20 ವರ್ಷಗಳಲ್ಲಿ ನಿರ್ಮಾಣಗೊಂಡ ಜೀವವೈವಿಧ್ಯ ತಾಣಕ್ಕೆ ಕುತ್ತು ತರುವ ಸರ್ಕಾರದ ಕ್ರಮ ಖಂಡನೀಯ


Team Udayavani, Oct 4, 2020, 6:28 PM IST

20 ವರ್ಷಗಳಲ್ಲಿ ನಿರ್ಮಾಣಗೊಂಡ ಜೀವವೈವಿಧ್ಯ ತಾಣಕ್ಕೆ ಕುತ್ತು ತರುವ ಸರ್ಕಾರದ ಕ್ರಮ ಖಂಡನೀಯ

ಬೆಂಗಳೂರು : ಜೀವವೈವಿಧ್ಯದ ತಾಣವಾಗಿರುವ ಬೆಂಗಳೂರು ವಿಶ್ವವಿದ್ಯಾಲಯ ಆವರಣದ ಒಟ್ಟು 32 ಎಕರೆ ಪ್ರದೇಶವನ್ನು ಯೋಗ ವಿ.ವಿ ಮತ್ತು ಇತರೆ ಎರಡು ಸಂಸ್ಥೆಗಳಿಗೆ ನೀಡಿರುವ ಸರ್ಕಾರದ ನಿರ್ಧಾರವನ್ನು ತಕ್ಷಣವೇ ವಾಪಸ್ ಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಸುಮಾರು ಎರಡು ದಶಕಗಳಿಂದ ಪರಿಸರ ತಜ್ಞರು ಶ್ರಮವಹಿಸಿ ಬೆಳೆಸಿದ ಈ ತಾಣವನ್ನು ಸರ್ಕಾರ ಯಾವುದೇ ಸಮಾಲೋಚನೆ ನಡೆಸದೆ ಏಕಾಏಕಿ ಜೀವವೈವಿಧ್ಯ ತಾಣಕ್ಕೆ ಕುತ್ತು ತರುವ ನಿರ್ಧಾರ ಕೈಗೊಂಡಿರುವುದು ತೀವ್ರ ಅಪಾಯಕಾರಿ ಎಂದಿದ್ದಾರೆ.

ಹಿರಿಯ ಪರಿಸರ ತಜ್ಞ ಯಲ್ಲಪ್ಪರೆಡ್ಡಿ ಅವರು ತಮಗೆ ಸರ್ಕಾರ ನೀಡಿದ್ದ ಗೌರವ ಡಾಕ್ಟರೇಟ್ ಹಿಂತಿರುಗಿಸುವ ಮೂಲಕ ತಮ್ಮ ಸಾತ್ವಿಕ ಸಿಟ್ಟನ್ನು ಪ್ರಕಟಿಸಿದ್ದಾರೆ. ಇದಕ್ಕೆ ಪರಿಸರ ಪ್ರೇಮಿಗಳು ಬೆಂಬಲವನ್ನೂ ಸೂಚಿಸಿದ್ದಾರೆ ಎಂದಿದ್ದಾರೆ.

ಯೋಗ ವಿ.ವಿ.ಗೆ 15 ಎಕರೆ, ಗುಲ್ಬರ್ಗಾ ವಿ.ವಿ.ಗೆ 15 ಎಕರೆ ಸಿ.ಬಿ.ಎಸ್.ಸಿ. ದಕ್ಷಿಣ ಭಾರತದ ಕಚೇರಿಗೆ 2 ಎಕರೆ ಸೇರಿದಂತೆ ಒಟ್ಟು 32 ಎಕರೆಯನ್ನು ನೀಡಿರುವ ಕ್ರಮದಿಂದ ಬೆಂಗಳೂರು ವಿವಿ ಆವರಣ ಕಾಂಕ್ರೀಟ್ ಕಾಡಾಗಲಿದೆ. ಈ ಸಂಸ್ಥೆಗಳಿಗೆ ಬೇರೆ ಕಡೆ ಸ್ಥಳ ನೀಡುವ ಮೂಲಕ ಈ ಜೀವವೈವಿಧ್ಯ ತಾಣವನ್ನು ಸರ್ಕಾರ ಉಳಿಸಬೇಕು ಎಂದರು.

ಬೆಂಗಳೂರು ವಿವಿ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಸಹಕಾರದಿಂದ ಕಳೆದ 20 ವರ್ಷಗಳಲ್ಲಿ ನಿರ್ಮಾಣಗೊಂಡ ಜೀವವೈವಿಧ್ಯ ವನದ ನಡುವೆ ಮೂರು ಸಂಸ್ಥೆಗಳಿಗೆ ಭೂಮಿ ನೀಡಲು ಮುಂದಾಗಿರುವ ವಿ.ವಿ ಮತ್ತು ಸರ್ಕಾರದ ಕ್ರಮ ಖಂಡನೀಯ. ಇದರಿಂದ “ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ” ಎಂಬಂತೆ ಇಡೀ ಸಸ್ಯ ಸಂಪತ್ತು ನಾಶವಾಗಲಿದೆ.

ಹಿಂದೆ ಉಪಕುಲಪತಿಗಳಾಗಿದ್ದ ಡಾ.ಕೆ.ಸಿದ್ದಪ್ಪನವರು ಇದೊಂದು ಬಯಲು ಪ್ರಯೋಗಾಲಯವಾಗಲಿದೆ ಎಂದು ನಿರೀಕ್ಷಿಸಿ ಜೀವವೈವಿಧ್ಯವನಕ್ಕೆ ಚಾಲನೆ ನೀಡಿದ್ದರು. ಅಂತೆಯೇ ಇದೀಗ ಸಸ್ಯಶಾಸ್ತ್ರ,ಪ್ರಾಣಿಶಾಸ್ತ್ರ, ಭೂಗರ್ಭಶಾಸ್ತ್ರ, ಪರಿಸರ ವಿಜ್ಞಾನ, ಸಾಮಾಜಿಕ ವಿಜ್ಞಾನಗಳ ವಿದ್ಯಾರ್ಥಿಗಳಿಗೆ ಇದೊಂದು ಬಯಲು ಪ್ರಯೋಗಾಲಯವಾಗಿ ನೂರಾರು ಸಂಶೋಧನೆಗಳು ನಡೆಯುತ್ತಿವೆ.

ಇಂತಹ ತಾಣವನ್ನು ಧ್ವಂಸ ಮಾಡಬಾರದು. ಮುಂದಿನ ಪೀಳಿಗೆಗೆ ಉಳಿಸಬೇಕು. ಬೆಳೆಸಬೇಕು.

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.