ಮಹಿಳೆಯರಿಗೆ ಅಪಮಾನ ಮಾಡಿದ್ದೇ ಸದನದ ದಾಖಲೆಯೇ? ರಮೇಶ್‌ ಕುಮಾರ್‌ ವಿರುದ್ಧ HDK ಟೀಕಾ ಪ್ರಹಾರ


Team Udayavani, Dec 18, 2021, 7:46 PM IST

ಮಹಿಳೆಯರಿಗೆ ಅಪಮಾನ ಮಾಡಿದ್ದೇ ಸದನದ ದಾಖಲೆಯೇ? ರಮೇಶ್‌ ಕುಮಾರ್‌ ಮೇಲೆ HDK ಟೀಕಾ ಪ್ರಹಾರ

ನವದೆಹಲಿ: ಎರಡು ಬಾರಿ ಸ್ಪೀಕರ್‌ ಆಗಿದ್ದವರು, ಸಾಂವಿಧಾನಿಕ ಹುದ್ದೆಯಲ್ಲಿದ್ದವರು, ಸ್ವಯಂ ಘೋಷಿತ ಸಂವಿಧಾನ ತಜ್ಞರು ಆಗಿರುವ ರಮೇಶ್‌ ಕುಮಾರ್‌ ಅವರು ಸದನದಲ್ಲಿ ಮಹಿಳೆಯರಿಗೆ ಘೋರ ಅಪಮಾನ ಮಾಡಿದ್ದಾರೆ ಮಾತ್ರವಲ್ಲದೆ; ಮಹಿಳೆಯರ ಜತೆಗೆ ಸಭಾಧ್ಯಕ್ಷ ಪೀಠಕ್ಕೂ ಅಪಮಾನ ಮಾಡಿದ್ದಾರೆ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ನವದೆಹಲಿಯಲ್ಲಿಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಖಡಕ್‌ ಆಗಿ ಉತ್ತರಿಸಿದ ಅವರು; ಎರಡೂ ಸಲ ಸ್ಪೀಕರ್‌ ಆಗಿದ್ದ ಮಹಾನುಭಾವರು ಅದೇ ಪೀಠದಲ್ಲಿ ಕುಳಿತಿದ್ದವರ ಕಲಾಪ ನಡೆಸುವ ಕಷ್ಟ, ಒತ್ತಡದ ಬಗ್ಗೆ ಮಾತನಾಡುವಾಗ ಅವರ ಪರಿಸ್ಥಿತಿಯನ್ನು ಅತ್ಯಾಚಾರಕ್ಕೆ ಒಳಗಾಗುವ ಅಸಹಾಯಕ ಮಹಿಳೆಗೆ ಹೋಲಿಸುವ ಮೂಲಕ ಸಂವಿಧಾನದತ್ತವಾದ ಸಭಾಧ್ಯಕ್ಷರ ಪೀಠಕ್ಕೆ ಕ್ಷಮಾರ್ಹವಲ್ಲದ ಅಪಮಾನ ಮಾಡಿದ್ದಾರೆ. ಜತೆಗೆ, ಸದನದಲ್ಲಿ ಮಹಿಳೆಯರಿಗೂ ಅಪಮಾನ ಮಾಡಿದ್ದಾರೆ. ಕೆಟ್ಟ ಶಬ್ದಗಳನ್ನು ಬಳಕೆ ಮಾಡುವ ಮೂಲಕ ಇಡೀ ಸ್ತ್ರೀ ಕುಲವನ್ನೇ ಹಿಯ್ಯಾಳಿಸಿದ್ದಾರೆ. ಬುದ್ಧಿಜೀವಿಯ ಸೋಗಿನಲ್ಲಿ ತಮ್ಮ ವಿಕೃತಿ ಪ್ರದರ್ಶನ ಮಾಡಿದ್ದಾರೆ. ಅವರು ಪದೇ ಪದೆ ಇದನ್ನೇ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಕುಟುವಾಗಿ ಟೀಕಿಸಿದರು.

ಕಲಾಪ ನಡೆಸುವ ಒತ್ತಡದಲ್ಲಿರುವ ಸಭಾಧ್ಯಕ್ಷರ ಪೀಠದ ಎದುರೇ ಈ ರೀತಿ ಅಸಭ್ಯವಾಗಿ ಮಾತನಾಡುವುದು ಸರಿಯಲ್ಲ, ಇದು ಸಂಸದೀಯ ವ್ಯವಸ್ಥೆಗೆ ಭೂಷಣವಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಇದನ್ನೂ ಓದಿ : ಬಾಗಲಕೋಟೆ : ಹೆದ್ದಾರಿ ತಡೆದು, ಟಯರ್ ಗೆ ಬೆಂಕಿ ಹಚ್ಚಿ ದಿಢೀರ್ ಪ್ರತಿಭಟನೆ

ಸದನದ ಕಲಾಪದಲ್ಲಿ ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಯಾವ ವಿಚಾರಗಳು ಚರ್ಚೆಯಾಗಿವೆ. ಕಲಾಪದಲ್ಲಿ ಏನೆಲ್ಲಾ ಚರ್ಚೆ ಆಗಿದೆ ಎನ್ನುವುದನ್ನು ನಾನು ಗಮನಿಸಿದ್ದೇನೆ. ನನ್ನ ತಂದೆಯವರ ಜೀವನ ಚರಿತ್ರೆ ಪುಸ್ತಕ ಬಿಡುಗಡೆ ಹಾಗೂ ನನ್ನ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ನಾನು ಮೊದಲೇ ಸ್ಪೀಕರ್ ಅವರ ಬಳಿ ಅನುಮತಿ ಪಡೆದು ದೆಹಲಿಗೆ ಬಂದಿದ್ದೇನೆ. ಕಲಾಪದಲ್ಲಿ ನಡೆಯುತ್ತಿರುವ ಪ್ರತಿಯೊಂದನ್ನು ನಾನು ನೋಡುತ್ತಿದ್ದೇನೆ. ರಾಜ್ಯದ ಅನುಭವಿ ರಾಜಕಾರಣಿ, ಸ್ಪೀಕರ್ ಆಗಿದ್ದವರು ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಈ ವಿಚಾರದಲ್ಲಿ ರಮೇಶ್ ಕುಮಾರ್ ಅವರ ಮಾತು, ಸ್ಪೀಕರ್ ನಡೆದುಕೊಂಡ ರೀತಿ ಖಂಡನೀಯ. ಮಹಿಳೆಯರ ಬಗ್ಗೆ ಮಾತನಾಡುವಾಗ ಆ ಪದ ಬಳಕೆ ಅಗತ್ಯ ಏನಿತ್ತು? ಮೊದಲು ಮಾತನಾಡಿ ನಂತರ ಕ್ಷಮೆ ಕೋರಿದರೆ ಮುಗಿಯುವುದಿಲ್ಲ. ಇವರೆಲ್ಲಾ ಪಾರ್ಲಿಮೆಂಟರಿ ವ್ಯವಸ್ಥೆಯನ್ನು ಕುಲಗೆಡಿಸುತ್ತಿದ್ದಾರೆ. ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿರುವುದೇ ಸದನದ ದಾಖಲೆಯೇ? ಮಂಗಳವಾರದಿಂದ ನಾನು ಸದನದಲ್ಲಿ ಭಾಗವಹಿಸುತ್ತಿದ್ದೇನೆ. ಒಂದು ವೇಳೆ ಈ ವಿಚಾರ ಬಂದರೆ ನಾನು ಮಾತನಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.