ ಸದಸ್ಯರಾಗಿದ್ದರು. ಸಾಹೀದ್ ಹಕೀಮ್ ಅವರು “ಹಕೀಮ್ ಸಾಬ್” ಎಂದೇ ಹೆಸರುವಾಸಿಯಾಗಿದ್ದಾರೆ.

ಮೂಲತಃ ಹೈದರಾಬಾದ್ ನವರು ಆಗಿವರು ಇವರು, 1939ರಲ್ಲಿ ಹೈದರಾಬಾದ್‍ನಲ್ಲೇ ಜನಿಸಿದ್ದರು. ಕಳೆದ ಮೂರೂವರೆ ವರ್ಷಗಳ ಹಿಂದೆಯಷ್ಟೇ ಕಲಬುರಗಿಗೆ ಬಂದು ನೆಲೆಸಿದ್ದರು. ಪತ್ನಿ ಸಾದಿಯಾ ಸೈಯದಾ, ಇಬ್ಬರು ಪುತ್ರಿಯರೊಂದಿಗೆ ಇಲ್ಲಿನ ಪಿ ಅಂಡ್ ಟಿ ಕಾಲೋನಿಯಲ್ಲಿ‌ ವಾಸವಾಗಿದ್ದರು.

ಕಳೆದ ವಾರ ಹೈದರಾಬಾದ್‍ಗೆ ಅವರು ತೆರಳಿದ್ದರು. ಅಲ್ಲಿದ್ದಾಗಲೇ ಎದೆನೋವು ಕಾಣಿಸಿಕೊಂಡಿತ್ತು. ಅವರು ಅದರ ಬಗ್ಗೆ ಅಷ್ಟು ಲಕ್ಷ್ಯ ಕೊಟ್ಟಿರಲಿಲ್ಲ. ಹೈದರಾಬಾದ್ ನಿಂದ ವಾಪಸ್ ಬಂದ ಮೇಲೆ ಇಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ತಾಪಸಣೆ ಮಾಡಿ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಬೆಳಗ್ಗೆ ಅವರು ವಿಧಿವಶರಾದರು‌ ಎಂದು ಪತ್ನಿ ಸಾದಿಯಾ ಸೈಯದಾ ಅವರು ಕಣ್ಣೀರು ಹಾಕಿದರು.

ತಂದೆ-ತಾಯಿ ಸಮಾಧಿಗಳು ಹೈದರಾಬಾದ್‍ನಲ್ಲಿ ಇರುವುದರಿಂದ ಇವರ ಅಂತ್ಯಸಂಸ್ಕಾರವೂ ಅಲ್ಲಿಯೇ ನಡೆಯಲಿದೆ. ಈಗಾಗಲೇ ಇವರ ಪಾರ್ಥಿವ ಶರೀರವನ್ನು ಹೈದರಾಬಾದ್‍ಗೆ ಸ್ಥಳಾಂತರಿಸಲಾಗಿದೆ ಎಂದು ಅವರು ‘ಉದಯವಾಣಿ’ಗೆ ಮಾಹಿತಿ ನೀಡಿದರು.

80ರ ಇಳಿಯಸ್ಸಿನಲ್ಲೂ ಅವರಿಗೂ ಫುಟ್ಬಾಲ್ ಬಗ್ಗೆ ಅತೀಯ ಆಸಕ್ತಿ ಇತ್ತು. ಇಲ್ಲಿನ ಆಟಗಾರರಿಗೆ ಅವರಿಗೆ ತರಬೇತಿಯನ್ನೂ ನೀಡುತ್ತಿದ್ದರು. ಸಿಎಎ ವಿರೋಧಿ ಮತ್ತು ರೈತರ ಪರ ಹೋರಾಟದಲ್ಲೂ ಅವರು ಭಾಗಿಯಾಗಿದ್ದರು. ಕಳೆದ ವರ್ಷ ಕೋವಿಡ್ ನಿಂದ ಅವರು ಕೊರೊನಾದಿಂದ ಗುಣಮುಖರಾಗಿದ್ದರು.

ಹಕೀಮ್ ಅವರು ಐದು ದಶಕಗಳ ಕಾಲ ಭಾರತೀಯ ಫುಟ್ಬಾಲ್‍ನ ಭಾಗವಾಗಿದ್ದರು. ಭಾರತೀಯ ಫುಟ್ಬಾಲ್ ತಂಡದ ಅಭಿವೃದ್ಧಿಗೆ ಆಟಗಾರರರಾಗಿ, ತರಬೇತುದಾರರಾಗಿ ಅವರು ನೀಡಿದ ಕೊಡುಗೆ ಸ್ಮರಣೀಯವಾಗಿದೆ. ಇವರ ಜೀವಮಾನದ ಸಾಧನೆಗೆ 2017ರಲ್ಲಿ ಧ್ಯಾನಚಂದ್ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಧ್ಯಾನಚಂದ್ ಪ್ರಶಸ್ತಿಗೆ ಭಾಜನರಾದ ಎರಡನೇ ಫುಟ್ಬಾಲ್ ಆಟಗಾರರ ಎಂಬ ಕೀರ್ತಿ ಇವರಾಗಿತ್ತು.

ಭಾರತೀಯ ವಾಯುಸೇನೆಯಲ್ಲಿ ಸ್ಕ್ವಾಡ್ರನ್ ಲೀಡರ್ ಆಗಿಯೂ ಇವರು ಸೇವೆ ಸಲ್ಲಿಸಿದ್ದರು. ಭಾರತೀಯ ಕ್ರೀಡಾ ಪ್ರಾಧಿಕಾರದ ಪ್ರಾದೇಶಿಕ ನಿರ್ದೇಶಕರು ಹಾಗೂ 2017ರ 17 ವಯೋಮಿತಿ ಫಿಫಾ ವಿಶ್ವಕಪ್ ಟೂರ್ನಿಯಲ್ಲಿ ಪ್ರಾಜೆಕ್ಟ್ ವ್ಯವಾಸ್ಥಾಪಕರಾಗಿಯೂ ಇವರು ಕಾರ್ಯನಿರ್ವಹಿಸಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.