ಮುಂದಿನ ವಿಧಾನಸಭೆ ಚುನಾವಣೆ ವೇಳೆ ಪಕ್ಷವನ್ನು ಬಲಿಷ್ಠಗೊಳಿಸಿಯೇ ತೀರುತ್ತೇನೆ: ದೇವೇಗೌಡ


Team Udayavani, Feb 11, 2020, 6:31 PM IST

hdd

ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್‌ ಕಥೆ ಮುಗಿಯಿತು, ಜೆಡಿಎಸ್‌ ಮುಗಿಸಬಹುದು ಎಂದು ಯಾರಾದರೂ ಅಂದುಕೊಂಡಿದ್ದರೆ ಅದು ಭ್ರಮೆ. ಮುಂದಿನ ವಿಧಾನಸಭೆ ಚುನಾವಣೆ ವೇಳೆಗೆ ಪಕ್ಷ ಮತ್ತೆ ಬಲಿಷ್ಠಗೊಳಿಸಿಯೇ ತೀರುತ್ತೇನೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ತಿಳಿಸಿದ್ದಾರೆ.

ಜೆಡಿಎಸ್‌ ರಾಷ್ಟ್ರೀಯ ಕಾರ್ಯಕಾರಿಣಿ ಅಂಗವಾಗಿ ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಮಹಾಧಿವೇಶನದಲ್ಲಿ ಮಾತನಾಡಿದ ಅವರು, ನಮ್ಮ ಕಾರ್ಯಕರ್ತರು, ಮುಖಂಡರು ದೆಹಲಿಯಲ್ಲಿ ಕೇಜ್ರಿàವಾಲ್‌ ನೋಡಿ ಪಕ್ಷ ಕಟ್ಟುವ ಸಂಕಲ್ಪ ತೊಡಬೇಕು ಎಂದು ಕರೆ ನೀಡಿದರು.

ದೆಹಲಿಯಲ್ಲಿ ಯಾವುದೇ ಜಾತಿ ಕೆಲಸ ಮಾಡಿಲ್ಲ. ಜನರು ಪ್ರಾದೇಶಿಕ ಪಕ್ಷಕ್ಕೆ ಮಣೆ ಹಾಕಿದ್ದಾರೆ. ಬಿಜೆಪಿ ಏನೆಲ್ಲಾ ಮಾಡಿದರೂ ದೆಹಲಿ ವಶಕ್ಕೆ ಪಡೆಯಲು ಸಾಧ್ಯವಾಗಿಲ್ಲ ಎಂದು ಹೇಳಿದರು.

ಜನತಾಪರಿವಾರದಲ್ಲಿದ್ದು ಬೇರೆ ಬೇರೆ ಪಕ್ಷಗಳಲ್ಲಿ ಹಂಚಿ ಹೋಗಿರುವವರು ಹಾಗೂ ತಟಸ್ಥರಾಗಿರುವವರ‌ನ್ನು ಮತ್ತೆ ಪಕ್ಷಕ್ಕೆ ಕರೆತರುತ್ತೇನೆ. ಕೇರಳದಲ್ಲಿ ಈಗಾಗಲೇ ಆ ಪ್ರಯತ್ನಕ್ಕೆ ಚಾಲನೆ ಸಿಕ್ಕಿದೆ. ಕರ್ನಾಟಕದಲ್ಲೂ ನಾನೇ ಎಲ್ಲರ ಮನೆ ಬಾಗಿಲಿಗೆ ಹೋಗಿ ಕರೆತರುತ್ತೇನೆ. ಕಾಂಗ್ರೆಸ್‌ ಹಾಗೂ ಬಿಜೆಪಿ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. 2023 ಕ್ಕೆ ಚುನಾವಣೆ ಬರುತ್ತೋ ಅದಕ್ಕೆ ಮೊದಲು ಬರುತ್ತೋ ನನ್ನ ಪಕ್ಷವನ್ನು ಸಜ್ಜುಗೊಳಿಸುವುದು ನನ್ನ ಮೊದಲ ಆದ್ಯತೆ ಎಂದು ತಿಳಿಸಿದರು.

ನಾನು ಯಾರ ಮುಲಾಜಿಗೂ ಒಳಗಾಗುವುದಿಲ್ಲ. ಹಿಂದೆ ಮಾಡಿದ ತಪ್ಪು ಮತ್ತೆ ಮಾಡುವುದಿಲ್ಲ. 224 ಕ್ಷೇತ್ರಗಳಲ್ಲಿ ಪಕ್ಷಕ್ಕಾಗಿ ಶ್ರಮಿಸುವ ನೈಜ ಕಾರ್ಯಕರ್ತರು, ಮುಖಂಡರನ್ನು ಗುರುತಿಸಿ ನಾಯಕತ್ವ ನೀಡುತ್ತೇನೆ. ಅವರಿಗೆ ಅವಕಾಶ ಕೊಡುತ್ತೇನೆ ಎಂದು ಹೇಳಿದರು.

