Video: ಈಗ್ಯಾಕೆ…ಬಂದಿದ್ದು?ಪ್ರವಾಹ ಪೀಡಿತ ಸ್ಥಳಕ್ಕೆ ಬಂದ ಶಾಸಕನ ಕಪಾಳಕ್ಕೆ ಬಾರಿಸಿದ ಮಹಿಳೆ
ಕಪಾಳಮೋಕ್ಷ ಮಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Team Udayavani, Jul 13, 2023, 10:09 AM IST
ಚಂಡೀಗಢ: ಭಾರೀ ಮಳೆ, ಪ್ರವಾಹದ ಸ್ಥಿತಿಗತಿಯನ್ನು ವೀಕ್ಷಿಸಲು ತೆರಳಿದ್ದ ಜನನಾಯಕ್ ಜನತಾ ಪಕ್ಷ(JJP)ದ ಶಾಸಕ ಈಶ್ವರ್ ಸಿಂಗ್ ಅವರಿಗೆ ಆಕ್ರೋಶಗೊಂಡ ಮಹಿಳೆಯೊಬ್ಬರು ಸಾರ್ವಜನಿಕವಾಗಿಯೇ ಕಪಾಳಮೋಕ್ಷ ಮಾಡಿರುವ ಘಟನೆ ಹರ್ಯಾಣದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ:Sagara: ವಿದ್ಯಾರ್ಥಿನಿ ಆತ್ಮಹತ್ಯೆ; ಪ್ರಚೋದನೆ ನೀಡಿದ ಆರೋಪಿ ಬಂಧನ
ಹರ್ಯಾಣದ ಘುಲಾ ಪ್ರದೇಶದಲ್ಲಿ ಘಾಗ್ಗರ್ ನದಿ ಉಕ್ಕಿ ಹರಿದ ಪರಿಣಾಮ ಆ ಪ್ರದೇಶವೆಲ್ಲಾ ಪ್ರವಾಹದ ನೀರಿನಿಂದ ತುಂಬಿ ಹೋಗಿತ್ತು. ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದಿದ್ದ ಶಾಸಕ ಈಶ್ವರ್ ಸಿಂಗ್ ಅವರನ್ನು ತರಾಟೆಗೆ ತೆಗೆದುಕೊಂಡ ಮಹಿಳೆ, ಈಗ ಯಾಕೆ ಬಂದಿದ್ದೀರಿ? ಎಂದು ಪ್ರಶ್ನಿಸಿ ಶಾಸಕರಿಗೆ ಕಪಾಳಮೋಕ್ಷ ಮಾಡಿದ್ದು, ಆ ಕೂಡಲೇ ಪೊಲೀಸ್ ಅಧಿಕಾರಿ ಆಕೆಯನ್ನು ಹಿಂದಕ್ಕೆ ತಳ್ಳಿರುವುದು ವಿಡಿಯೋದಲ್ಲಿ ದಾಖಲಾಗಿದೆ.
ಶಾಸಕರ ಸುತ್ತಮುತ್ತ ಜನರು ಗುಂಪುಗೂಡಿದ್ದು, ಈ ಸಂದರ್ಭದಲ್ಲಿ ಆಕ್ರೋಶಗೊಂಡ ಮಹಿಳೆ ಶಾಸಕರಿಗೆ ಕಪಾಳಮೋಕ್ಷ ಮಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಘಟನೆಗೆ ಸಂಬಂಧಿಸಿದಂತೆ ಆಕೆ ತನ್ನ ಮೇಲೆ ಯಾವುದೇ ಕ್ರಮ ತೆಗೆದುಕೊಳ್ಳಬೇಡಿ ಎಂದು ಮನವಿ ಮಾಡಿಕೊಂಡಿಲ್ಲ. ಆದರೂ ಆಕೆ ಕಪಾಳಮೋಕ್ಷ ಮಾಡಿರುವ ಬಗ್ಗೆ ಮಹಿಳೆ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳಬೇಡಿ ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಸಿಂಗ್ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ.
#WATCH | Haryana: In a viral video, a flood victim can be seen slapping JJP (Jannayak Janta Party) MLA Ishwar Singh in Guhla as he visited the flood affected areas
“Why have you come now?”, asks the flood victim pic.twitter.com/NVQmdjYFb0
— ANI (@ANI) July 12, 2023
ಜೆಜೆಪಿ ಹರ್ಯಾಣದ ಆಡಳಿತರೂಢ ಬಿಜೆಪಿ ನೇತೃತ್ವ ಸರ್ಕಾರದ ಮೈತ್ರಿ ಪಕ್ಷವಾಗಿದೆ. ಭಾರೀ ಮಳೆಯಿಂದಾಗಿ ಪಂಜಾಬ್ ಮತ್ತು ಹರ್ಯಾಣದದಲ್ಲಿ ಹಲವು ಗ್ರಾಮಗಳು ಪ್ರವಾಹದಿಂದ ಜನರು ಪರದಾಡುವಂತಾಗಿದೆ. ಈ ನಿಟ್ಟಿನಲ್ಲಿ ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