1989 ರಲ್ಲಿ ಪಕ್ಷದಿಂದ ನನ್ನನ್ನು ಹೊರಹಾಕಲಾಗಿತ್ತು. ನನ್ನ ಜತೆಗಿದ್ದ ಎಲ್ಲ ಸ್ನೇಹಿತರೂ ಹೊರಟುಹೋಗಿದ್ದರು. 1994 ರಲ್ಲಿ ಮತ್ತೆ ಪಕ್ಷದ ರಾಜ್ಯಾಧ್ಯಕ್ಷನಾಗಿ 115 ಸೀಟುಗಳೊಂದಿಗೆ ಪಕ್ಷವನ್ನು ಅಧಿಕಾರಕ್ಕೆ ತಂದೆ. ಆಗ ಯಾರೂ ಪಕ್ಷ ಕಟ್ಟಲು ನನಗೆ ನಯಾಪೈಸೆ ಕೊಡಲಿಲ್ಲ, ಸಿಂದ್ಯಾ, ಜೀವ್‌ರಾಜ್‌ ಆಳ್ವಾ, ಜಾಲಪ್ಪ ಅವರು ತಲಾ ಹತ್ತು ಲಕ್ಷ ರೂ. ನೀಡಿದ್ದರು ಅಷ್ಟೇ. ಆದರೆ ಪಕ್ಷ ಕಟ್ಟಿ ಮತ್ತೆ ಅಧಿಕಾರಕ್ಕೆ ತಂದು ಜನರ ಆಶೀರ್ವಾದದಿಂದ ಪ್ರಧಾನಿಯಾಗಿಯೂ ಕೆಲಸ ಮಾಡಿದೆ. ನನಗೆ ಸೋಲು-ಗೆಲುವು ಹೊಸದಲ್ಲ, ಪಕ್ಷ ಕಟ್ಟುವುದು ಹೊಸದಲ್ಲ ಎಂದು ತಿಳಿಸಿದರು.

ಪಕ್ಷದ ಕಾರ್ಯಕರ್ತರು ಮುಖಂಡರು ಧೃತಿಗೆಡುವ ಅಗತ್ಯವಿಲ್ಲ. ನಾನು ನಿಮ್ಮೊಂದಿಗಿದ್ದೇನೆ. ಪಕ್ಷದ ಕಾರ್ಯಕರ್ತರಿಗಾಗಿ ನಾನು ಎಲ್ಲವನ್ನೂ ತ್ಯಾಗ ಮಾಡಲು ಸಿದ್ಧ ಎಂದು ಹೇಳಿದರು.

ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್‌ ಮಾತನಾಡಿ, ಜೆಡಿಎಸ್‌ ಪಕ್ಷವು ಎಚ್‌.ಡಿ.ದೇವೇಗೌಡರ ಶ್ರಮದಿಂದ ಉಳಿದಿದೆ. 87 ನೇ ವಯಸ್ಸಿನಲ್ಲಿಯೂ ಪಕ್ಷ ಕಟ್ಟಲು ಬೀದಿಯಲ್ಲಿ ನಿಂತು ಹೋರಾಟ ಮಾಡುತ್ತಿದ್ದಾರೆ. ಅವರು ನಮ್ಮ ಪಕ್ಷದ ಶಕ್ತಿ. ಅವರ ಮಾರ್ಗದರ್ಶನದಲ್ಲಿ ಮತ್ತೆ ಪಕ್ಷ ಅಧಿಕಾರಕ್ಕೆ ತರಬೇಕು ಎಂದು ತಿಳಿಸಿದರು.

ಜೆಡಿಎಸ್‌ ಕೇವಲ ಕರ್ನಾಟಕಕ್ಕೆ ಸೀಮಿತವಲ್ಲ. ಕೇರಳ, ಮಹಾರಾಷ್ಟ್ರ, ಗುಜರಾತ್‌, ಹರಿಯಾಣ, ಉತ್ತರಪ್ರದೇಶ ಸೇರಿ ದೇಶಾದ್ಯಂತ ಜೆಡಿಎಸ್‌ಗೆ ಶಕ್ತಿಯಿದೆ. ಹದಿನಾಲ್ಕು ತಿಂಗಳು ಕುಮಾರಸ್ವಾಮಿ ನೇತೃತ್ವದ ಸರ್ಕಾರ ನೀಡಿರುವ ಸಾಧನೆ ಕಡಿಮೆಯೇನಲ್ಲ ಎಂದು ಹೇಳಿದರು.

ಮಾಜಿ ಸಚಿವ ಬಸವರಾಜ ಹೊರಟ್ಟಿ ಮಾತನಾಡಿ,ಜನತಾಪರಿವಾರದಲ್ಲಿದ್ದು ರಾಜಕೀಯವಾಗಿ ತಟಸ್ಥರಾಗಿರುವವರನ್ನು ಮತ್ತೆ ಪಕ್ಷಕ್ಕೆ ಕರೆತರಬೇಕು. ಚುನಾವಣೆ ಬಂದಾಗ ಮಾತ್ರ ಪಕ್ಷ ಸಂಘಟನೆ ಮಾಡದೆ ನಿರಂತರವಾಗಿ ತಾಲೂಕು, ಜಿಲ್ಲಾ ಮತ್ತು ರಾಜ್ಯ ಘಟಕ ಪಕ್ಷ ಸಂಘಟನೆಯಲ್ಲಿ ತೊಡಗಬೇಕು ಎಂದು ಸಲಹೆ ನೀಡಿದರು.

ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್‌.ವಿ.ದತ್ತಾ ಮಾತನಾಡಿ, ದೆಹಲಿಯಲ್ಲಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್‌ಗೆ ಸೆಡ್ಡು ಹೊಡೆದು ಆಮ್‌ ಆದ್ಮಿ ಪಾರ್ಟಿ ಮೂರನೇ ಬಾರಿಗೆ ಗೆಲುವು ಸಾಧಿಸಿರುವುದು ಜೆಡಿಎಸ್‌ಗೆ ಸ್ಪೂರ್ತಿ. ಪ್ರಾದೇಶಿಕ ಪಕ್ಷಗಳಿಗೆ ಜನ ಮನ್ನಣೆ ಇದೆ ಎಂಬುದು ಇದರಿಂದ ಸಾಬೀತಾಗಿದೆ. ರಾಜ್ಯದಲ್ಲಿಯೂ ಜೆಡಿಎಸ್‌ಗೆ ಭವಿಷ್ಯವಿದೆ ಎಂದು ಹೇಳಿದರು.

ಕೇರಳದಲ್ಲಿ ಸಚಿವರಾಗಿರುವ ಮ್ಯಾಥೂ ಥಾಮಸ್‌, ರಾಜ್ಯಾಧ್ಯಕ್ಷ ಎಚ್‌.ಕೆ.ಕುಮಾರಸ್ವಾಮಿ, ಮಾಜಿ ಸಚಿವರಾದ ಎಚ್‌.ಡಿ.ರೇವಣ್ಣ, ಲೀಲಾದೇವಿ ಆರ್‌.ಪ್ರಸಾದ್‌, ಎಂ.ಎಂ.ನಬಿ, ಕೋನರೆಡ್ಡಿ, ಶೀಲಾನಾಯಕ್‌, ವಿಧಾನಪರಿಷತ್‌ ಸದಸ್ಯರಾದ ಬಿ.ಎಂ.ಫ‌ರೂಕ್‌, ರಮೇಶ್‌ಗೌಡ, ಆರ್‌.ಪ್ರಕಾಶ್‌ ಉಪಸ್ಥಿತರಿದ್ದರು.

ನಿರ್ಣಯ
ಮಹಾಧಿವೇಶನದಲ್ಲಿ ಆರ್ಥಿಕ ಹಾಗೂ ರಾಜಕೀಯ ಸೇರಿ ನಾಲ್ಕು ನಿರ್ಣಗಳನ್ನು ಅಂಗೀಕರಿಸಲಾಯಿತು. ಆರ್ಥಿಕ ನಿರ್ಣಯದಲ್ಲಿ ದೇಶದ ಆರ್ಥಿಕ ವ್ಯವಸ್ಥೆ ಕುಸಿದಿದ್ದು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಆರ್ಥಿಕ ನೀತಿ ಇದಕ್ಕೆ ಕಾರಣ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿ, ಉದ್ಯೋಗ ಸೃಷ್ಟಿ ಆಗುತ್ತಿಲ್ಲ. ಮಧ್ಯಮ ಹಾಗೂ ಬಡವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ದೇಶದ ಆರ್ಥಿಕ ಚೇತರಿಕೆಗೆ ಕೇಂದ್ರ ಸರ್ಕಾರ ನೀತಿ ರೂಪಿಸಬೇಕು. ಕಾರ್ಮಿಕ, ಕೈಗಾರಿಕಾ, ಕೃಷಿ ಕಲ್ಯಾಣ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ.

ರಾಜಕೀಯ ನಿರ್ಣಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜನ ಹಾಗೂ ದೇಶ ವಿರೋಧಿ. ದೇಶಾದ್ಯಂತ ಸಿಎಎ ವಿರುದ್ಧ ಹೋರಾಟಗಳು ನಡೆಯುತ್ತಿವೆ. ದೇಶದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಪ್ರಸಕ್ತ ಸನ್ನಿವೇಶದಲ್ಲಿ ಪ್ರಾದೇಶಿಕ ಪಕ್ಷಗಳು, ಜಾತ್ಯತೀತ ಶಕ್ತಿಗಳು ಒಂದಾಗಿ ಹೋರಾಟ ಮಾಡಬೇಕು. ಕೇಂದ್ರ ಸರ್ಕಾರವು ಜನರ ಭಾವನೆಗೆ ಬೆಲೆ ಕೊಟ್ಟು ತಕ್ಷಣ ಸಿಎಎ ಕಾಯ್ದೆ ವಾಪಸ್‌ ಪಡೆಯಬೇಕು ಎಂದು ಒತ್ತಾಯಿಸಲಾಗಿದೆ.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.